ಸೋಂಕಿತರಾದವರ ಮಾನಸಿಕ ಆರೋಗ್ಯ ಹೆಚ್ಚಳದತ್ತ ಆರೋಗ್ಯ ಇಲಾಖೆ ಒಲವು


Team Udayavani, Feb 9, 2022, 6:15 AM IST

ಸೋಂಕಿತರಾದವರ ಮಾನಸಿಕ ಆರೋಗ್ಯ ಹೆಚ್ಚಳದತ್ತ ಆರೋಗ್ಯ ಇಲಾಖೆ ಒಲವು

ಬೆಂಗಳೂರು: ಕೋವಿಡ್‌ನಿಂದಾಗಿ ಖಿನ್ನತೆ ಸೇರಿದಂತೆ ಇತರ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತುರ್ತು ಆಪ್ತಸಮಾಲೋಚನೆ ನೀಡುವ ನಿಟ್ಟಿನಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕೇಂದ್ರ, ಸರಕಾರಿ ಹಾಗೂ ಖಾಸಗಿ ಮೆಡಿಕಲ್‌ ಕಾಲೇಜುಗಳ ಸಹಭಾಗಿತ್ವದಲ್ಲಿ ಆಪ್ತ ಸಮಾಲೋಚನೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಕೋವಿಡ್‌ ಬಳಿಕ ರಾಜ್ಯದಲ್ಲಿ ಮಾಸಿಕ ಆರೋಗ್ಯ ಸಮಸ್ಯೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಇದರಿಂದ ಖಿನ್ನತೆ ಸೇರಿದಂತೆ ಇತರೆ ಮಾನಸಿಕ ಸಮಸ್ಯೆಗಳಿಗೆ ಒಳಗಾಗುವವರ ಸಂಖ್ಯೆ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್‌ ತಾಂತ್ರಿಕ ಸಮಿತಿ ನೀಡಿದ ಸಲಹೆ ಅನ್ವಯ ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.

ಮೂರು ವಿಂಗಡನೆ
ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರನ್ನು ಮೂರು ವಿಭಾಗದಲ್ಲಿ ವಿಂಗಡಿಸಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಅದರ ಅನ್ವಯ ಸೋಂಕಿತ ವ್ಯಕ್ತಿಯಲ್ಲಿ ಕಂಡು ಬರುವ ನೋವೋ ಸೈಕಾಲೋಜಿಕಲ್‌ ಸಮಸ್ಯೆ, ಸೋಂಕಿಗೆ ತುತ್ತಾಗುವ ಮೊದಲೇ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಾಗೂ ಈಗಾಗಲೇ ಮಾನಸಿಕ ಸಮಸ್ಯೆಯೊಂದಿಗೆ ಬಳಲುತ್ತಿದ್ದು, ಸೋಂಕು ದೃಢಗೊಂಡ ಬಳಿಕ ಇತರ ಮಾನಸಿಕ ಅನಾರೋಗ್ಯ ಕಾಣಿಸಿಕೊಂಡವರಿಗೆ ಆದ್ಯತೆ ಮೇರೆಗೆ ಚಿಕಿತ್ಸೆ ನೀಡಲಾಗುತ್ತದೆ.

