ಬಿಸಿಲ ನೆಲಕ್ಕೆ ಹಸಿರು ಹೊದಿಕೆ ; ರಾಜ್ಯದಲ್ಲೇ ಪ್ರಥಮ ಬಾರಿ ಯಶಸ್ವಿಯಾದ ಪ್ರಯೋಗ ‌

ಕಲುಷಿತ ನೀರು ಶುದ್ಧೀಕರಿಸಿ ಉದ್ಯಾನಕ್ಕೆ ಬಳಕೆ

Team Udayavani, Aug 4, 2021, 9:54 PM IST

Water

ಸಿಂದಗಿ: ಉದ್ಯಾನವೇ ಇಲ್ಲದ ಪಟ್ಟಣದಲ್ಲಿ ಸ್ಥಳಿಯ ಪದ್ಮರಾಜ್‌ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಜಿ.ಪಿ. ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಆವರಣವು ಹಚ್ಚಹಸಿರಿನಿಂದ ಕಂಗೊಳಿಸುತ್ತಿದೆ.

ಮಹಾವಿದ್ಯಾಲಯದ ಒಳ ಹಾಗೂ ಹೊರ ಆವರಣದ ತುಂಬ ಬೆಳೆದ ಗಿಡ, ಸಸಿಗಳು ಹಸಿರು ಸೂಸುತ್ತ ನೋಡಗರ ಕಣ್ಣುಗಳನ್ನು ತಂಪಾಗಿಸುತ್ತದೆ. ವಾತಾವರಣದಲ್ಲಿ ಆಮ್ಲಜನಕದ ಪ್ರಮಾಣ ಹೆಚ್ಚಿಸುವ ಕೇಂದ್ರವಾಗಿದೆ. ಕಲುಷಿತ ನೀರನ್ನು ಶುದ್ಧೀಕರಿಸಿ ಪುನಃ ಬಳಕೆ ಮಾಡಿಕೊಳ್ಳುತ್ತಿರುವ ಮಹಾವಿದ್ಯಾಲಯದ ಕಾರ್ಯ ರಾಜ್ಯದಲ್ಲಿಯೇ ಪ್ರಥಮವಾಗಿದೆ.

ಕಲುಷಿತ ನೀರು ಪುನಃ ಬಳಕೆ ಮಾಡಿ ಮಹಾವಿದ್ಯಾಲಯವನ್ನು ಹಸಿರುಮಯ ಮಾಡಿದೆ. ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡಿದೆ. ಪರಿಸರದ ಆರೋಗ್ಯ ಕಾಪಾಡಲಾಗಿದೆ. ಪರಿಸರ ಪ್ರೇಮಿ ಈ ಕಾರ್ಯಕ್ಕೆ ಫಲವಾಗಿ ಜಿ.ಪಿ. ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯ ಸಾಧನೆಗೆ ಭಾರತ ಸರಕಾರದ ಮಹಾತ್ಮ ಗಾಂಧಿ  ರಾಷ್ಟ್ರೀಯ ಗ್ರಾಮಿಣ ಶಿಕ್ಷಣ ಪರಿಷತ್‌, ಮಿನಿಸ್ಟರಿ ಆಫ್‌ ಎಜ್ಯುಕೇಶನ್‌ ಅವರು ಕೊಡಮಾಡುವ ಡಿಸ್ಟ್ರಿಕ್‌ ಗ್ರೀನ್‌ ಚಾಂಪಿಯನ್‌ ಸರ್ಟಿμಕೇಟ್‌ ಸೇರಿದೆ. ಜಲ ಶುದ್ಧೀಕರಣವೆಂಬುದು ಮೂಲ ಸ್ಥಿತಿಯ ನೀರಿನಲ್ಲಿರುವ ಬೇಡವಾದ ರಾಸಾಯನಿಕಗಳನ್ನು, ವಸ್ತುಗಳನ್ನು ಮತ್ತು ಜೈವಿಕ ಕಶ್ಮಷಗಳನ್ನು ತೆಗೆಯುವ ಕ್ರಿಯೆಯಾಗಿದೆ. ನಿರ್ದಿಷ್ಟ ಉದ್ದೇಶಕ್ಕೆ ಹೊಂದಿಕೊಳ್ಳುವ ನೀರನ್ನು ಉತ್ಪಾದಿಸುವುದು ಇದರ ಗುರಿಯಾಗಿದೆ.

