ಸಾವಿರ ಗಡಿ ದಾಟಿದ ಸಕ್ರಿಯ ಸೋಂಕಿತರ ಸಂಖ್ಯೆ


Team Udayavani, May 23, 2020, 6:58 AM IST

covid-1000

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರವೂ ಕೋವಿಡ್‌ 19 ಸೋಂಕು ಪ್ರಕರಣಗಳು ಶತಕದ ಗಡಿ ಮೀರಿ ದಾಖಲಾಗುತ್ತಲೇ ಇದ್ದು, ಈಗ ಸಕ್ರಿಯ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಹೊರರಾಜ್ಯದಿಂದ ಬಂದವರ ಸೋಂಕು ಪ್ರಕರಣಗಳು ಮುಂದುವರಿದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 138 ಸೋಂಕು ಪ್ರಕರಣಗಳು ದೃಢಪಟ್ಟಿವೆ. ದಾಖಲಾದ 138 ಪ್ರಕರಣಗಳಲ್ಲಿ 115 ರಲ್ಲಿ ಸೋಂಕಿತರು ಹೊರ ರಾಜ್ಯದಿಂದ ಬಂದವರು. ರಾಜ್ಯದ ಒಟ್ಟಾರೆ  ಸೋಂಕು ಪ್ರಕರಣಗಳ ಸಂಖ್ಯೆ 1,743ಕ್ಕೆ ಏರಿಕೆಯಾಗಿದೆ.

ಶುಕ್ರವಾರ ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಯಚೂರು, ಬೀದರ್‌, ತುಮ  ಕೂರು, ಹಾವೇರಿ, ಬೆಂಗಳೂರು ಗ್ರಾಮಾಂತರ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ  ಮಹಾರಾಷ್ಟ್ರದ ವಿವಿಧೆ ಡೆಯಿಂದ ಬಂದವರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಪೈಕಿ ಬಹುತೇಕರು ಹೊಟ್ಟೆ ಪಾಡಿಗಾಗಿ ವಲಸೆ ಹೋಗಿದ್ದವರು. ಮುಂದಿನ ದಿನಗಳಲ್ಲಿ ಈ ಜಿಲ್ಲೆಗಳಿಗೆ ಹೊರರಾಜ್ಯಗಳಿಂದ ಮರಳಿರುವ  ಇನ್ನಷ್ಟು ವಲಸೆ ಕಾರ್ಮಿರ ಸೋಂಕು ಪರೀಕ್ಷಾ ವರದಿ ಬರಲಿದ್ದು, ಸೋಂಕು ಪ್ರಕರಣಗಳು ಹೆಚ್ಚಳವಾಗುವ ಆತಂಕವಿದೆ.

ಚಿಕ್ಕಬಳ್ಳಾಪುರ ಜಿಲ್ಲೆಗೆ ದಿಗಿಲು: ಶುಕ್ರವಾರ ಚಿಕ್ಕಬಳ್ಳಾಪುರದಲ್ಲಿ 47 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಗೆ ದಿಗಿಲು ಬಡಿದಂತಾಗಿದೆ. ಎಲ್ಲಾ ಸೋಂಕಿತರು ಗೌರಿಬಿದನೂರಿನವರಾಗಿದ್ದು, ಮೂರು ದಿನಗಳ ಹಿಂದೆ  ಮಹಾರಾಷ್ಟ್ರದಿಂದ ಬಂದಿದ್ದರು. ಹೊರರಾಜ್ಯದಿಂದ ಬಂದ ಹಿನ್ನೆಲೆ ಕ್ವಾರಂಟೈನ್‌ ಮಾಡಿ ಎಲ್ಲರ ಗಂಟಲು ದ್ರಾವಣ ಸಂಗ್ರಹಿಸಿ ಆರೋಗ್ಯ ಪರೀಕ್ಷೆ ನಡೆಸಿದ್ದಾಗ ಸೋಂಕು ತಗುಲಿರುವುದು ಪತ್ತೆಯಾಗಿದೆ. ಒಟ್ಟಾರೆ ಜಿಲ್ಲೆಯ ವಿವಿಧ  ತಾಲೂಕುಗಳಿಗೆ 247 ಮಂದಿ ಮಹಾರಾಷ್ಟ್ರದಿಂದ ಬಂದಿದ್ದಾರೆ. ಶುಕ್ರವಾರದವರೆಗೂ 108 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದ್ದು. 47 ಪಾಸಿಟಿವ್‌ ಆಗಿದೆ. ಬಾಕಿ 139 ಮಂದಿಯ ಸೋಂಕು ಪರೀಕ್ಷಾ ವರದಿ ಬರಬೇಕಿದೆ ಎಂದು  ಆರೋಗ್ಯ ಇಲಾಖೆ ತಿಳಿಸಿದೆ.

