ರಾಜ್ಯದ ಬಿಜೆಪಿ ಸರಕಾರಕ್ಕೆ ಪಂಚೇಂದ್ರೀಯಗಳು ಕೆಲಸ ಮಾಡುತ್ತಿಲ್ಲ ; ಸಿದ್ದರಾಮಯ್ಯ
Team Udayavani, Oct 23, 2019, 4:40 PM IST
ಗುಳೇದಗುಡ್ಡ: ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಕೇಂದ್ರದ ನಾಯಕರಿಗೆ ಬೇಕಾಗಿಲ್ಲ. ರಾಜ್ಯದಲ್ಲಿ ಇಷ್ಟು ಪ್ರವಾಹ ಕೇಂದ್ರ ಸರಕಾರ ಸ್ಪಂದಿಸದೇ ಅವರನ್ನು ಮೂಲೆಗುಂಪು ಮಾಡಿದ್ದಾರೆ ಎಂದು ಮಾಜಿಮುಖ್ಯಮಂತ್ರಿ ಶಾಸಕ ಸಿದ್ದರಾಮಯ್ಯ ಹೇಳಿದರು.
ಪಟ್ಟಣದಲ್ಲಿ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ರಾಜ್ಯದಲ್ಲಿ ಕಳೆದ ತಿಂಗಳು ಎದುರಾದ ಪ್ರವಾಹದಿಂದ 1 ಲಕ್ಷ ಕೋಟಿ ನಷ್ಟವಾಗಿದೆ. ಆದರೆ ಕೇಂದ್ರ ಸರಕಾರಕ್ಕೆ ಬಿಎಸ್ ವೈ ಬರೀ ೩೮ಸಾವಿರ ಕೋಟಿ ನಷ್ಟವಾಗಿದೆ ಅಂತಾ ವರದಿ ನೀಡಿದ್ದಾರೆ. ಅದಕ್ಕಾದರೂ ಕೇಂದ್ರ ಸರಕಾರ ಪರಿಹಾರ ನೀಡಬೇಕಲ್ಲವೇ ಬರೀ 1200ಕೋಟಿ ಪರಿಹಾರ ನೀಡುವ ಮೂಲಕ ಧೂಪ ಹಾಕುವ ರೀತಿಯಲ್ಲಿ ಪರಿಹಾರ ನೀಡಿದೆ.
ರಾಜ್ಯದ ಬಿಜೆಪಿ ಸರಕಾರಕ್ಕೆ ಪಂಚೇಂದ್ರೀಯಗಳು ಕೆಲಸ ಮಾಡುತ್ತಿಲ್ಲ. ಕೇಂದ್ರದ ನಾಯಕರಿಗೆ ಗಟ್ಟಿ ಧ್ವನಿಯಲ್ಲಿ ಪರಿಹಾರ ಕೇಳುವ ಧೈರ್ಯವನ್ನು ಯಡಿಯೂರಪ್ಪ ಮಾಡುತ್ತಿಲ್ಲ. ನಮ್ಮನ್ನು ಕರೆಯಿರಿ ನಾವು ಕೇಂದ್ರದವರಿಗೆ ಕೇಳುತ್ತೇವೆ ಎಂದು ಹೇಳಿದರೂ ನಮನ್ನು ಕರೆಯುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಬಾದಾಮಿ ಕ್ಷೇತ್ರದ ಜನರ ಪುಣ್ಯ ನಾನು ವಿಪಕ್ಷ ನಾಯಕನಾಗಿದ್ದೇನೆ ಇಲ್ಲದಿದ್ದರೆ ಮನೆಯಲ್ಲಿರುತ್ತಿದ್ದೇ. ನೀವು ಸೋಲಿಸಿಬಿಟ್ಟಿದ್ದರೆ ನಾನು ವಿಪಕ್ಷನಾಗುತ್ತಿರಲಿಲ್ಲ. ಕಾಯಾ ವಾಚಾ ಮನಸಾ ನಾನು ಬಾದಾಮಿ ಕ್ಷೇತ್ರದ ಹಾಗೂ ರಾಜ್ಯದ ಜನರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