ಹೈಕೋರ್ಟ್ ಮೆಟ್ಟಿಲೇರಿದ ನಂಜನಗೂಡು ಜುಬಿಲಿಯಂಟ್ ಪ್ರಕರಣ
Team Udayavani, Apr 17, 2020, 4:57 AM IST
ಬೆಂಗಳೂರು: ದೊಡ್ಡ ಸಂಖ್ಯೆಯಲ್ಲಿ ಕೋವಿಡ್-19 ಪಾಸಿಟಿವ್ ಕೇಸ್ಗಳು ವರದಿಯಾಗಿರುವ ಮೈಸೂರು ಜಿಲ್ಲೆ ನಂಜನಗೂಡಿನ ಜುಬಿಲಿಯಂಟ್ ಜೆನೆರಿಕ್ ಕಂಪೆನಿಯ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ.
ಈ ಕುರಿತು “ಸೇವ್ ನಂಜನ ಗೂಡು ಫೋರಂ’ ಸಂಚಾಲಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದಿದ್ದು, ಈ ಪತ್ರ ವನ್ನು ಅರ್ಜಿಯನ್ನಾಗಿ ಪರಿವರ್ತಿಸಿ ಕೊಂಡು ಎ. 21ರಂದು ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯ ಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ಹೇಳಿದೆ.
ನಂಜನಗೂಡಿನಲ್ಲಿ 25ಕ್ಕೂ ಹೆಚ್ಚು ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಚೀನದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದ ಸಂದರ್ಭ ಅಲ್ಲಿಂದ ಕಂಟೈನರ್ 2019ರ ಡಿಸೆಂಬರ್ನಲ್ಲಿ ಇಲ್ಲಿಗೆ ಬಂದು ಹೋಗಿದೆ. ಹಲವು ಬಹುರಾಷ್ಟ್ರೀಯ ಕಂಪೆನಿಗಳ ಪ್ರತಿನಿಧಿಗಳು ಇಲ್ಲಿಗೆ ಬಂದು ಹೋಗಿದ್ದಾರೆ. ಆದ್ದರಿಂದ ಇಡೀ ನಂಜನಗೂಡು ಪಟ್ಟಣವನ್ನು ತಪಾಸಣೆಗೊಳಪಡಿಸಬೇಕು ಎಂದು ಎಂದು ಪತ್ರದಲ್ಲಿ ವಿವರಿಸಲಾಗಿದೆ.