ಅರವತ್ತು ದಿನಗಳಾದರೂ ಡಿವೈಡರ್‌ ಬೀದಿ ದೀಪ ಬೆಳಗಲಿಲ್ಲ !

ಬೆಳಕು ನೀಡುವ ಜಾಹೀರಾತು ದೀಪ

Team Udayavani, May 23, 2020, 5:52 AM IST

ಅರ್ವತ್ತು ದಿನಗಳಾದರೂ ಡಿವೈಡರ್‌ ಬೀದಿ ದೀಪ ಬೆಳಗಲಿಲ್ಲ !

ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಡಿವೈಡರ್‌ ಮಧ್ಯೆ ಅಳವಡಿಸಲಾದ ಬೀದಿ ದೀಪಗಳು ವರ್ಷ ಪೂರ್ತಿ ಉರಿಯುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ವಿದ್ಯುತ್‌ ದೀಪಗಳಿಗೆ ಅಳವಡಿಸಲಾದ ಜಾಹೀರಾತು ದೀಪಗಳು ಮಾತ್ರ ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆ.

ದೀಪಗಳು ಕೆ‌ಟ್ಟು 60 ದಿನ
ಕಲ್ಸಂಕ – ಅಂಬಾಗಿಲು ಮಾರ್ಗದ ಡಿವೈಡರ್‌ ಮಧ್ಯದಲ್ಲಿ 70 ಕ್ಕೂ ಅಧಿಕ ಕಂಬಗಳಲ್ಲಿ 140ಕ್ಕೂ ಅಧಿಕ ವಿದ್ಯುತ್‌ ದೀಪಗಳಿವೆ. ಜನವರಿ ತಿಂಗಳಿನಲ್ಲಿ ನಡೆದ ಪರ್ಯಾಯ ಮಹೋತ್ಸವದ ಅಂಗವಾಗಿ ದುರಸ್ತಿಗೊಳಿಸಿದ ಬೀದಿದೀಪಗಳು ಒಂದು ತಿಂಗಳೊಳಗಾಗಿ ಕೆಟ್ಟು ಹೋಗಿದೆ. ದೂರು ನೀಡಿದರು ಪ್ರಯೋಜನವಾಗಿಲ್ಲ. ಇಡೀ ಲಾಕ್‌ಡೌನ್‌ನಿಂದ ರಾತ್ರಿ ಹೊತ್ತಿನಲ್ಲಿ ಸಂಚಾರವಿಲ್ಲದ ಕಾರಣ ಸಾರ್ವಜನಿಕರು ದೂರು ನೀಡುವುದು ನಿಲ್ಲಿಸಿದ್ದಾರೆ. ರಾತ್ರಿ ಹೊತ್ತಿನಲ್ಲಿ ಕತ್ತಲಿನಲ್ಲಿ ಒಡಾಟ ಮಾಡುವ ವಾಹನ ಸವಾರರು ಸಂಕಷ್ಟಕ್ಕೀಡಾಗಿದ್ದಾರೆ.

ಉರಿಯುವ
ಜಾಹೀರಾತು ದೀಪಗಳು
ಬೀದಿ ದೀಪ ಕಂಬದಲ್ಲಿ ಜಾಹೀರಾತು ದೀಪಗಳು ಉರಿಯುತ್ತಿದೆ. ಗುತ್ತಿಗೆ ವಹಿಸಿಕೊಂಡವರು ಜಾಹೀರಾತು ಫ‌ಲಕಗಳ ನಿರ್ವಹಣೆಗೆ ತೋರುವ ಆಸಕ್ತಿ ಬೀದಿದೀಪಗಳ ನಿರ್ವಹಣೆಯಲ್ಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

500ಕ್ಕೂ ಅಧಿಕ
ಬೀದಿ ದೀಪಗಳು
ನಗರದ ಪ್ರಮುಖ ರಸ್ತೆಗಳಾದ ಕೆ.ಎಂ. ಮಾರ್ಗ, ಕಲ್ಸಂಕ -ಅಂಬಾಗಿಲು, ಬನ್ನಂಜೆ -ಶಿರೂರು ಸಿಟಿ ಬಸ್‌ ನಿಲ್ದಾಣ ಮಾರ್ಗ, ರಾಜ್‌ ಟವರ್‌- ಕಲ್ಸಂಕ್‌ ಮಾರ್ಗದ ಡಿವೈಡರ್‌ ಮಧ್ಯೆ ಸುಮಾರು 500ಕ್ಕೂ ಅಧಿಕ ಬೀದಿ ದೀಪಗಳಿವೆ. ನಿಯಮದ ಪ್ರಕಾರ ನಿತ್ಯ ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ವಿದ್ಯುತ್‌ ದೀಪ ಬೆಳಗಬೇಕು. ಆದರೆ ಡಿವೈಡರ್‌ ಮಧ್ಯೆ ಇರುವ ದೀಪಗಳು ಉರಿಯೋದು ಕಡಿಮೆ.

