ಕೋವಿಡ್‌ 19 ಸಂಪರ್ಕಿತರ ಪತ್ತೆಗೆ ಸಿಕ್ಕಿತು ರಾಷ್ಟ್ರ ಮನ್ನಣೆ


Team Udayavani, Jun 21, 2020, 6:06 AM IST

corona-samparkitaru

ಬೆಂಗಳೂರು: ಕೋವಿಡ್‌ 19 ಸೋಂಕಿತರ ಸಂಪರ್ಕಕ್ಕೆ ಬಂದವರನ್ನು 24 ಗಂಟೆಯಲ್ಲಿ ಪತ್ತೆ ಹಚ್ಚಿ ಕೋವಿಡ್‌ 19 ಹರಡುವಿಕೆ ವೇಗ ನಿಯಂತ್ರಿಸುವಲ್ಲಿ ಶ್ರಮಿಸಿದ ರಾಜ್ಯದ ಕೋವಿಡ್‌ 19 ವಾರ್‌ ರೂಂ ತಂಡದ ಕಾರ್ಯಕ್ಕೆ ಮೆಚ್ಚುಗೆ  ವ್ಯಕ್ತವಾಗಿದೆ. ಹಿರಿಯ ಐಎಎಸ್‌ ಅಧಿಕಾರಿ ಮೌನೀಶ್‌ ಮೌದ್ಗಿಲ್‌ ನೇತೃತ್ವದಲ್ಲಿ 5 ಜನ ತಂತ್ರಜ್ಞರ ತಂಡ ಯಾವುದೇ ಖಾಸಗಿ ಐಟಿ ಸಂಸ್ಥೆ ಮೊರೆ ಹೋಗದೆ ಕೋವಿಡ್‌ 19 ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚಲು ಕಾಂಟ್ಯಾಕ್ಟ್ ಟ್ರೇಸಿಂಗ್‌ ಆ್ಯಪ್‌ ಅಭಿವೃದ್ಧಿ ಪಡಿಸಿ ಅದರ ಮೂಲಕ ಕೋವಿಡ್‌ 19 ಪಾಸಿಟಿವ್‌ ರೋಗಿಗಳ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳನ್ನು 24 ಗಂಟೆಯಲ್ಲಿ ಪತ್ತೆ ಹಚ್ಚುವ ಕೆಲಸ ಮಾಡಿದ್ದಾರೆ.

ಹೇಗೆ ಪತ್ತೆ?: ಕೋವಿಡ್‌ 19 ಸೋಂಕಿತ ವ್ಯಕ್ತಿಯಿಂದ ತಾನು ಕಳೆದ 48 ಗಂಟೆ  ಗಳಲ್ಲಿ ಯಾರೊಂದಿಗೆ ಹತ್ತಿರದಿಂದ ಮಾತನಾಡಿರುವುದು, ಒಂದು ಮೀಟರ್‌ ಅಂತರದಲ್ಲಿ ಭೇಟಿಯಾಗಿ ಮಾತನಾಡಿರುವುದು, ಕನಿಷ್ಠ 15 ನಿಮಿಷ  ಒಬ್ಬರ  ಜೊತೆಯಲ್ಲಿ ನಿಂತಿರುವುದು, ಕುಟುಂಬ ಸದಸ್ಯರ ಜೊತೆ ಕಾಲ ಕಳೆದಿರುವ ಹಾಗೂ ಮುಖಕ್ಕೆ ಮುಖ ಕೊಟ್ಟು ಮಾತನಾಡಿರುವ ಬಗ್ಗೆ ಮಾಹಿತಿ ಪಡೆದು ಅವರು ಹೇಳುವ ಮಾಹಿತಿಯನ್ನು ಕಾಂಟ್ಯಾಕ್ಟ್ ಟ್ರೇಸಿಂಗ್‌ ಆಪ್‌ನಲ್ಲಿ ಅಪ್‌ ಲೋಡ್‌ ಮಾಡಿ, ಸಂಪರ್ಕಿತರು ಎಲ್ಲಿಯೇ ಇದ್ದರೂ 24 ಗಂಟೆಯಲ್ಲಿ ಪತ್ತೆ ಹಚ್ಚಲಾಗುತ್ತಿದೆ.

ಇದಕ್ಕಾಗಿ ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಪೌರಾಡಳಿತ, ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ ಸಿಬ್ಬಂದಿ ಸೇರಿ ಸುಮಾರು 10 ಸಾವಿರ ಕಾರ್ಯ  ಕರ್ತರು ಕಾಂಟ್ಯಾಕ್ಟ್ ಟ್ರೇಸರ್‌ ಗಳಾಗಿ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ತಂಡ ರಾಜ್ಯದ 1.05 ಕೋಟಿ ಕುಟುಂಬಗಳನ್ನು ಈ ಆ್ಯಪ್‌ ಮೂಲಕ ಸಂಪರ್ಕಿಸಿ ಸುಮಾರು 1  ಲಕ್ಷಕ್ಕೂ ಹೆಚ್ಚು ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಿದ್ದಾರೆ. ಈ ವ್ಯವಸ್ಥೆಯನ್ನು ದೇಶದಲ್ಲೆಡೆ ಅಳವಡಿಸಿಕೊಳ್ಳುವಂತೆ ಕೇಂದ್ರ ಸರ್ಕಾರವೇ ಇತರ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಕೋವಿಡ್‌ 19 ಸೋಂಕಿತರಿಂದ ಮಾಹಿತಿ ಪಡೆದು ಕಾಂಟ್ಯಾಕ್ಟ್ ಟ್ರೇಸರ್‌ ಆ್ಯಪ್‌ ಮೂಲಕ ಸಂಪರ್ಕಿತರನ್ನು 24 ಗಂಟೆಯಲ್ಲಿ ಪತ್ತೆ ಹಚ್ಚಲಾಗುತ್ತಿದೆ. ದೇಶದ ಯಾವ ರಾಜ್ಯದಲ್ಲಿಯೂ ಈ ವ್ಯವಸ್ಥೆ ಜಾರಿಯಲ್ಲಿ ಇಲ್ಲ. ಇದು ನಮಗೆ  ರೋಗಿಗಳ ಸಂಪರ್ಕಿತರನ್ನು ವೇಗವಾಗಿ ಪತ್ತೆ ಹಚ್ಚಲು ಸಹಾಯವಾಗಿದೆ.
-ಮೌನಿಷ್‌ ಮೌದ್ಗಿಲ್‌, ಕೋವಿಡ್‌ 19 ವಾರ್‌ ರೂಂ ಮುಖ್ಯಸ್ಥ

ಕೋವಿಡ್‌ 19 ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಇದು ರಾಜ್ಯ ಸರ್ಕಾರ ಕೋವಿಡ್‌ 19 ನಿಯಂತ್ರಿಸಲು ತಂತ್ರಜ್ಞಾನ ಬಳಸಿಕೊಂಡು ಜಾರಿಗೊಳಿಸಿದ ನೀತಿ ಹಾಗೂ ಉತ್ತಮ  ಆಡಳಿತ ಪರಿಣಾಮ. ರಾಜ್ಯದ ಕೋವಿಡ್‌ 19 ವಾರಿಯರ್ಸ್‌ ತಂಡಕ್ಕೆ ಅಭಿನಂದನೆಗಳು.
-ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

* ಶಂಕರ ಪಾಗೋಜಿ

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.