ಟಾಂಗಾವಾಲಾಗಳ ಬದುಕು ಜಟಕಾ ಬಂಡಿ

ಮೇವಿನ ಅಲಭ್ಯತೆಯಿಂದ ಕುದುರೆಗಳ ನಿರ್ವಹಣೆ ಕಷ್ಟ ; ಹೆಚ್ಚಿದ ಆಟೋ ರಿಕ್ಷಾ-ಟಂಟಂಗಳ ಹಾವಳಿ

Team Udayavani, Jun 12, 2022, 4:34 PM IST

19

ಗದಗ: ಸ್ವಾತಂತ್ರ್ಯ ಪೂರ್ವದಿಂದಲೂ ಗದಗ-ಬೆಟಗೇರಿ ಅವಳಿನಗರದಲ್ಲಿ ಪರಿಸರ ಸ್ನೇಹಿಯಾಗಿ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದ ಟಾಂಗಾಗಳು ಇಂದು ಅಳಿವಿನಂಚಿಗೆ ಸರಿಯುತ್ತಿವೆ.

ಹಲವು ದಶಕಗಳ ಕಾಲ ಬಹುಬೇಡಿಕೆಯಲ್ಲಿದ್ದ ಟಾಂಗಾಗಳು ಕುದುರೆಗಳ ನಿರ್ವಹಣೆ, ಪ್ರಯಾಣಿಕರ ಕೊರತೆ, ಮೇವಿನ ಅಲಭ್ಯತೆಯ ಸಂಕಷ್ಟ ಹಾಗೂ ಆಟೋ ರಿಕ್ಷಾ ಹಾಗೂ ಟಂಟಂಗಳ ಹೆಚ್ಚಳದಿಂದಾಗಿ ಟಾಂಗಾಗಳ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದೆ.

1960ರ ಸಮಯದಲ್ಲಿ ಗದಗ-ಬೆಟಗೇರಿ ಅವಳಿ ನಗರದ ವಿವಿಧ ಬಡಾವಣೆ ಹಾಗೂ ಓಣಿಗಳಲ್ಲಿ 24 ಟಾಂಗಾ ನಿಲ್ದಾಣಗಳಿದ್ದವು. 800ಕ್ಕೂ ಹೆಚ್ಚು ಟಾಂಗಾಗಳಿದ್ದವು. ರೈಲು, ಬಸ್‌ ನಿಲ್ದಾಣ ಸೇರಿ ಸುತ್ತಮುತ್ತಲಿನ ವಸತಿ ಪ್ರದೇಶಗಳಿಗೆ ತೆರಳಲು ಪ್ರಯಾಣಿಕರು ಟಾಂಗಾಗಳನ್ನೇ ಅವಲಂಬಿಸಿದ್ದರು.

ಜತೆಗೆ ಚುನಾವಣೆ, ನಾಟಕ, ವ್ಯಾಪಾರ, ಸಿನಿಮಾ ಪ್ರದರ್ಶನ ಪ್ರಚಾರ ಹೀಗೆ ಅನೇಕ ರೀತಿಯ ಪ್ರಚಾರಗಳಿಗೆ ಟಾಂಗಾಗಳನ್ನೇ ಬಳಸಲಾಗುತ್ತಿತ್ತು. ಕಾಲಕ್ರಮೇಣ ಆಟೋ ರಿಕ್ಷಾ, ಟಂಟಂ ಹಾವಳಿಯಿಂದ ಟಾಂಗಾಗಳು ಅಳಿವಿನಂಚಿಗೆ ಸರಿಯುತ್ತಿವೆ. ಸದ್ಯ ನಗರದ ನವೀಕರಣಗೊಂಡ ಪಂಡಿತ್‌ ಪುಟ್ಟರಾಜ ಬಸ್‌ ನಿಲ್ದಾಣ ಹಾಗೂ ರೈಲು ನಿಲ್ದಾಣದಲ್ಲಿ ಕೇವಲ 20ರಿಂದ 25 ಟಾಂಗಾಗಳು ನಗರದಲ್ಲಿ ಸಂಚರಿಸುತ್ತಿವೆ.

ಗದಗ ನಗರದ ಪ್ರಮುಖ ಸ್ಥಳ ಟಾಂಗಾಕೂಟ. ತರಕಾರಿ, ದಿನಸಿ, ಚಿನ್ನಾಭರಣ, ಬಟ್ಟೆ ಹಾಗೂ ಇತರೆ ವಸ್ತುಗಳ ಖರೀದಿಗಾಗಿ ಮಾರುಕಟ್ಟೆಗೆ ಹತ್ತಿರವಾಗಿದ್ದ ಟಾಂಗಾಕೂಟದಲ್ಲಿ ನಿತ್ಯ ಕನಿಷ್ಟ 20ರಿಂದ 25 ಟಾಂಗಾಗಳು ನಿಲ್ಲುತ್ತಿದ್ದವು. ಈಗ ಟಾಂಗಾ ಕಾಣುವುದೇ ಅಪರೂಪವಾಗಿದೆ.

ಇನ್ನು, ಟಾಂಗಾಗಳನ್ನೇ ಉಪಜೀವನವನ್ನಾಗಿಸಿಕೊಂಡಿದ್ದ ಟಾಂಗಾವಾಲಾಗಳು ಜೀವನ ನಿರ್ವಹಿಸಲು ಸಾಧ್ಯವಾಗದೇ ಕೆಲವರು ಆಟೋ ರಿಕ್ಷಾ ಓಡಿಸುತ್ತಿದ್ದಾರೆ. ಹಲವರು ಗೌಂಡಿ ಹಾಗೂ ಕೂಲಿ ಕಾರ್ಮಿಕರಾಗಿದ್ದಾರೆ. ಇನ್ನೂ ಕೆಲವರು ಉದ್ಯೋಗವನ್ನರಸಿ ಗುಳೆ ಹೋಗಿದ್ದಾರೆ.

ಪುನರ್‌ ಬದುಕು ಕಟ್ಟಿಕೊಳ್ಳಲು ಮನವಿ: ಕಳೆದ ಎರಡ್ಮೂರು ತಿಂಗಳಿನಿಂದ ದಿನೇ ದಿನೆ ಪೆಟ್ರೋಲ್‌, ಡೀಸೆಲ್‌ ಗಗನಕ್ಕೇರುತ್ತಿದೆ. ಲೀಟರ್‌ ಪೆಟ್ರೋಲ್‌, ಡೀಸೆಲ್‌ ಶತಕದ ಗಡಿ ದಾಟಿದೆ. ಆದ್ದರಿಂದ ಇದರ ಪರ್ಯಾಯವಾಗಿ ಗದಗ-ಬೆಟಗೇರಿ ಅವಳಿ ನಗರದಲ್ಲಿ ಟಾಂಗಾಗಳಿಗೆ ಬೇಡಿಕೆ ಹೆಚ್ಚಿಸಲು ಜಿಲ್ಲಾಡಳಿತ ಹಾಗೂ ನಗರಸಭೆ ಯೋಜನೆ ರೂಪಿಸಬೇಕು. ಟಾಂಗಾವಾಲಾಗಳಿಗೆ ಪುನರ್‌ ಬದುಕು ಕಟ್ಟಿಕೊಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

ನಿರ್ವಹಣೆ ಸಂಕಷ್ಟ:

ಪ್ರತಿನಿತ್ಯ 100ರಿಂದ 150 ರೂಪಾಯಿ ಕುದುರೆ ನಿರ್ವಹಣೆಗೆ ಖರ್ಚಾಗುತ್ತದೆ. ತಲಾ ಒಂದು ಕುದುರೆಗೆ ವಾರಕ್ಕೆ 2 ಮಟ್ಟಿ ಮೇವು ಬೇಕು. 1 ಮಟ್ಟಿಗೆ (50 ಕೆಜಿ ಮೇವು) 500 ರೂ. ಹಾಗೂ ವರ್ಷಕ್ಕೆ ಟಾಂಗಾ ನಿರ್ವಹಣೆಗೆ ಕನಿಷ್ಠ 10 ಸಾವಿರ ರೂ. ಬೇಕು. ಇಂತಹ ಕಷ್ಟದ ಪರಿಸ್ಥಿತಿಯಲ್ಲೂ ಕೆಲವರು ಟಾಂಗಾವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಪರಿಸರ ಸ್ನೇಹಿಯಾಗಿರುವ ಟಾಂಗಾಗಳ ಸೇವೆಗೆ ಸರ್ಕಾರ ಅನುಕೂಲ ಕಲ್ಪಿಸಿಕೊಡಬೇಕು ಎನ್ನುತ್ತಾರೆ ಟಾಂಗಾವಾಲಾ ಫಕ್ಕೀರಪ್ಪ ಗೌಡರ.

ಸ್ವಾತಂತ್ರ್ಯ ಪೂರ್ವದಿಂದ 1990ರವರೆಗೂ ಟಾಂಗಾದಿಂದಲೇ ಉಪಜೀವನ ನಿರ್ವಹಿಸಿಕೊಂಡು ಹೋಗಲು ಸಾಧ್ಯವಾಯಿತು. ಅನಂತರ ರಸ್ತೆಗಿಳಿದ ಆಟೋ ರಿಕ್ಷಾ, ಟಂಟಂಗಳಿಂದ ಟಾಂಗಾವಾಲಾಗಳ ಬದುಕು ದುಸ್ತರವಾಯಿತು. ಇದರಿಂದ ಕೆಲವರು ಬೇರೆ ದುಡಿಮೆ ಗೊತ್ತಿಲ್ಲದೆ, ಮೂಲವೃತ್ತಿಯನ್ನು ಹೇಗೋ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. –ಇಮಾಮ್‌ ಹುಸೇನ್‌ ನಾಶಿಪುಡಿ, ಟಾಂಗಾವಾಲಾ.

ಸರ್ಕಾರ ವಿದ್ಯುತ್‌ ಚಾಲಿತ ವಾಹನಗಳಿಗೆ ನೀಡುತ್ತಿರುವ ಪ್ರೋತ್ಸಾಹದಂತೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಟಾಂಗಾ ಬಳಕೆಗೆ ಪ್ರಾಮುಖ್ಯತೆ ನೀಡಬೇಕಿದೆ. – ಗೌತಮ್‌ ಗದಗಿನ, ಪ್ರಯಾಣಿಕ

-ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.