ಜೀವ ಪಣಕ್ಕಿಟ್ಟ ಎಲ್ಲರಿಗೂ ನೆರವು ನೀಡುವುದು ಕರ್ತವ್ಯ


Team Udayavani, May 26, 2021, 7:04 AM IST

ಜೀವ ಪಣಕ್ಕಿಟ್ಟ ಎಲ್ಲರಿಗೂ ನೆರವು ನೀಡುವುದು ಕರ್ತವ್ಯ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಸರಕಾರ ಎಲ್ಲ ಅಭಿವೃದ್ಧಿ ಚಟುವಟಿಕೆಗಳು ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಬದಿಗಿಟ್ಟು ಸಂಪೂರ್ಣ ಆಡಳಿತ ಯಂತ್ರವನ್ನು ಕೊರೊನಾ ನಿಯಂತ್ರಣಕ್ಕೆ ಮೀಸಲಿಟ್ಟಿದೆ. ಮುಖ್ಯಮಂತ್ರಿ, ಸಚಿವರು, ಶಾಸಕರಾದಿಯಾಗಿ ಜನಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಸರಕಾರದ ಆದೇಶವನ್ನು ತಳ ಮಟ್ಟದಲ್ಲಿ ಕಾರ್ಯಗತಗೊಳಿಸುವ ಕೆಲಸವನ್ನು ಸರಕಾರಿ ಅಧಿಕಾರಿ ಹಾಗೂ ಸಿಬಂದಿವರ್ಗ ಮಾಡುತ್ತಿದೆ. ಕೊರೊನಾ ಮೊದಲನೇ ಅಲೆ ಎದುರಾದಾಗಲೇ ಸರಕಾರ ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಂದಾಯ, ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳನ್ನು ಅಗತ್ಯ ಸೇವೆ ಒದಗಿಸುವ ಇಲಾಖೆಗಳೆಂದು ಪರಿಗಣಿಸಿ ಈ ಇಲಾಖೆಗಳ ಸಿಬಂದಿಯನ್ನು ಕೋವಿಡ್‌ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಇದರ ಹೊರತಾಗಿ ಶಿಕ್ಷಕರನ್ನು ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಬಳಸಿಕೊಳ್ಳುತ್ತಿದೆ. ಅಲ್ಲದೇ ಬಹುತೇಕ ಇಲಾಖೆಗಳ ಶೇ.50ರಷ್ಟು ಸಿಬಂದಿಯನ್ನು ಕೊರೊನಾ ಸಂಬಂಧಿ ರೋಗಿಗಳ ಮನೆ ಸಮೀಕ್ಷೆಯಂತಹ ಕೆಲಸಗಳಿಗೆ ಬಳಸಿ ಕೊಳ್ಳುತ್ತಿದೆ. ಇವರನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೊರೊನಾ ಯೋಧರು ಎಂದು ಅಧಿಕೃತವಾಗಿಯೇ ಘೋಷಿಸಿವೆ.

ಕೇಂದ್ರ ಸರಕಾರ ತನ್ನ ವ್ಯಾಪ್ತಿಗೆ ಒಳಪಡುವ ಕೊರೊನಾ ವಾರಿಯರ್ಸ್‌ ಕೊರೊನಾ ನಿರ್ವಹಣೆ ಸಂದರ್ಭದಲ್ಲಿ ಸೋಂಕಿನಿಂದ ಮೃತ ಪಟ್ಟರೆ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ವಿಮಾ ಯೋಜನೆ ಅಡಿಯಲ್ಲಿ 50 ಲಕ್ಷ ರೂ. ಪರಿಹಾರ ನೀಡುವ ಘೋಷಣೆ ಮಾಡಿದೆ. ರಾಜ್ಯದಲ್ಲಿ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರು ಇದರ ವ್ಯಾಪ್ತಿಗೆ ಬರುತ್ತಾರೆ. ಆದರೆ ವೈದ್ಯರಿಗೆ ದೊರೆಯುತ್ತಿರುವ ವಿಮಾ ಪರಿಹಾರ ರಾಜ್ಯದ ಆಶಾ ಕಾರ್ಯಕರ್ತೆಯರು ಮೃತರಾದಾಗ ದೊರೆಯುತ್ತಿಲ್ಲ. ಕಳೆದ ವರ್ಷ 12 ಜನ ಆಶಾ ಕಾರ್ಯಕರ್ತೆಯರು ಕೋವಿಡ್‌ನಿಂದ ಮೃತರಾಗಿದ್ದರು, ಒಬ್ಬರಿಗೆ ಮಾತ್ರ 50 ಲಕ್ಷ ಪರಿಹಾರ ದೊರೆತಿದೆ. ಉಳಿದವರ ಕುಟುಂಬಕ್ಕೆ ಪರಿಹಾರ ಮರಿಚಿಕೆಯಾಗಿದೆ.

