ಇತಿಮಿತಿಯಲ್ಲಿ ಆರೋಗ್ಯ ವ್ಯವಸ್ಥೆ ಬಲಿಷ್ಠ ಬಜೆಟ್
ಆರೋಗ್ಯ ವಲಯಕ್ಕೆ ಆದ್ಯತೆ ನೀಡಿದ್ದು, 10ಕ್ಕೆ 7 ಅಂಕ ನೀಡಬಹುದು
Team Udayavani, Mar 6, 2020, 5:13 AM IST
ರಾಜ್ಯ ಸರಕಾರ ತನ್ನ ಆರ್ಥಿಕ ಸಂಪನ್ಮೂಲದ ಇತಿಮಿತಿಯಲ್ಲಿಯೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಉತ್ತಮ ಬಜೆಟ್ ಮಂಡಿಸಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳು ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು ಇದ್ದಂತೆ. ಇಂತಹ ಕೇಂದ್ರಗಳನ್ನು ತಂತ್ರಜ್ಞಾನ ಸಹಾಯದಿಂದ ಅಭಿವೃದ್ಧಿ ಪಡಿಸುತ್ತಿರುವುದು ಹಾಗೂ ಅಲ್ಲಿ ಟೆಲಿಮೆಡಿಸಿನ್ ವ್ಯವಸ್ಥೆ ಕಲ್ಪಿಸುತ್ತಿರುವುದು ಅತ್ಯುತ್ತಮ ನಡೆ ಆಗಿದೆ.
ಕಟ್ಟಡ ಕಾರ್ಮಿಕರು ಆರ್ಥಿಕವಾಗಿ ಹಿಂದುಳಿದಿ ರುತ್ತಾರೆ. ಅವರಿಗೆ ಯಾವುದೇ ಸೂಕ್ತ ಸೌಲಭ್ಯ ಸಿಗುವುದಿಲ್ಲ. ಅಂತಹ ಕಟ್ಟಡ ಕಾರ್ಮಿಕರ ಆರೋಗ್ಯ ಕಾಳಜಿಗೆ ಒಂದು ಹೆಜ್ಜೆ ಮುಂದಿಟ್ಟು ಉಚಿತ ಪ್ರಿಪೇಯ್ಡ ಕಾರ್ಡ್ ನೀಡುತ್ತಿರುವುದು ಲಕ್ಷಾಂತರ ಮಂದಿಗೆ ಅನುಕೂಲವಾಗಲಿದೆ.
ಜೀವನ ಶೈಲಿ ಬದಲಾವಣೆಯಿಂದ ಹೃದ್ರೋಗ, ಮಧುಮೇಹ, ಕಿಡ್ನಿ ವೈಫಲ್ಯ ದಂತಹ ಕಾಯಿಲೆ ಹೆಚ್ಚುತ್ತಿವೆ. ಅಂತಹ ರೋಗಗಳಿಗೆ ತುತ್ತಾಗುತ್ತಿರುವ ರೋಗಿಗಳಿಗೆ ಪ್ರಸಕ್ತ ಬಜೆಟ್ನಲ್ಲಿ ಘೋಷಿಸಿರುವ ಕ್ಯಾತ್ಲ್ಯಾಬ್, ಡಯಾಲಿಸಿಸ್ ಕೇಂದ್ರಗಳು ನೆರವಾಗ ಲಿದೆ. ಹೃದ್ರೋಗ ಹೆಚ್ಚು ಕಾಣಿಸಿ ಕೊಳ್ಳುತ್ತಿರುವ ಮಹಾನಗರಗಳ ಲ್ಲೊಂದಾದ ಬೆಂಗಳೂರಿನ 2 ಪ್ರಮುಖ ಸರಕಾರಿ ಆಸ್ಪತ್ರೆಗಳಲ್ಲಿ ಕ್ಯಾತ್ಲ್ಯಾಬ್ ಮಾಡಲಾಗುತ್ತಿದೆ. ಜತೆಗೆ ಕಿಡ್ನಿ ಸಮಸ್ಯೆ ಯಿಂದ ಬಳಲುತ್ತಿರುವವರ ಡಯಾಲಿಸಿಸ್ಗೆ 5 ಜಿಲ್ಲೆಗಳಲ್ಲಿ ಆಧುನಿಕ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ ಆರಂಭಿಸಲಾಗುತ್ತಿದೆ. ಈ ರೀತಿ ಆರೋಗ್ಯ ಯೋಜನೆಗಳ ವಿಸ್ತರಣೆ ಮುಂದಿನ ದಿನಗಳಲ್ಲಿ ಬಲಿಷ್ಠ ಆರೋಗ್ಯ ವ್ಯವಸ್ಥೆ ಸೃಷ್ಟಿಸಲಿದೆ. ಇಂತಹ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಆಸ್ಪತ್ರೆಗಳಿಗೆ ಸರಕಾರ ಮುಂದಾಗಬೇಕು.
