ಮಹಾರಾಷ್ಟ್ರದಿಂದ ಆಗಮಿಸುವವರಲ್ಲಿ ಜಿಲ್ಲೆಯವರೇ ಹೆಚ್ಚು

ಬೆಳಗಾವಿ ಗಡಿಯಲ್ಲಿ ಉಡುಪಿ ಜಿಲ್ಲಾಡಳಿತ ತಂಡದ ಕೆಲಸ

Team Udayavani, May 14, 2020, 5:19 AM IST

ಮಹಾರಾಷ್ಟ್ರದಿಂದ ಆಗಮಿಸುವವರಲ್ಲಿ ಜಿಲ್ಲೆಯವರೇ ಹೆಚ್ಚು

ಉಡುಪಿ: ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬರುವ ಸಾರ್ವಜನಿಕರಿಗೆ ರಾಜ್ಯಕ್ಕೆ ಪ್ರವೇಶಿಸಲು ಅಗತ್ಯ ನೆರವು ನೀಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಜಿ.ಜಗದೀಶ್‌ ಅವರ ಸೂಚನೆಯಂತೆ ಉಡುಪಿಯಿಂದ ತೆರಳಿರುವ ಅಧಿಕಾರಿಗಳ ತಂಡ ಬೆಳಗಾವಿಯ ಗಡಿಭಾಗವಾದ ನಿಪ್ಪಾಣಿ ಸಮೀಪದ ಕುಗ್ಗನಹಳ್ಳಿ ಚೆಕ್‌ಪೋಸ್ಟ್‌ ನಲ್ಲಿ ತೆರೆದಿರುವ ಸಹಾಯಕೇಂದ್ರದಲ್ಲಿ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ.

ಮಹಾರಾಷ್ಟ್ರದಿಂದ ಬರುವ ಜಿಲ್ಲೆಯ ನಾಗರಿಕರ ಉಡುಪಿ ಜಿಲ್ಲೆಯಲ್ಲಿನ ವಿಳಾಸದ ಕುರಿತು ಪರಿಶೀಲನೆ ನಡೆಸಿ ಅದನ್ನು ದೃಢೀಕರಿಸಿ ಅವರು ರಾಜ್ಯ ಪ್ರವೇಶಿಸಲು ತಂಡ ಸಹಾಯ ಮಾಡುತ್ತಿದೆ. ಉಡುಪಿ ಜಿಲ್ಲೆಗೆ ಆಗಮಿಸಿದ ಅನಂತರದ ಇಲ್ಲಿನ ಕ್ವಾರಂಟೈನ್‌ ಕ್ರಮಗಳು, ಜಿಲ್ಲಾಡಳಿತದಿಂದ ಒದಗಿಸುವ ಸೌಲಭ್ಯಗಳು ಮತ್ತಿತರ ಅಗತ್ಯ ಮಾಹಿತಿಯನ್ನು ನೀಡಿ ಅವರ ಅನಗತ್ಯ ಆತಂಕವನ್ನು ದೂರ ಮಾಡುತ್ತಿದೆ. ಮುಖ್ಯವಾಗಿ ಅವರು ನಿರಾಳವಾಗಿ ಜಿಲ್ಲೆಗೆ ತಲುಪಲು ಬೇಕಾದ ವ್ಯವಸ್ಥೆ ಮಾಡಲಾಗುತ್ತಿದೆ. ಆಗಮಿಸುತ್ತಿರುವ ಸಾರ್ವಜನಿಕರ ಸಂಪೂರ್ಣ ವಿವರಗಳನ್ನು ಅವರು ಜಿಲ್ಲೆಗೆ ತಲುಪುವ ಮೊದಲೇ ಜಿಲ್ಲಾಡಳಿತಕ್ಕೆ ತಲುಪಿಸಲಾಗುತ್ತಿದೆ.

ಮೊದಲು ಬೆಳಗಾವಿ ಜಿಲ್ಲಾಡಳಿತದ ತಂಡಕ್ಕೆ ಬರುವವರನ್ನು ನಿಭಾಯಿಸುವುದು ಕಷ್ಟಕರವಾಗಿತ್ತು. ಹೀಗಾಗಿ ಅಲ್ಲಿನ ಜಿಲ್ಲಾಡಳಿತ ಉಡುಪಿ ಜಿಲ್ಲಾಡಳಿತಕ್ಕೆ ಪತ್ರ ಬರೆದು ಸಹಕರಿಸಲು ಕೋರಿತ್ತು. ಅದರಂತೆ ಮೇ 11ರಿಂದ ಈ ತಂಡವನ್ನು ಕಳುಹಿಸಲಾಯಿತು. ಪ್ರಾಯಃ ಮೇ 16ರ ವರೆಗೆ ಇಲ್ಲಿ ಕಾರ್ಯ ನಿರ್ವಹಿಸಬೇಕಾಗುವ ಸಾಧ್ಯತೆ ಇದೆ.