ಆರೋಗ್ಯಾಧಿಕಾರಿಗಳಿಗೆ ಜವಾಬ್ದಾರಿ
ಆಪ್ತ ಸಮಾಲೋಚನೆ ನೀಡಲು ಎಲ್ಲ ಜಿಲ್ಲೆಗಳ ಆರೋಗ್ಯ ಇಲಾಖೆ, ಜಿಲ್ಲೆ, ತಾಲೂಕು ಮಟ್ಟದ ಮಾನಸಿಕ ಆರೋಗ್ಯಾಧಿಕಾರಿಗಳ ಸಮಿತಿ, ಸರಕಾರಿ ಹಾಗೂ ಖಾಸಗಿ ಮೆಡಿಕಲ್‌ ಕಾಲೇಜು ಸಿಬಂದಿ ಸಹಭಾಗಿತ್ವ ನೀಡಲಿದ್ದಾರೆ. ಈ ತಂಡ ಪ್ರತಿನಿತ್ಯ ಯಾರು ಯಾವ ಪ್ರದೇಶದಲ್ಲಿ ಎಷ್ಟು ಮಂದಿಗೆ ಆಪ್ತ ಸಮಾಲೋಚನೆ ಮಾಡಬೇಕು ಎನ್ನುವುದನ್ನು ನಿರ್ಧರಿಸಲಿದೆ. ಮಾನಸಿಕ ಸಮಸ್ಯೆಗೆ ಒಳಗಾದವರನ್ನು ನಿತ್ಯ ಭೇಟಿ ಮಾಡಲಿದೆ. ಇದರ ಸಂಪೂರ್ಣ ಜವಾಬ್ದಾರಿ ಆಯಾ ಜಿಲ್ಲಾ ಆರೋಗ್ಯ, ಮೆಡಿಕಲ್‌ ಕಾಲೇಜು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿಗಳ ಮೇಲಿರಲಿದೆ. ಆಪ್ತ ಸಮಾಲೋಚನೆಗೆ ಒಳಗಾದ ವ್ಯಕ್ತಿಯ ಮಾಹಿತಿಯನ್ನು ದಾಖಲೀಕರಣ ಮಾಡಲಾಗುತ್ತದೆ. ಆಸ್ಪತ್ರೆಗಳಲ್ಲಿ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ನೀಡಲಾಗುವ ಎಲ್ಲ ಅಗತ್ಯ ಔಷಧ ಸರಬರಾಜಿಗೆ ಗಮನ ನೀಡಲಾಗುತ್ತಿದೆ.

ತಂತ್ರಜ್ಞಾನದ ಗೀಳು 30 ಪಟ್ಟು ಏರಿಕೆ
ಕೊವೀಡ್‌ ಒಂದನೇ ಹಾಗೂ ಎರಡನೇ ಅಲೆಯ ಸಂದರ್ಭ ಯಾವುದೇ ಕಾರಣವಿಲ್ಲದೆ ಆತಂಕಕ್ಕೆ ಒಳಗಾಗುತ್ತಿದ್ದರು. ವರ್ಕ್‌ ಫ್ರಂ ಹೋಂ ಒತ್ತಡದಿಂದ 25ರಿಂದ 35 ವಯೋಮಾನದವರು ಅತಿಯಾದ ಮದ್ಯ ಸೇವನೆ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಮೂರನೇ ಅಲೆಯಲ್ಲಿ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಟೆಕ್ನಾಲಜಿ ಗೀಳು 30 ಪಟ್ಟು ಏರಿಕೆಯಾಗಿದೆ. ಖನ್ನತೆಯಿಂದ ಬಳಲುತ್ತಿರುವ ಸಂಖ್ಯೆ ಹೆಚ್ಚಾಗಿದೆ ಎಂದು ಮಣಿಪಾಲ ಆಸ್ಪತ್ರೆಯ ಕ್ಲಿನಿಕಲ್‌ ಸೈಕಾಲಜಿಸ್ಟ್‌ ಸತೀಶ್‌ ಕುಮಾರ್‌ ಹೇಳಿದ್ದಾರೆ.

ಸೋಂಕಿತರಿಗೆ ಹೋಂ ಐಸೊಲೇಶನ್‌ ಒಳಗಾದ ಮೊದಲ ಹಾಗೂ 3ನೇ ದಿನ ಟೆಲಿಕಾಲ್‌ ಮೂಲಕ ಸಂಪರ್ಕಿಸಲಾಗುತ್ತಿದ್ದು, ಈ ವೇಳೆಅಗತ್ಯವಿರುವವರಿಗೆ ಆಪ್ತ ಸಮಾಲೋಚನೆ ಮಾಡಲಾಗುತ್ತಿದೆ. ಇದರ ಹೊರತಾಗಿಯು ಮಾನಸಿಕ ಆರೋಗ್ಯದಿಂದ ಬಳಲುತ್ತಿರುವವರಿಗೆ ನೇರವಾಗಿ ಸರಕಾರಿ ಆಸ್ಪತ್ರೆಗಳಲ್ಲಿ ಆಪ್ತ ಸಮಾಲೋಚನೆ ಮಾಡಲಾಗುತ್ತದೆ.
-ಡಾ| ರಜನಿ ಪಿ.,
ಉಪನಿರ್ದೇಶಕಿ, ಮಾನಸಿಕ ಆರೋಗ್ಯ ವಿಭಾಗ

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.