ಗುತ್ತಿಗೆದಾರರಲ್ಲಿ ಆಸಕ್ತಿ ಕೊರತೆ
ಪ್ರಮುಖ ರಸ್ತೆಯನ್ನು ಸಂಪರ್ಕಿಸುವ ಮಾರ್ಗದ ಬೀದಿ ದೀಪದ ನಿರ್ವ ಹಣೆಯನ್ನು ನಗರಸಭೆ (ಪಿಪಿಪಿ ಮಾಡೆಲ್‌) ಗುತ್ತಿಗೆದಾರರಿಗೆ ನೀಡಿದೆ. ಇದರ ಅನ್ವಯ ನಗರಸಭೆಯಿಂದ ಈ ಗುತ್ತಿಗೆದಾರರಿಗೆ ನಿರ್ವಹಣೆಗೆ ಮಾಡಬೇಕು. ಇದಕ್ಕೆ ನಗರಸಭೆಯಿಂದ ಯಾವುದೇ ರೀತಿ ಯಾದ ಹಣ ಪಾವತಿಯಾಗುವುದಿಲ್ಲ. ಬೀದಿ ದೀಪಗಳ ಕಂಬದಲ್ಲಿ ಜಾಹೀರಾತಿನ ಫ‌ಲಕ ಆಳವಡಿಸುವ ಮೂಲಕ ಆದಾಯ ಪಡೆದುಕೊಂಡು ಡಿವೈಡರ್‌ ಬೀದಿ ದೀಪಗಳನ್ನು ನಿರ್ವಹಣೆ ಮಾಡಬೇಕಾಗಿದೆ. ಪ್ರಸ್ತುತ ಬೀದಿದೀಪಗಳು ಕೆಟ್ಟು ತಿಂಗಳು ಕಳೆದರೂ ದುರಸ್ತಿ ಮಾಡಿಲ್ಲ. ಆದರೆ ಗುತ್ತಿಗೆದಾರ ಜಾಹೀರಾತು ಫ‌ಲಕ ಹಾಳಾದ ಒಂದು ದಿನದೊಳಗೆ ದುರಸ್ತಿ ಎನ್ನುವ ಆರೋಪಗಳಿವೆ.

