Kollur: ಕೊಲ್ಲೂರು ದೇಗುಲದ ಆಡಳಿತ ಮಂಡಳಿ ಅವಧಿ ವಿಸ್ತರಿಸಲು ಹೈಕೋರ್ಟ್ ನಕಾರ
Team Udayavani, Jan 4, 2024, 10:31 PM IST
ಬೆಂಗಳೂರು: ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇಗುಲದ ಆಡಳಿತ ಮಂಡಳಿ ಅವಧಿಯನ್ನು ವಿಸ್ತರಿಸಲು ಹೈಕೋರ್ಟ್ ನಿರಾಕರಿಸಿದೆ.
ಆಡಳಿತ ಮಂಡಳಿ ಅವಧಿಯನ್ನು ವಿಸ್ತರಿಸುವಂತೆ ಕೋರಿ ಸಮಿತಿ ಸದಸ್ಯರಾದ ಕೆರಾಡಿ ಚಂದ್ರಶೇಖರ ಶೆಟ್ಟಿ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆಡಳಿತ ಮಂಡಳಿ ಸದಸ್ಯರು ಸಂಪೂರ್ಣ ಅಧಿಕಾರಾವಧಿ ಅನುಭವಿಸಿದ್ದರೂ ಕೊನೆಯ ಘಳಿಗೆಯಲ್ಲಿ ಅವಧಿ ವಿಸ್ತರಿಸುವಂತೆ ಮಾಡಿರುವ ಮನವಿಯನ್ನು ಒಪ್ಪಲಾಗುವುದಿಲ್ಲ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿದೆ.
ಅಲ್ಲದೆ, ಸಮಿತಿ ರಚಿಸಿದ ಸಂದರ್ಭದಲ್ಲಿ ಅರ್ಜಿದಾರರು 3 ವರ್ಷಗಳ ಅವಧಿಯನ್ನು ಒಪ್ಪಿಕೊಂಡಿದ್ದಾರೆ. ಜತೆಗೆ ಅಧಿಕಾರವನ್ನೂ ಅನುಭವಿಸಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.
ಸಮಿತಿ ರಚಿಸಿ ಆದೇಶ ಹೊರಡಿಸಿದ ದಿನದ ಬದಲಿಗೆ ಸಮಿತಿ ಮೊದಲ ಸಭೆ ನಡೆಸಿದ ದಿನದಿಂದ ಮೂರು ವರ್ಷಗಳ ಅವಧಿಗೆ ಇರಬೇಕು ಎಂದು ಕೋರಿದ್ದಾರೆ. ಇದು ಧಾರ್ಮಿಕ ದತ್ತಿ ಇಲಾಖೆಯ ಕಾಯ್ದೆಗೆ ವಿರುದ್ಧವಾಗಿದೆ ಎಂದು ನ್ಯಾಯಪೀಠ ಉಲ್ಲೇಖೀಸಿದೆ.
ಪ್ರಕರಣದ ಹಿನ್ನೆಲೆ
ಧಾಮಿಕ ದತ್ತಿ ಕಾಯ್ದೆ ಸೆಕ್ಷನ್ 25ರ ಪ್ರಕಾರ ಕೊಲ್ಲೂರು ದೇಗುಲಕ್ಕೆ ಮೂರು ವರ್ಷಗಳ ಅವಧಿಗೆ ಆಡಳಿತ ಮಂಡಳಿ ರಚಿಸಿ 2020ರ ಅಕ್ಟೋಬರ್ 27ರಂದು ಆದೇಶಿಸಲಾಗಿತ್ತು. ಸಮಿತಿ ತನ್ನ ಮೊದಲ ಸಭೆಯನ್ನು 2021ರ ಎಪ್ರಿಲ್ 26ರಂದು ನಡೆಸಿತ್ತು. ಆದ್ದರಿಂದ ಅಂದಿನಿಂದ ಮೂರು ವರ್ಷಗಳ ಅವಧಿಗೆ ಅಂದರೆ, 2024ರ ಎಪ್ರಿಲ್ 26ರ ವರೆಗೂ ವಿಸ್ತರಿಸಬೇಕು ಎಂದು ಕೋರಿ ಸದಸ್ಯರಾದ ಕೆರಾಡಿ ಚಂದ್ರಶೇಖರ ಶೆಟ್ಟಿ, ಅತುಲ್ ಕುಮಾರ್ ಶೆಟ್ಟಿ, ರತ್ನಾ, ಎಚ್. ಜಯಾನಂದ, ಕೆ.ರಾಮಚಂದ್ರ ಅಡಿಗ ಹಾಗೂ ಗೋಪಾಲಕೃಷ್ಣ ಅವರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಮಧ್ಯಾಂತರ ಅರ್ಜಿ ಸಲ್ಲಿಸಿದ್ದ ಸಮಿತಿ ಸದಸ್ಯೆ ಸಂಧ್ಯಾ ರಮೇಶ್, ಸಮಿತಿ ಅವಧಿ ಪೂರ್ಣಗೊಂಡಿರುವುದರಿಂದ ಮುಂದುವರಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