ಮಾನವರ ಬಳಕೆಗಾಗಿ ಬಹುಪಾಲು ನೀರನ್ನು ಶುದ್ಧೀಕರಿಸಲಾಗುತ್ತದೆ. ಸಾರ್ವತ್ರಿಕವಾಗಿ ಬಳಸುವ ವಿಧಾನಗಳು ಶೋಧನೆ ಮತ್ತು ಸಂಚಯದಂತಹ ಭೌತಿಕ ಪ್ರಕ್ರಿಯೆಗಳು, ನಿಧಾನವಾಗಿ ಮರಳಿನ ಸೋಸುವಿಕೆ ಅಥವಾ ಕ್ರಿಯಾಶೀಲ ಕೆಸರಿನಂತಹ ಜೈವಿಕ ಕಾರ್ಯವಿಧಾನಗಳು, ಕುಚ್ಚಾಗುವಿಕೆ ಮತ್ತು ಕ್ಲೋರಿನೀಕರಣದಂತಹ ರಾಸಾಯನಿಕ ಕಾರ್ಯವಿಧಾನಗಳು ಹಾಗೂ ನೇರಳಾತೀತ ಬೆಳಕಿನಂತಹ ವಿದ್ಯುತ್ಕಾಂತೀಯ ವಿಕಿರಣಗಳ ಬಳಕೆಯನ್ನು ಒಳಗೊಂಡಿದೆ. ಕಲುಷಿತ ನೀರನ್ನು ಶುದ್ಧೀಕರಿಸಿ ಪುನಃ ಬಳಕೆ ಮಾಡುವುದು ಶುದ್ಧೀಕರಣದ ಉದ್ಧೇಶವಾಗಿದೆ.

ಈ ನಿಟ್ಟಿನಲ್ಲಿ ಸ್ಥಳಿಯ ಪದ್ಮರಾಜ್‌ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಜಿ.ಪಿ. ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಮಹಿಳಾ ವಸತಿ ನಿಲಯದಿಂದ ಸುಮಾರು ಐದು ಸಾವಿರ ಗ್ಯಾಲೆನ್‌ ಕಲುಷಿತ ನೀರು ವ್ಯರ್ಥವಾಗಿ ಹೋಗುತ್ತಿತ್ತು. ಕಲುಷಿತ ನೀರು ವ್ಯರ್ಥವಾಗಿ ಹರಿಬಿಟ್ಟರೆ ಅಲ್ಲಿಯ ವಾತಾವರಣ ಕಲುಷಿತವಾಗಿ ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಇದನ್ನು ಮನಗಂಡ ಸಂಸ್ಥೆಯು ಸಂಸ್ಥೆಯ ಸ್ವಂತ ಖರ್ಚಿನಿಂದ ಬೆಂಗಳೂರಿನ ಅಶ್ವಥನಾರಾಯಣ ಅವರಿಂದ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ಮಾಡಿದ್ದಾರೆ.ಕೊಳಚೆ ನೀರು ಶುದ್ಧೀಕರಣ ಮಾಡಿ ಪುನಃ ಬಳಕೆ ಮಾಡಲಾಗುತ್ತಿದೆ. ‌

