ಪೋಷಣಾ ಅನುದಾನ ಯೋಜನೆ: ಕೇಂದ್ರ, ರಾಜ್ಯದಿಂದ ಅನುದಾನ ಬಿಡುಗಡೆಯಾಗಿಲ್ಲ


Team Udayavani, Mar 17, 2022, 6:21 AM IST

ಪೋಷಣಾ ಅನುದಾನ ಯೋಜನೆ: ಕೇಂದ್ರ, ರಾಜ್ಯದಿಂದ ಅನುದಾನ ಬಿಡುಗಡೆಯಾಗಿಲ್ಲ

ಬೆಂಗಳೂರು: ಪೋಷಣಾ ಅನುದಾನ ಯೋಜನೆಗೆ 2021-22ನೇ ಸಾಲಿನಲ್ಲಿ 85 ಕೋಟಿ ರೂ. ನಿಗದಿಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಇದಕ್ಕೆ ಯಾವುದೇ ಅನುದಾನ ಬಿಡುಗಡೆ ಆಗಿಲ್ಲ.ಇದನ್ನು ಸ್ವತಃ ಸರಕಾರವೇ ವಿಧಾನಪರಿಷತ್‌ ನಲ್ಲಿ ಲಿಖಿತ ರೂಪದಲ್ಲಿ ಸ್ಪಷ್ಟಪಡಿಸಿದೆ.

ಕಾಂಗ್ರೆಸ್‌ನ ಮಂಜುನಾಥ್‌ ಭಂಡಾರಿ ಅವರು ಪೋಷಣಾ ಅಭಿಯಾನ ಕಾರ್ಯಕ್ರಮದಡಿ ಮಂಜೂರಾದ, ಬಿಡುಗಡೆಯಾದ ಮತ್ತು ಬಾಕಿ ಇರುವ ಅನುದಾನ ಎಷ್ಟು ಎಂದು ಚುಕ್ಕೆಗುರುತಿಲ್ಲದ ಪ್ರಶ್ನೆ ಅಡಿ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್‌, ಪೋಷಣಾ ಅಭಿಯಾನ ಯೋಜನೆ ಅಡಿ 2021-22ನೇ ಸಾಲಿನಲ್ಲಿ 85 ಕೋಟಿ ರೂ. ನಿಗದಿಯಾಗಿದ್ದು, ಇದರಲ್ಲಿ ರಾಜ್ಯದ ಪಾಲು ಶೇ. 40 ಹಾಗೂ ಕೇಂದ್ರದ್ದು ಶೇ. 60ರಷ್ಟು ಇರುತ್ತದೆ. ಆದರೆ, ಯಾವುದೇ ಅನುದಾನ ಬಿಡುಗಡೆ ಆಗಿಲ್ಲ ಎಂದು ಹೇಳಿದ್ದಾರೆ.

ಉದ್ದೇಶಿತ ಅಭಿಯಾನದ ಮುಖ್ಯ ಉದ್ದೇಶ ಮಕ್ಕಳಲ್ಲಿನ ಕುಂಠಿತ ಬೆಳವಣಿಗೆ ತಡೆಗಟ್ಟುವುದು, ಅಪೌಷ್ಟಿಕತೆ ತಡೆಗಟ್ಟುವುದು, ರಕ್ತಹೀನತೆಯ ಪ್ರಮಾಣವನ್ನು ಕಡಿಮೆಗೊಳಿಸುವುದು, 15-49 ವರ್ಷದ ಹೆಣ್ಣುಮಕ್ಕಳಲ್ಲಿ ಮತ್ತು ಮಹಿಳೆಯರಲ್ಲಿ ರಕ್ತಹೀನತೆ ತಡೆಗಟ್ಟುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಒಳಗೊಂಡಿದೆ. ಎಲ್ಲ ಅಂಗನವಾಡಿಗಳಲ್ಲಿ ಸಮುದಾಯ ಆಧಾರಿತ ಚಟುವಟಿಕೆಗಳನ್ನು ಪ್ರತಿ ತಿಂಗಳು ಮೊದಲ ಮತ್ತು ಮೂರನೇ ಶುಕ್ರವಾರ ನಡೆಸಲಾಗುತ್ತದೆ. ಇದರ ಮೂಲಕ ತಾಯಂದಿಯರಿಗೆ ಅರಿವು ಮೂಡಿಸಲಾಗುತ್ತದೆ. ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ.