ಬೀದಿ ದೀಪಗಳ‌ ಸಮಸ್ಯೆ
ನಗರಸಭೆ 35 ವಾರ್ಡ್‌ಗಳಲ್ಲಿ ಬೀದಿದೀಪಗಳ ನಿರ್ವಹಣೆಯ ಕೊರತೆ ಇದೆ. 2017-18ರಲ್ಲಿ ಬೀದಿದೀಪದ ಟೆಂಡರ್‌ ವಹಿಸಿಕೊಂಡ ಶಿವಮೊಗ್ಗದ ಗುತ್ತಿಗೆದಾರರು ಬೀದಿದೀಪಗಳ ನಿರ್ವ ಹಣೆಯಲ್ಲಿ ವಿಫ‌ಲರಾಗಿದ್ದರು. ಇದರ ಬಗ್ಗೆ ಸದಸ್ಯರಿಂದ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ 2018 ಜೂ.29ರಂದು ಶಾಸಕ ಕೆ.ರಘುಪತಿ ಭಟ್‌ ಕರೆದ ಸಭೆಯಲ್ಲಿ ಸ್ಥಳೀಯರಿಗೆ ಟೆಂಡರ್‌ ನೀಡಿದರೆ ಉತ್ತಮ ಎಂಬ ಅಭಿಪ್ರಾಯಕ್ಕೆ ಬರಲಾಗಿತ್ತು. 2018ರಲ್ಲಿ ಕಾರ್ಕಳದವರೊಬ್ಬರಿಗೆ ನಿರ್ವಹಣೆ ಟೆಂಡರ್‌ ಆಗಿತ್ತು. ಆರಂಭದಲ್ಲಿ ಚೆನ್ನಾಗಿಯೇ ಇದ್ದರೂ ಬಳಿಕ ಹಳೆಯ ಗುತ್ತಿಗೆದಾರರ ದಾರಿ ಹಿಡಿದ ದೂರುಗಳಿವೆ. ಈ ಬಗ್ಗೆ ಪ್ರಶ್ನಿಸಬೇಕಾದ ಜನಪ್ರತಿನಿಧಿಗಳು ಅಧಿಕಾರ ಸ್ವೀಕರಿಸಿಲ್ಲ.
ನಗರಸಭೆ ವ್ಯಾಪ್ತಿಯ ಬೀದಿ ದೀಪಗಳ ದುರಸ್ತಿ ಹಾಗೂ ನಿರ್ವಹಣೆಗೆ ಪ್ರತಿ ತಿಂಗಳು ಗುತ್ತಿಗೆದಾರರಿಗೆ 6 ಲ.ರೂ. ಗುತ್ತಿಗೆದಾರರಿಗೆ ನೀಡಲಾಗುತ್ತದೆ. ವಾರ್ಷಿಕವಾಗಿ74 ಲಕ್ಷ ರೂ. ಗುತ್ತಿಗೆ ದಾರರಿಗೆ ನೀಡಲಾಗುತ್ತದೆ. ಬೀದಿ ದೀಪದ ವಿದ್ಯುತ್‌ ಬಿಲ್‌ ಸುಮಾರು 25ರಿಂದ 26 ಲ.ರೂ. ಮೊತ್ತವನ್ನು ಸರಕಾರ ಮೆಸ್ಕಾಂಗೆ ಸಂದಾಯ ಮಾಡುತ್ತಿದೆ.

ನಗರಸಭೆ ವ್ಯಾಪ್ತಿಯಲ್ಲಿ ಹೊಸ 600 ಬೀದಿ ದೀಪಗಳ ಅಳವಡಿಕೆಗೆ ಟೆಂಡರ್‌ ಸಿದ್ಧತೆ ನಡೆಯುತ್ತಿದೆ. ಕೋವಿಡ್-19 ಹಿನ್ನೆಲೆ ಕೆಲಸ ಸ್ಥಗಿತಗೊಂಡಿದೆ. ಡಿವೈಡರ್‌ ಬೀದಿದೀಪಗಳ ನಿರ್ವಹಣೆಯನ್ನು ಗುತ್ತಿಗೆದಾರರಿಗೆ ಎಷ್ಟು ವರ್ಷಗಳ ಅವಧಿಗೆ ನೀಡಲಾಗಿದೆ ಎನ್ನುವುದು ಪರಿಶೀಲನೆ ನಡೆಸಲಾಗುತ್ತದೆ. ಕೆಲಸದಲ್ಲಿ ಲೋಪ ಕಂಡು ಬಂದರೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ.
-ಮೋಹನ್‌ ರಾಜ್‌, ಎಇಇ ನಗರಭೆ

ಸಂಚರಿಸಲು ಭಯ
ಕಳೆದ ಎರಡು ತಿಂಗಳಿನಿಂದ ಕಲ್ಸಂಕ- ಅಂಬಾಗಿಲು ಮಾರ್ಗದ ಡಿವೈಡರ್‌ ಬೀದಿ ದೀಪಗಳು ಕೆಟ್ಟು ನಿಂತಿವೆ. ಈ ಬಗ್ಗೆ ನಗರಸಭೆ ಗಮನಕ್ಕೆ ತಂದರು ಯಾವುದೇ ಪ್ರಯೋಜನ ಆಗಿಲ್ಲ. ಆದರೆ ಜಾಹೀರಾತು ದೀಪಗಳು ಹಾಳಾದರೆ ಒಂದೇ ದಿನದಲ್ಲಿ ದುರಸ್ತಿ ಮಾಡುತ್ತಾರೆ. ರಾತ್ರಿ ಹೊತ್ತಿನಲ್ಲಿ ನಗರಸಭೆ ಮುಖ್ಯ ರಸ್ತೆಯಲ್ಲಿ ಸಂಚರಿಸಲು ಭಯವಾಗುತ್ತದೆ.
-ಲತಾ, ಸ್ಥಳೀಯರು

ಟಾಪ್ ನ್ಯೂಸ್

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.