ಕೇಂದ್ರದ ವಿಮಾ ಯೋಜನೆ ವ್ಯಾಪ್ತಿಗೆ ಒಳಪಡದ ರಾಜ್ಯದ ಇತರ ಇಲಾಖೆಗಳ ಎಲ್ಲ ಸಿಬಂದಿಗೂ ಕೊರೊನಾ ನಿರ್ವಹಣೆಯ ಕರ್ತವ್ಯ ದಲ್ಲಿದ್ದಾಗ ಕೊರೊನಾದಿಂದ ಮೃತರಾದರೆ ಅವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರಕಾರ ಘೋಷಿಸಿದೆ. ಆದರೆ ಕೊರೊನಾ ಕರ್ತವ್ಯದಲ್ಲಿದ್ದಾಗ ನಿಧನ ಹೊಂದಿರುವ ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಯ ವೈದ್ಯರಿಗೆ ಬಿಟ್ಟರೆ ಬಹುತೇಕರಿಗೆ ಇನ್ನೂ ವಿಮಾ ಪರಿಹಾರ ದೊರೆತಿಲ್ಲ.

ಸರಕಾರ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಯಾವುದೇ ರೀತಿಯ ವಿಶೇಷ ಅನುದಾನ ಮೀಸಲಿಡದೇ ಇರುವುದರಿಂದ ಇಲಾಖೆಗಳಲ್ಲಿ ಯಾವ ಹಣ ವಿಮಾ ಪರಿಹಾರ ನೀಡಬೇಕೆಂಬ ಗೊಂದಲದಿಂದ ವಿಳಂಬವಾಗುತ್ತಿದೆ ಎನ್ನುವ ಕಾರಣ ಸರಕಾರದ ಕಡೆಯಿಂದ ವ್ಯಕ್ತವಾಗುತ್ತಿದೆ. ಅಲ್ಲದೆ ನೌಕರರ ಸಂಬಳದ ಅಕೌಂಟ್‌ ನಿಂದ ಪರಿಹಾರ ನೀಡುವಂತೆ ಸಲಹೆಯನ್ನೂ ಇಲಾಖಾ ಮುಖ್ಯಸ್ಥರಿಗೆ ಆರ್ಥಿಕ ಇಲಾಖೆ ನೀಡುತ್ತಿದೆ ಎಂಬ ಮಾಹಿತಿ ಇದೆ.

ಸರಕಾರ ಸಂಘಟಿತವಾಗಿ ಒಂದು ಮಹಾಮಾರಿ ವಿರುದ್ಧ ಹೋರಾಟ ನಡೆಸುತ್ತಿರುವಾಗ ಎಲ್ಲರನ್ನೂ ಸಂಘಟಿತವಾಗಿ ಇದರ ವಿರುದ್ಧ ಹೋರಾಟಕ್ಕೆ ಬಳಸಿಕೊಳ್ಳುತ್ತಿರುವಾಗ ಕರ್ತವ್ಯದಲ್ಲಿದ್ದಾಗ ನಿಧನರಾದವರೆಲ್ಲರನ್ನೂ ಒಂದೇ ರೀತಿಯಲ್ಲಿ ಪರಿಗಣಿಸಿ ಪರಿಹಾರ ನೀಡುವ ವ್ಯವಸ್ಥೆ ಜಾರಿಗೆ ತರುವ ಅಗತ್ಯ ಇದೆ. ಈ ನಿಟ್ಟಿ ನಲ್ಲಿ ಸರಕಾರ ಬೇಗನೆ ನಿರ್ಧಾರ ತೆಗೆದುಕೊಳ್ಳಲಿ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.