ಇದೇ ವೇಳೆ ಮಂಗಳವಾರ ವಿಧಾನಪರಿಷತ್‌ನಲ್ಲಿ ಹಣಕಾಸು ಇಲಾಖೆ ಮೇಲೆ ಮುಗಿಬಿದ್ದ ಮೇಲ್ಮನೆ ಸದಸ್ಯರು, ಈ ಇಲಾಖೆಗೆ ತುರ್ತು ಚಿಕಿತ್ಸೆ ಆವಶ್ಯಕತೆಯಿದೆ ಎಂದು ಅಭಿಪ್ರಾಯಪಟ್ಟರು.

ಹಣಕಾಸು ಇಲಾಖೆಯೇ ಸಿಎಂ?
ಕಾಂಗ್ರೆಸ್‌ನ ಮಂಜುನಾಥ್‌ ಭಂಡಾರಿ ಮಾತನಾಡಿ, ಹಣಕಾಸು ಇಲಾಖೆಯ ಧೋರಣೆ ನೋಡಿದರೆ, ಈ ಸರಕಾರವನ್ನು ನಡೆಸುತ್ತಿದೆಯೇ ಎಂಬ ಅನುಮಾನ ಬರುತ್ತಿದೆ. ಒಂದು ವೇಳೆ ಹೌದಾದರೆ, ಮುಖ್ಯಮಂತ್ರಿಗಳಾÂಕೆ? ಶಾಸಕರು, ಪರಿಷತ್ತಿನ ಸದಸ್ಯರು ಯಾಕೆ? ಇದು ಜನಪ್ರತಿನಿಧಿಗಳಿಗೆ ಆದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾ.ಪಂ. ಸದಸ್ಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸ್ವತಃ ಮುಖ್ಯಮಂತ್ರಿಗಳು ಕಳುಹಿಸಿದ ಪ್ರಸ್ತಾವನೆಯನ್ನೇ ಹಣಕಾಸು ಇಲಾಖೆ ತಿರಸ್ಕರಿಸುತ್ತದೆ. ಮುಖ್ಯಮಂತ್ರಿಗಳ ಸೂಚನೆಗೇ ಬೆಲೆ ಇಲ್ಲ. ಅವರನ್ನು ಕೇಳಿಯೇ ಎಲ್ಲವನ್ನೂ ಮಾಡುವುದಾದರೆ ನಾವೇಕೆ? ಹಲವು ವರ್ಷಗಳಿಂದ ಕೆಲವು ಅಧಿಕಾರಿಗಳು ಹಣಕಾಸು ಇಲಾಖೆಯಲ್ಲಿಯೇ ಬೀಡು ಬಿಟ್ಟಿದ್ದಾರೆ. ಮುಖ್ಯಮಂತ್ರಿಗಳು ಹಣಕಾಸು ಇಲಾಖೆಯನ್ನು ಅಧಿಕಾರಿಗಳ ಕೈಗಿಟ್ಟು ಕುಳಿತಿದ್ದಾರೆ. ಆದ್ದರಿಂದ ಉತ್ತಮವಾಗಿ ನಿರ್ವಹಣೆ ಮಾಡುವ ಸಾಮರ್ಥ್ಯ ಇರುವ ಮಂತ್ರಿಗಳಿಗೆ ವಹಿಸಬೇಕೆಂದು ಅವರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.