ಮನೆ ಬಾಗಿಲಿಗೆ ಜನಸೇವಕ; ಉನ್ನತ ಅಧಿಕಾರಿಗಳ ಭೇಟಿ, ಸಮಸ್ಯೆಗೆ ಪರಿಹಾರ


Team Udayavani, Oct 17, 2021, 6:20 AM IST

cmಮನೆ ಬಾಗಿಲಿಗೆ ಜನಸೇವಕ; ಉನ್ನತ ಅಧಿಕಾರಿಗಳ ಭೇಟಿ, ಸಮಸ್ಯೆಗೆ ಪರಿಹಾರ

ದಾವಣಗೆರೆ: ಸದ್ಯದಲ್ಲೇ ರಾಜ್ಯದ ಜನರ ಮನೆ ಬಾಗಿಲಿಗೇ ಪಡಿತರ, ಆರೋಗ್ಯ ಸೇವೆ, ಪಿಂಚಣಿ ಸಹಿತ ಸರಕಾರದ ವಿವಿಧ ಕಾರ್ಯಕ್ರಮಗಳು ತಲುಪಲಿವೆ. ನ. 1ರಿಂದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಯೋಜನೆ ಪ್ರಾಯೋಗಿಕವಾಗಿ ಜಾರಿಯಾಗಲಿದ್ದು, ಜ. 26ರಿಂದ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶನಿವಾರ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ’ ಮತ್ತು “ಗ್ರಾಮ ವಾಸ್ತವ್ಯ’ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಿ ಅವರು ಮಾತನಾಡಿದರು. ಜನರ ಮನೆಯ ಬಾಗಿಲಿಗೆ ಅಧಿಕಾರಿಗಳು ಆಗಮಿಸಿ ಸಾಮಾಜಿಕ ಸೌಲಭ್ಯ ಒದಗಿಸಲಿದ್ದಾರೆ. ಸರಕಾರವೇ ನಿಮ್ಮ ಮನೆಯ ಬಾಗಿಲಿಗೆ ಬಂದು ಸೇವೆ ಒದಗಿಸಲಿದೆ ಎಂದರು.

ಜನರು ನಮಗೆ ನೀಡಿದ ಅಧಿಕಾರವನ್ನು ಅವರಿಗೆ ಸವಲತ್ತು ಒದಗಿಸು ವುದಕ್ಕೆ ಬಳಸಿಕೊಳ್ಳುವುದಕ್ಕಾಗಿ ಸರಕಾರವು “ನಿಮ್ಮ ಅಧಿಕಾರ ನಿಮ್ಮ ಕೈಯಲ್ಲಿ’ ಎಂಬ ತತ್ವದಡಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ದೇಶದ ಬೇರೆ ಯಾವುದೇ ರಾಜ್ಯದಲ್ಲಿ ಕಂದಾಯ ಸಚಿವರು ಗ್ರಾಮದಲ್ಲೇ ವಾಸ್ತವ್ಯ ಹೂಡುವಂತಹ ವಿನೂತನ ಕಾರ್ಯಕ್ರಮ ನಡೆದಿಲ್ಲ ಎಂದರು.

ಪಡಿತರವೂ ಮನೆಗೆ
ಜ. 26ರಿಂದ ಪಡಿತರವನ್ನು ಮನೆ ಮನೆಗೆ ತಲುಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಮೃತ ಯೋಜನೆಯಡಿ ಪ್ರತೀ ಕ್ಷೇತ್ರದಲ್ಲಿ 4-5 ಗ್ರಾಮ ಆಯ್ಕೆ ಮಾಡಿ, ಅಭಿವೃದ್ಧಿಗೆ 2 ಕೋಟಿ ರೂ. ಅನುದಾನ ನೀಡಲಾಗುವುದು. ಮುಂದೆ ಪ್ರತೀ ಕ್ಷೇತ್ರದಲ್ಲಿ 8 ಗ್ರಾ.ಪಂ.ಗಳನ್ನು ಆಯ್ಕೆ ಮಾಡುವ ಗುರಿ ಇದೆ. ಅಮೃತ ಯೋಜನೆ ಮೂಲಕ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ಸರಕಾರ ಒತ್ತು ನೀಡಲಿದೆ ಎಂದರು.

ಇದನ್ನೂ ಓದಿ: ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ರಾಜ್ಯಾದ್ಯಂತ ಗ್ರಾಮ ವಾಸ್ತವ್ಯ
ಕಂದಾಯ ಸಚಿವ ಆರ್‌. ಅಶೋಕ್‌ ಕುಂದೂರು ಗ್ರಾಮಕ್ಕೆ ಆಗಮಿಸಿ ಪಿಂಚಣಿ, ಆರ್‌ಟಿಸಿ, ಇತರ ಸವಲತ್ತು ವಿತರಿಸಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸಿ ಇಲ್ಲಿಯೇ ವಾಸ್ತವ್ಯ ಹೂಡುತ್ತಿರುವುದು ವಿನೂತನ ಕಾರ್ಯಕ್ರಮ. ಗ್ರಾಮ ವಾಸ್ತವ್ಯದ ಮೂಲಕ ಹೊನ್ನಾಳಿ ಯನ್ನು ಮಾದರಿ ತಾಲೂಕು ಮಾಡ ಲಾಗುವುದು. ರಾಜ್ಯದ ಎಲ್ಲ ತಾಲೂಕು ಗಳಲ್ಲಿ ಗ್ರಾಮ ವಾಸ್ತವ್ಯ ನಡೆಸಲಾಗುವುದು ಎಂದು ಸಿಎಂ ತಿಳಿಸಿದರು.

ಸದ್ಯವೇ ಕೋವಿಡ್‌ ನಿಯಮ ಸರಳ
ರಾಜ್ಯದಲ್ಲಿ ಕೋವಿಡ್‌ ಕಡಿಮೆ ಆಗಿದೆ. ತಜ್ಞರ ಜತೆ ಚರ್ಚಿಸಿ ಇನ್ನೆರಡು ದಿನಗಳಲ್ಲಿ ಕೋವಿಡ್‌ ನಿಯಮಗಳನ್ನು ಸರಳಗೊಳಿಸ ಲಾಗುವುದು ಎಂದು ಸಿಎಂ ಹೇಳಿದರು.

ಡಿ.ಸಿ.ಗಳ ಗ್ರಾಮ ವಾಸ್ತವ್ಯಕ್ಕೆ ಮರುಚಾಲನೆ
ಕೋವಿಡ್‌ದಿಂದ ಸ್ಥಗಿತಗೊಂಡಿದ್ದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ’ ಮತ್ತೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಅಮರಮುಟ್ನೂರು ಮತ್ತು ಅಮರಪಟ್ನೂರು ಗ್ರಾಮದಲ್ಲಿ ಹಾಗೂ ಉಡುಪಿ ಜಿಲ್ಲೆಯ ಜಡ್ಕಲ್‌ ಗ್ರಾಮದಲ್ಲಿ ಶನಿವಾರ ನಡೆಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.