ಸಿದ್ದರಾಮಯ್ಯ ಮುಂದೆ ತಲೆಬಾಗಿ ನಿಂತ ಶಿಷ್ಯರು


Team Udayavani, Dec 15, 2019, 3:07 AM IST

siddrama

ಬೆಂಗಳೂರು: ಹೃದಯ ಸಂಬಂಧಿ ಖಾಯಿಲೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ವಿರುದ್ಧವೇ ಬಂಡಾಯ ಸಾರಿ ಪಕ್ಷ ತೊರೆದಿದ್ದ “ಎಸ್‌ಬಿಎಂ’ ಎಂದೇ ಕರೆಯಲ್ಪಡುವ ಬಿಜೆಪಿಯ ಆಪ್ತ ಶಾಸಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಸಿದ್ದರಾಮಯ್ಯನವರ ಮುಂದೆ ಮೂವರೂ ಕೈ ಕಟ್ಟಿಕೊಂಡು, ತಲೆಬಾಗಿಸಿ ನಿಂತು ಅಳುಕಿನಿಂದಲೇ ಆರೋಗ್ಯ ವಿಚಾರಿಸಿದ್ದಾರೆ. ಸಿದ್ದರಾಮಯ್ಯ ಕುಳಿತುಕೊಳ್ಳುವಂತೆ ಸೂಚಿಸಿದರೂ ಕೈ ಮುಗಿದು ನಿಂತುಕೊಂಡೇ ಮಾತನಾಡಿದ್ದಾರೆಂದು ತಿಳಿದು ಬಂದಿದೆ.

ಮೂವರೂ ಶಿಷ್ಯರು ತಾವು ಅಡ್ಮಿಟ್‌ ಆಗಿರುವ ವಾರ್ಡ್‌ಗೆ ಆಗಮಿಸುತ್ತಿದ್ದಂತೆ “ಏನ್ನಯ್ಯಾ ಎಲ್ಲರೂ ಬಂದಿದ್ದೀರಿ’ ಎಂದು ಹಳೆಯ ಶಿಷ್ಯರ ಮೇಲಿನ ಮುನಿಸು ಮರೆತು ಆತ್ಮೀಯತೆಯಿಂದಲೇ ಪ್ರಶ್ನಿಸಿದರು. ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌ ಹಾಗೂ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌ ಅವರು ಸಿದ್ದು ಪ್ರಶ್ನೆಗೆ ಮರು ಮಾತನಾಡದೇ ಕೈ ಕಟ್ಟಿಕೊಂಡು ಮೌನವಾಗಿ ನಿಂತಿದ್ದರು ಎನ್ನಲಾಗಿದೆ.

ಆದರೆ, ಶಾಸಕ ಮುನಿರತ್ನ “ನೀವು ನಮ್ಮ ನಾಯಕರು, ನಿಮ್ಮ ಆರೋಗ್ಯ ವಿಚಾರಿಸೋಕೆ ಬಂದ್ವಿ, ಆರಾಮ್‌ ಅಲ್ವಾ ಸರ್‌’ ಎಂದು ಕೈ ಮುಗಿದಿದ್ದು, “ನಾನು ಆರಾಮ್‌ ಇದೀನಿ, ನಾಯಕರು ಅಂತ ಹೇಳ್ತಾನೇ ಕೈ ಕೊಟ್ಟು ಹೋದ್ರಲ್ಲಪ್ಪಾ?’ ಎಂದು ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಮುನಿರತ್ನ ಅವರು ತಾವು ಪಕ್ಷ ತೊರೆಯಲು ಕಾರಣವಾದ ಅಂಶಗಳನ್ನು ಸಿದ್ದರಾಮಯ್ಯಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲು ಮುಂದಾಗಿದ್ದರು ಎನ್ನಲಾಗಿದ್ದು,

ಆದರೆ, ಸಿದ್ದರಾಮಯ್ಯ “ಅದೆಲ್ಲವನ್ನು ಈಗೇಕೆ ಮಾತನಾಡುತ್ತೀರಿ, ಈಗ ಅದನ್ನೆಲ್ಲಾ ನಾನು ಕೇಳಿದ್ನಾ. ಈಗ ನೀವೆಲ್ಲ ಲೀಡರ್‌ಗಳಾಗಿದ್ದೀರಿ. ಶಾಸಕರಾಗಿ ಆಯ್ಕೆಯಾಗಿದ್ದೀರಿ. ನಿಮಗೆಲ್ಲ ಒಳ್ಳೆಯದಾಗ್ಲಿ, ಹೋಗಿ ಬನ್ನಿ’ ಎಂದು ತಮ್ಮ ಮಾಜಿ ಶಿಷ್ಯಂದರಿಗೆ ಆತ್ಮೀಯತೆಯಿಂದಲೇ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಭೇಟಿ ನಂತರ ಮಾತನಾಡಿದ ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌, “ನಾವು ಮೂರು ಜನ ಸೇರಿ ಸಿದ್ದರಾಮಯ್ಯ ಅವರ ಬಳಿ ಮಾತನಾಡಬೇಕೆಂದು ಕೊಂಡಿದ್ದೇವು. ಈಗ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿದು ಯೋಗಕ್ಷೇಮ ವಿಚಾರಿಸಲು ಬಂದಿದ್ವಿ. ನಮ್ಮ ನಾಯಕರಿಗೆ ಭಗವಂತ ಆರೋಗ್ಯ, ಆಯಸ್ಸು ಕೊಟ್ಟು ಕಾಪಾಡಲಿ.

ಅವರು ಮೊದಲಿನಂತೆ ದಿನದ ಇಪ್ಪತ್ನಾಲ್ಕು ಗಂಟೆಯೂ ಕೆಲಸ ಮಾಡುವಂತೆ ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ’ ಎಂದು ಹೇಳಿದರು. “ನಾವು ಕಾಂಗ್ರೆಸ್‌ ಬಿಟ್ಟ ನಂತರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಆಗಿರಲಿಲ್ಲ. ಈಗ ಅವರು ಆಸ್ಪತ್ರೆಯಲ್ಲಿದ್ದಾರೆ. ಮಾನವೀಯ ದೃಷ್ಟಿಯಿಂದ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇವೆ. ನಾವು ಯಾವುದೇ ರಾಜಕೀಯ ಚರ್ಚೆ ಮಾಡಲಿಲ್ಲ. ಅವರೂ ಆ ಬಗ್ಗೆ ಮಾತನಾಡಿಲ್ಲ’ ಎಂದರು.

“ನಮ್ಮನ್ನು ಇದುವರೆಗೂ ಎಲ್ಲರೂ ಅನರ್ಹರು ಎಂದು ಕರೆಯುತ್ತಿದ್ದರು. ಈಗ ಅರ್ಹರಾಗಿದ್ದೇವೆ. ಅದೇ ನಮಗೆ ಖುಷಿ ತಂದಿದೆ. ನಮ್ಮನ್ನು ಮಂತ್ರಿ ಮಾಡುವುದು, ಬಿಡುವುದು ಮುಖ್ಯಮಂತ್ರಿಗೆ ಬಿಟ್ಟದ್ದು. ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ’ ಎಂದು ಹೇಳಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.