10 ಜಿಲ್ಲೆಗಳ ತಂಡಗಳು
ಮೈಸೂರು, ಕೊಡಗು, ದ.ಕ., ಉಡುಪಿ, ಮಂಡ್ಯ ಹೀಗೆ ವಿವಿಧ ಜಿಲ್ಲೆಗಳಿಗೆ ಮಹಾರಾಷ್ಟ್ರದಿಂದ ಬರುತ್ತಿದ್ದಾರೆ. ಮುಖ್ಯವಾಗಿ ಬರುವವರು ಮುಂಬೈ ನಿವಾಸಿಗಳು. ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆಗೆ ಅತಿ ಹೆಚ್ಚು ಜನರು ಬರುತ್ತಿದ್ದಾರೆ. ಪ್ರಸ್ತುತ ಉಡುಪಿ ಜಿಲ್ಲೆಗೆ ಪ್ರತಿನಿತ್ಯ ಬರುವವರ ಸಂಖ್ಯೆ ಸುಮಾರು 600. ದ.ಕ. ಜಿಲ್ಲೆಗೆ ಬರುವವರ ಸಂಖ್ಯೆ 30ರಿಂದ 40 ಅಷ್ಟೆ, ಮೈಸೂರಿಗೆ ಮೂರ್‍ನಾಲ್ಕು ಜನರು ಬರುತ್ತಿದ್ದಾರೆ. ಬೆಳಗಾವಿ ಜಿಲ್ಲಾಡಳಿತ ಕೋರಿದಂತೆ 19 ಜಿಲ್ಲೆಗಳ ಪೈಕಿ ಹತ್ತು ಜಿಲ್ಲಾಡಳಿತದಿಂದ ಮಾತ್ರ ತಂಡವನ್ನು ಕಳುಹಿಸಲಾಗಿದೆ.

ಕಾಯಬೇಕಾದ ಸಮಯ ಇಳಿಕೆ
ಬೆಳಗಾವಿಯ ಸರಕಾರಿ ನೌಕರರಿಗೆ ಸಾರ್ವಜನಿಕರು ಹೇಳುವ ಉಡುಪಿ ಜಿಲ್ಲೆಯ ತಾಲೂಕು, ಗ್ರಾಮಗಳ ಹೆಸರುಗಳನ್ನು ಸರಿಯಾಗಿ ಗುರುತಿಸಲು ಆಗುತ್ತಿರಲಿಲ್ಲ. ಈಗ ಉಡುಪಿಯಿಂದ ಹೋದ ತಂಡವೇ ಕಂಪ್ಯೂಟರ್‌ನಲ್ಲಿ ಸುಲಭವಾಗಿ ನಿರ್ವಹಿಸುತ್ತಿದೆ. ಹೀಗಾಗಿ ಹಿಂದೆ ಐದಾರು ಗಂಟೆ ಕಾಲ ಕಾಯ ಬೇಕಾಗಿದ್ದ ಸಾರ್ವಜನಿಕರು ಈಗ ಅರ್ಧ, ಒಂದು ಗಂಟೆಯೊಳಗೆ ಗಡಿಯೊಳಗೆ ಬರಬಹುದಾಗಿದೆ. ಇಲ್ಲಿ ದೇಹದ ಉಷ್ಣಾಂಶ ಪರೀಕ್ಷೆಯೂ ನಡೆಯುತ್ತಿದ್ದು ಜ್ವರವೇನಾದರೂ ಇದ್ದಲ್ಲಿ ವಾಪಸು ಕಳುಹಿಸಲಾಗುತ್ತದೆ. ಸೀಲ್‌ ಹಾಕುವ ಕೆಲಸವೂ ನಡೆಯುತ್ತಿದೆ. ತಂಡವು ಬೆಳಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಕೆಲಸ ಮಾಡುತ್ತಿದೆ. ರಾತ್ರಿ ಉಳಿದುಕೊಳ್ಳುವ ವ್ಯವಸ್ಥೆಯನ್ನು ಚೆಕ್‌ಪೋಸ್ಟ್‌ನಿಂದ 80 ಕಿ.ಮೀ. ದೂರದಲ್ಲಿರುವ ಚಿಕ್ಕೋಡಿಯಲ್ಲಿ ಮಾಡಲಾಗಿದೆ.

ತಂಡದ ಸದಸ್ಯರು
ತಂಡದಲ್ಲಿ ಯುವ ಸಶಕ್ತೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್‌ ಕುಮಾರ್‌ ಮತ್ತು ಸಹಾಯಕರಾಗಿ ಜಿಲ್ಲಾ ನಗರಾಭಿವೃಧಿª ಕೋಶದ ಕಾಶೀನಾಥ್‌ ಕಾರ್ಯ ನಿರ್ವಹಿಸುತ್ತಿದ್ದಾರೆ.

ಹೆಚ್ಚಬಹುದು
ಈಗ ಸದ್ಯ ಸ್ವಂತ ವಾಹನ ಅಥವಾ ಬಾಡಿಗೆ ವಾಹನಗಳಲ್ಲಿ ಜನರು ಬರುತ್ತಿದ್ದಾರೆ. ಮುಂದೆ ಬಸ್‌, ರೈಲಿನಲ್ಲಿ ಬರಲು ಅನುಮತಿ ಕೊಟ್ಟರೆ ಆಗಮಿಸುವವರ ಸಂಖ್ಯೆ ಇನ್ನಷ್ಟು ಹೆಚ್ಚಬಹುದು.
-ಡಾ|ರೋಶನ್‌ ಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.