ಕಲುಷಿತ ನೀರನ್ನು ಪುನಃ ಬಳಕೆ ಮಾಡಲು ಶುದ್ಧೀಕರಣ ಮಾಡುವ ಘಟಕ ನಿರ್ಮಾಣಕ್ಕೆ ಸರ್ಕಾರ, ಜನಪ್ರತಿನಿಧಿಗಳು ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವ ಜೊತೆಗೆ ಸರ್ಕಾರ ವಿಶೇಷ ಅನುದಾನ ನೀಡಬೇಕು. ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಹಕಾರ ನೀಡಬೇಕು. ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಿಬ್ಬಂದಿಗಳ ಪರಿಶ್ರಮದ ಫಲವಾಗಿ ಕಾಲೇಜಿನ ಆವರಣ ಹಸಿರಾಗಿದೆ. ಫಲವಾಗಿ ಡಿಸ್ಟ್ರಿಕ್‌ ಗ್ರೀನ್‌ ಚಾಂಪಿಯನ್‌ ಸರ್ಟಿಫಿಕೇಟ್‌ ಲಭಿಸಿದೆ.
-ಡಾ| ಪ್ರಭುಸಾರಂಗದೇವ ಶಿವಾಚಾರ್ಯರು, ಚೇರಮನ್‌, ಎಸ್‌ಪಿವಿವಿಎಸ್‌ ಸಾರಂಗಮಠ, ಸಿಂದಗಿ

ಮಹಾವಿದ್ಯಾಲಯದ ಮಹಿಳಾ ವಸತಿ ನೀಲಯದಿಂದ ಹೊರ ಹೋಗುವ ಕಲುಷಿತ ನೀರನ್ನು ಶುದ್ಧೀಕರಿಸಿ ಪುನಃ ಬಳಕೆ ಮಾಡುವ ಘಟಕ ನಿರ್ಮಾಣ ಮಾಡಲು 25 ಲಕ್ಷ ರೂ. ವೆಚ್ಚ ಖರ್ಚಾಗಿದೆ. ಈ ಘಟಕ ನಿರ್ಮಾಣಕ್ಕೆ ಜನಪ್ರತಿನಿ ಧಿಗಳು ಸ್ಪಂದಿಸಲಿಲ್ಲ. ಸಂಸ್ಥೆಯ ಚೇರಮನ್‌ ಡಾ| ಪ್ರಭುಸಾರಂಗದೇವ ಶಿವಾಚಾರ್ಯರು ಸ್ವಂತ ಹಣ ನೀಡಿ ಶುದ್ಧೀಕರಣ ಘಟಕ ನಿರ್ಮಾಣ ಮಾಡಿಸಿ ನೀರಿನ ಸಮಸ್ಯೆ ಪರಿಹರಿಸಿದರು. ಇಂಥ ಘಟಕಗಳನ್ನು ಸ್ಥಾಪಿಸಬೇಕಾದಲ್ಲಿ ಬೆಂಗಳೂರಿನ ಅಶ್ವಥನಾರಾಯಣ ಅವರ ದೂರವಾಣಿ ಸಂಖ್ಯೆ 9448440647ಗೆ ಸಂಪರ್ಕಿಸಬೇಕು.
-ಡಿ.ಎಂ. ಪಾಟೀಲ, ಪ್ರಾಚಾರ್ಯರು, ಜಿ.ಪಿ. ಪೋರವಾಲ ಕಾಲೇಜ್‌, ಸಿಂದಗಿ

ಕಲುಷಿತ ನೀರು ಶುದ್ಧೀಕರಿಸಿ ಪುನಃ ಬಳಕೆ ಮಾಡುವ ಘಟಕಗಳು ಹೆಚ್ಚಾದಲ್ಲಿ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಇಂಥ ಘಟಕಗಳ ನಿರ್ಮಾಣಕ್ಕೆ ಸರ್ಕಾರ ಪ್ರೋತ್ಸಾಹಧನ ನೀಡಬೇಕು. ಈ ಘಟಕಕ್ಕೆ ವಿದ್ಯುತ್‌ ವೆಚ್ಚ ಹೆಚ್ಚಾಗುವುದರಿಂದ ಸೋಲಾರ ಘಟಕ ನಿರ್ಮಿಸಿಕೊಳ್ಳಲು ಸರ್ಕಾರ ಸಹಾಯಧನ ನೀಡಬೇಕು.
-ಸಿದ್ದು ಮಂಗಳೂರ, ಪರಿಸರ ಪ್ರೇಮಿ, ಸಿಂದಗಿ

-ರಮೇಶ ಪೂಜಾರ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.