ಆರೋಗ್ಯಾಧಾರ ಸ್ತಂಭ: ಕೋವಿಡ್ ಕಲಿಸಿದ ಪಾಠ
Team Udayavani, Feb 1, 2021, 11:07 PM IST
ಕೊರೊನಾ ಸಾಂಕ್ರಾಮಿಕದಿಂದ ವಿವಿಧ ದೇಶಗಳು, ಅಲ್ಲಿನ ಸರ್ಕಾರಗಳು ಅನೇಕ ಪಾಠಗಳನ್ನು ಕಲಿತಿವೆ. ಅದರಲ್ಲೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂಬ ದೊಡ್ಡಪಾಠವನ್ನು ಕಲಿತಿವೆ. ಅದಕ್ಕೆ ಸ್ಪಷ್ಟ ಉದಾಹರಣೆ ಈ ಬಾರಿಯ ಕೇಂದ್ರ ಬಜೆಟ್. ಬಜೆಟ್ನ ಆಧಾರ ಸ್ತಂಭ ಆರೋಗ್ಯ ಕ್ಷೇತ್ರವಾಗಿದ್ದು, ಇದಕ್ಕಾಗಿ ಹಿಂದಿನ ಬಜೆಟ್ಗಳಿಗಿಂತಲೂ ಶೇ. 137 ರಷ್ಟು ಹೆಚ್ಚು ಅನುದಾನ ನೀಡಲಾಗಿದೆ.
ಕೊರೊನಾ ಸಾಂಕ್ರಾಮಿಕ ಕಾಣಿ ಸಿ ಕೊಂಡ ನಂತರ ಬಂದಿರುವ ಕೇಂದ್ರ ಸರ್ಕಾರದ ಮೊದಲ ಬಜೆಟ್ ಇದಾಗಿದ್ದು, ದೇಶದ ಆರ್ಥಿಕ ಅಭಿವೃದ್ಧಿಯ ಜತೆಗೆ ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ಹೊಣೆಗಾರಿಕೆ ಹೆಚ್ಚಿತ್ತು. ಅಲ್ಲದೆ, ಇತರೆ ಕ್ಷೇತ್ರಗಳಿಗಿಂತಲೂ ಆರೋಗ್ಯ ವಲಯಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ ಎಂಬ ನಿರೀಕ್ಷೆಯೂ ಇತ್ತು. ಅಂತೆಯೇ ಬಜೆಟ್ ನಮ್ಮ ನಿರೀಕ್ಷೆಯನ್ನು ನಿಜವಾಗಿಸಿದೆ.
ಈ ಬಾರಿಯ ಬಜೆಟ್ನಲ್ಲಿ ಆರೋಗ್ಯ ವಲಯವೇ ಆಧಾರ ಸ್ತಂಭವಾಗಿದೆ. ಕಳೆದ ಹಣ ಕಾಸು ವರ್ಷಕ್ಕೆ ಹೋಲಿಸಿದರೆ ಶೇ. 137 ರಷ್ಟು ಹೆಚ್ಚು ಅಂದರೆ ಬರೋಬ್ಬರಿ 2.2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿಯೂ ಅಗತ್ಯವಿದ್ದರೆ ಆರೋಗ್ಯ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚು ಅನುದಾನ ನೀಡಲು ಬದ್ಧವಾಗಿದೆ ಎಂಬ ಸ್ಪಷ್ಟ ಸಂದೇಶವನ್ನೂ ನೀಡಲಾಗಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಎದುರಾದ ಹಾಸಿಗೆ ಸಮಸ್ಯೆಗಳಿದ ಪಾಠ ಕಲಿತು, ಆಸ್ಪತ್ರೆಗಳಲ್ಲಿ ತುರ್ತು ನಿಗಾ ಹಾಸಿಗೆ (ಐಸಿಯು ಬೆಡ್) ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಕೇಂದ್ರ ಬಜೆಟ್ : ಚಿನ್ನ, ಬೆಳ್ಳಿ ಸುಂಕ ಇಳಿಕೆ ; ಎನ್ಆರ್ಐಗಳಿಗೆ ಅನುಕೂಲ
ಕೊರೊನಾ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಲಸಿಕೆ ಪ್ರಮುಖ ಪಾತ್ರವಹಿಸುತ್ತದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೊರೊನಾ ಲಸಿಕೆ ಉತ್ಪಾದನೆ, ಪೂರೈಕೆ, ವಿತರಣೆಯು ಪ್ರಮುಖವಾಗಿರಲಿದ್ದು, ಅದಕ್ಕಾಗಿ 30 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಇದರಲ್ಲಿ ಆದ್ಯತಾ ವಲಯ ಮತ್ತು ಬಡ ಜನತೆಗೆ ಲಸಿಕೆ ಉಚಿತ ವಿತರಣೆಯಾದರೆ ಅನುಕೂಲವಾಗುತ್ತದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಕೊರೊನಾ ಪರಿಸ್ಥಿತಿ ನೋಡಿಕೊಂಡು ಇನ್ನಷ್ಟು ಅನುದಾನ ನೀಡುವ ಭರವಸೆಯನ್ನು ವಿತ್ತ ಸಚಿವರು ನೀಡಿರುವುದು ಪ್ರಮುಖ ನಡೆಯಾಗಿದೆ.
ರೋಗ ಬಂದ ನಂತರ ಚಿಕಿತ್ಸೆ ನೀಡುವುದಕ್ಕಿಂತ, ರೋಗವೇ ಹರಡದಂತೆ ವಾತಾವರಣ ನಿರ್ಮಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಜನರಿಗೆ ಶುದ್ಧ ಗಾಳಿ, ಶುದ್ಧ ನೀರು, ಉತ್ತಮ ಪರಿಸರ ಕಲ್ಪಿಸಿಕೊಡುವುದಕ್ಕೆ, ಸ್ವಾಸ್ಥ್ಯ ಕೇಂದ್ರಗಳ ಉನ್ನತೀಕರಣಕ್ಕೆ ಹೆಚ್ಚು ಅನುದಾನ ನೀಡಿರುವುದು ಸ್ವಾಗತಾರ್ಹ. ಇನ್ನು ಮೀಸಲಿಟ್ಟ ಅನುದಾನ ಸದ್ಬಳಕೆ ಮುಖ್ಯವಾಗಿದ್ದು, ಯೋಜನೆಗಳ ಅನುಷ್ಠಾನ ಪರಿಣಾಮಕಾರಿ ಮತ್ತು ವೇಗವಾಗಿರಬೇಕಿದೆ. ಒಟ್ಟಾರೆ ಬಜೆಟ್ಗೆ 10ಕ್ಕೆ 8 ಅಂಕಗಳನ್ನು ನೀಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