ಉತ್ತರ ಕನ್ನಡ ಆರೋಗ್ಯ ಸೌಲಭ್ಯಗಳಲ್ಲಿ ಒಂದಿಷ್ಟು ಹಿಂದುಳಿದ ಜಿಲ್ಲೆ ಎಂದು ಬಿಂಬಿತವಾಗಿದೆ. ಸದ್ಯ ಬಜೆಟ್ನಲ್ಲಿ ಶಿರಸಿ ತಾಲೂಕಿನ ಸರಕಾರಿ ಆÓ³ತ್ರೆ ಮೇಲ್ದರ್ಜೆಗೇರಿಸುತ್ತಿರುವುದರಿಂದ ಅಲ್ಲಿನ ಆರೋಗ್ಯ ವ್ಯವಸ್ಥೆ ಸುಧಾರಿ ಸಲಿದೆ. ಖಾಸಗಿ ಸಾರ್ವಜನಿಕ ಸಹಭಾಗಿ ತ್ವದ ಮೂಲಕ ಸಾರ್ವಜನಿಕ ಆರೋಗ್ಯ ಸಂಸ್ಥೆಗಳ ಉನ್ನತೀಕರಣ ಸ್ವಾಗತಾರ್ಹ. ಘೋಷಣೆ ಮಾಡಿರುವ ಕಾರ್ಯಕ್ರಮ ನಿಗದಿತ ಸಮಯದಲ್ಲಿ ಜಾರಿಗೊಳಿಸಲಿ.
–ಸುದರ್ಶನ್ ಬಲ್ಲಾಳ್
ಆರೋಗ್ಯ ತಜ್ಞರು
ಭೈರಪ್ಪ ಹುಟ್ಟೂರು ಅಭಿವೃದ್ಧಿಗೆ 5 ಕೋಟಿ
ಕನ್ನಡದ ಹಿರಿಯ ಕಾದಂಬ ರಿಕಾರ ಡಾ| ಎಸ್.ಎಲ್.ಭೈರಪ್ಪ ಅವರ ಹುಟ್ಟೂ ರಾದ ಹಾಸನ ಜಿಲ್ಲೆ ಸಂತೆಶಿವರ ಗ್ರಾಮದ ಅಭಿವೃದ್ಧಿಗಾಗಿ 5 ಕೋಟಿ ರೂ.ಮೀಸಲಿಡ ಲಾಗಿದೆ. ಲಂಬಾಣಿ ಸಂಸ್ಕೃತಿ ಮತ್ತು ಭಾಷೆಯನ್ನು ಮುಂದಿನ ಪೀಳಿಗೆಗೆ ಪರಿ ಚಯಿಸಲು ಲಂಬಾಣಿ ಸಂಸ್ಕೃತಿ ಭಾಷಾ ಅಕಾ ಡೆಮಿ ಸ್ಥಾಪನೆಗೆ 50 ಲಕ್ಷ ರೂ. ಘೋಷಿಸ ಲಾಗಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನಲ್ಲಿ ಕಾರ್ಯ ನಿರ್ವಹಿ ಸುತ್ತಿರುವ “ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರ’ದ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗಾಗಿ ಪ್ರೋತ್ಸಾಹ ಧನ ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು