ಸೂಕ್ತ ನಿರ್ವಹಣೆ ಇಲ್ಲದೆ ಸೊರಗುತ್ತಿದೆ ಪ್ರಮುಖ ಘಾಟಿ ರಸ್ತೆ
ಹುಲಿಕಲ್ ಘಾಟಿ ಪ್ರಯಾಣ: ಸವಾರರಿಗೆ ಭೀತಿ
Team Udayavani, Jun 15, 2020, 6:18 AM IST
ಸಿದ್ದಾಪುರ: ಹುಲಿಕಲ್ ಘಾಟಿ ರಸ್ತೆ ಶಿವಮೊಗ್ಗ ಜಿಲ್ಲೆ ಹಾಗೂ ಕರಾವಳಿ ಜಿಲ್ಲೆಗಳನ್ನು ಬೆಸೆಯುವ ಪ್ರಮುಖ ಘಾಟಿ ಸಂಪರ್ಕ ರಸ್ತೆ. ಇಲ್ಲಿ ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳ ಸಂಚಾರವಿದ್ದರೂ ಸೂಕ್ತ ನಿರ್ವಹಣೆ ಇಲ್ಲದೆ ವಾಹನ ಸವಾರರಿಗೆ ಭೀತಿ ಹುಟ್ಟಿಸಿದೆ.
ಈ ರಸ್ತೆ ಕೇವಲ ಎರಡು ಜಿಲ್ಲೆಗಳ ಮಧ್ಯೆ ಸಂಪರ್ಕ ಸೇತುವಾಗಿರದೆ ಬಳ್ಳಾರಿ-ದಾವಣಗೆರೆ ಮತ್ತಿತರ ಜಿಲ್ಲೆಗಳಿಂದಲೂ ಮಂಗಳೂರಿಗೆ ಸಂಪರ್ಕ ಹೊಂದಿರುವ ರಾಜ್ಯದ ಪ್ರಮುಖ ಹೆದ್ದಾರಿಯಾಗಿದೆ. ನಿತ್ಯ ಸಾವಿರಾರು ವಾಹನ ಗಳು ಸಂಚರಿಸುತ್ತಿದ್ದರೂ ಮುರಿದು ಬಿದ್ದ ತಡೆಬೇಲಿಯ ದುರಸ್ತಿ ಕಾರ್ಯ ಮಾತ್ರ ಇನ್ನೂ ನಡೆದಿಲ್ಲ. ಮಳೆಗಾಲ ಆರಂಭಗೊಂಡಿದ್ದರಿಂದ ಪೊದೆಗಳು, ಮರಮಟ್ಟುಗಳು ರಸ್ತೆಗೆ ವಾಲಿಕೊಂಡಿವೆ. ಇದರಿಂದ ವಾಹನ ಸವಾರರಿಗೆ ಇನ್ನೂ ಹೆಚ್ಚಿನ ಅಪಾಯ ಎದುರಾಗುತ್ತಿದೆ.
ಚರಂಡಿ ಹೂಳೆತ್ತುವುದು ಅಗತ್ಯ
ಈ ರಸ್ತೆಗೆ ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲ. ಒಂದೆಡೆ ಬಂಡೆ ಕಲ್ಲಿನಿಂದಾವೃತ ವಾದ ಗುಡ್ಡವಾದರೆ, ಇನ್ನೊಂದೆಡೆ ಚರಂಡಿ ನಿರ್ಮಿಸಲು ಭಾರೀ ಕಂದಕವಿದೆ.
ನಿರ್ಮಿಸಿದ ಚರಂಡಿಯಲ್ಲಿ ಹೂಳುತುಂಬಿ ಮಳೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದಾಗಿ ರಸ್ತೆ ಹಾಳಾಗುತ್ತಿದೆ. ನಿತ್ಯವೂ ಘನ ವಾಹನಗಳು ಸಂಚರಿಸುತ್ತವೆ. ರಸ್ತೆ ಹಾಳಾಗುವ ಮೊದಲು ಚರಂಡಿ ಸ್ವತ್ಛಗೊಳಿಸಬೇಕಿದೆ.
ಇಕ್ಕೆಲಗಳಲ್ಲಿ ಪೊದೆ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದು ನಿಂತ ಬೃಹದಾಕಾರದ ಮರ, ಪೊದೆ, ಗಿಡಗಂಟಿ ಗಳಿಂದ ತಿರುವಿನಲ್ಲಿ ಎದುರಿನಿಂದ ಬರುವ ವಾಹನಗಳು ಕಾಣಿಸದೆ ಅಪಘಾತಗಳು ಸಂಭವಿಸುತ್ತಿವೆ. ಘಾಟಿ ರಸ್ತೆ ರಾಜ್ಯ ಹೆದ್ದಾರಿಯಾಗಿದ್ದರೂ ಕೂಡ, ಗುಣಮಟ್ಟದ ರಸ್ತೆಯಾಗಿಲ್ಲ. ಇಂದಿಗೂ ಕೂಡ ಇಲ್ಲಿ ಘನ ವಾಹನಗಳಿಗೆ ಸರಾಗವಾಗಿ ಸಂಚರಿಸ ಲಾಗುತ್ತಿಲ್ಲ. ರಸ್ತೆಯ ಇಕ್ಕೆಡೆಗಳಲ್ಲಿ ಬೆಳೆ ದಿರುವ ಪೊದೆಗಳು, ಗಿಡಗಂಟಿಗಳನ್ನು ತೆರವುಗೊಳಿಸಿದರೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.
ಪರ್ಯಾಯ ಈ ಘಾಟಿರಸ್ತೆ ಇಲ್ಲಿ ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಘಾಟಿಗಳು ವಾಹನಗಳ ದಟ್ಟಣೆಯಿಂದಾಗಿ ಕುಸಿದು ಸಂಚಾರ ಕಡಿತವಾಗುತ್ತದೆ. ಇವೆಲ್ಲದರ ಪರಿಣಾಮ ರಾಷ್ಟ್ರೀಯ ಹೆದ್ದಾರಿ ಬದಲಿ ಹೆದ್ದಾರಿಯಾಗಿ ಬಾಳೆಬರೆ ಘಾಟಿಯನ್ನು ಮೇಲ್ದರ್ಜೆಗೇರಿಸಬೇಕಾಗಿದೆ.
ಶಾಶ್ವತ ಗೋಡೆ ನಿರ್ಮಾಣ
ಹುಲಿಕಲ್ ಘಾಟಿಯ ಬಾಳೆಬರೆ ದೇಗುಲದ ಬಳಿ ಅಪಾಯಕಾರಿ ತಿರುವು ಇದೆ. ರಸ್ತೆ ವಿಸ್ತರಣೆಗೆ ಅರಣ್ಯ ಇಲಾಖೆಯೊಂದಿಗೆ ಇರುವ ಸಮಸ್ಯೆಯನ್ನು ಬಗೆಹರಿಸಿಕೊಂಡು ನೂತನ ತಂತ್ರಜ್ಞಾನದೊಂದಿಗೆ ಶಾಶ್ವತ ತಡೆಗೋಡೆ ನಿರ್ಮಿಸುವ ಯೋಜನೆ ರೂಪಿಸಲಾಗುತ್ತಿದೆ. ಈ ಯೋಜನೆಯಡಿ ರಸ್ತೆ ವಿಸ್ತರಣೆಯೊಂದಿಗೆ ಶಾಶ್ವತ ತಡೆಗೋಡೆ ನಿರ್ಮಿಸಲಾಗುವುದು.
-ಶೇಷಪ್ಪ, ಎಇಇ ಲೋಕೋಪಯೋಗಿ ಇಲಾಖೆ, ಹೊಸನಗರ ಉಪವಿಭಾಗ
ಶಾಶ್ವತ ತಡೆಗೋಡೆಗೆ
ಸರಕಾರಕ್ಕೆ ಪತ್ರ
ಪ್ರತಿ ವರ್ಷ ಹೆದ್ದಾರಿ ನಿರ್ವಹಣೆ ಕಾರ್ಯ ಮಾಡಲಾಗುತ್ತಿದೆ. ಆದರೆ ಈ ಬಾರಿ ಇನ್ನೂ ಕಾಮಗಾರಿ ಆರಂಭಿಸಿಲ್ಲ. ರಸ್ತೆಗೆ ಅಡ್ಡಲಾಗಿ ಬಿದ್ದ ಮರ ಗಳನ್ನು ಅರಣ್ಯ ಇಲಾಖೆ ತೆರವುಗೊಳಿಸಲಿದೆ. ಇನ್ನೆರಡು ಮೂರು ದಿನಗಳಲ್ಲಿ ಚರಂಡಿ ಯಲ್ಲಿ ತುಂಬಿರುವ ಹೂಳೆತ್ತ ಲಾಗುವುದು. ದೊಡ್ಡ ಮಟ್ಟದ ಸಮಸ್ಯೆ ಇದ್ದರೆ ಪರಿಶೀಲನೆ ನಡೆಸಿ, ಶಾಶ್ವತ ತಡೆಬೇಲಿ ನಿರ್ಮಾಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯಲಾಗುವುದು.
-ದುರ್ಗಾದಾಸ್, ಎಇಇ
ಲೋಕೋಪಯೋಗಿ ಇಲಾಖೆ ಉಡುಪಿ ಜಿಲ್ಲೆ ಉಪವಿಭಾಗ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