ಹಾಸನದಲ್ಲಿ ಹೆಚ್ಚಿದ ಸೋಂಕಿತರು: ಮುಂಬೈನಿಂದ ಬಂದ ವಲಸೆ ಕಾರ್ಮಿಕರಲ್ಲಿ ಸೋಂಕು ಪ್ರಕರಣಗಳು ಮಂಡ್ಯದಲ್ಲಿ ತುಸು ಕಡಿಮೆಯಾದರೂ, ಹಾಸನದಲ್ಲಿ ಮಾತ್ರ ನಿರಂತರ ಹೆಚ್ಚಳವಾಗುತ್ತಿದೆ. ಒಂಭತ್ತು ಪುರುಷರು, ಐವರು  ಮಹಿಳೆಯರು ಸೇರಿ 14 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಹಾಸನದ ವಿವಿಧೆಡೆಗೆ ಆಗಮಿಸಿರುವ ಇನ್ನಷ್ಟು ವಲಸೆ ಕಾರ್ಮಿಕರ ಸೋಂಕು ಪರೀಕ್ಷಾ ವರದಿ ಮುಂದಿನ ದಿನಗಳಲ್ಲಿ ಲಭ್ಯವಾಗಲಿವೆ. ಜಿಲ್ಲೆಯ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 80ಕ್ಕೆ ಏರಿಕೆಯಾಗಿದ್ದು, ಎಲ್ಲಾ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

23 ಸ್ಥಳೀಯ ಸೋಂಕು ಪ್ರಕರಣಗಳು: ಹೊರರಾಜ್ಯ  ದಿಂದ ಬಂದವರ ಸೋಂಕು ಪ್ರಕರಣಗಳನ್ನು ಹೊರತುಪಡಿಸಿ ಸ್ಥಳೀಯ ಸೋಂಕಿತರ ಸಂಪರ್ಕ, ಉಸಿರಾಟ ಸಮಸ್ಯೆ, ಜ್ವರ ಹಿನ್ನೆಲೆ ಹೊಂದಿರುವ 23 ಪ್ರಕರಣಗಳು ವರದಿಯಾಗಿದೆ.  ಈ ಪೈಕಿ ಬೆಂಗಳೂರಿನಲ್ಲಿ ನಾಲ್ಕು, ದಾವಣಗೆರೆ ಮತ್ತು ಬೀದರ್‌ನಲ್ಲಿ ತಲಾ ಮೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ ಹಾಗೂ ಶಿವಮೊಗ್ಗ ತಲಾ ಇಬ್ಬರು, ಹಾವೇರಿ, ಬಾಗಲಕೋಟೆ ಹಾಗೂ ಚಿತ್ರದುರ್ಗದಲ್ಲಿ ತಲಾ ಒಬ್ಬರು  ಸೋಂಕಿತರಾಗಿದ್ದಾರೆ. ಉಳಿದಂತೆ ಬೆಂಗಳೂರು, ತುಮಕೂರಿನಲ್ಲಿ ತಲಾ ಇಬ್ಬರ ಸೋಂಕಿತರ ಸಂಪರ್ಕ ಹಿನ್ನೆಲೆ ಪತ್ತೆ ಮಾಡಲಾಗುತ್ತಿದೆ.

26 ಮಂದಿ ಗುಣಮುಖ: ಸೋಂಕಿತರ ಪೈಕಿ ದಾವಣಗೆರೆ 7, ಬೆಂಗಳೂರು ನಗರ 6, ಕಲಬುರಗಿ 5, ವಿಜಯಪುರ 4, ಬಾಗಲಕೋಟೆ ಇಬ್ಬರು, ಬೆಳಗಾವಿ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ ಒಬ್ಬರು ಸೇರಿ ಒಟ್ಟು 26 ಮಂದಿ  ಗುಣಮುಖರಾಗಿದ್ದಾರೆ. ಒಟ್ಟಾರೆ 597 ಮಂದಿ ಗುಣಮುಖರಾದಂತಾಗಿದೆ.

ತೀವ್ರ ನಿಗಾಘಟಕದಲ್ಲಿ 19 ಮಂದಿ: ಎರಡು ವಾರಗಳ ಹಿಂದೆ ರಾಜ್ಯದಲ್ಲಿ ಸೋಂಕಿತರಿಗಿಂತ ಗುಣಮುಖದಾದವರ ಸಂಖ್ಯೆ ಹೆಚ್ಚಿತ್ತು. ಆದರೆ, ವಾರದಿಂದ ಸೋಂಕಿತ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮೂರು ದಿನ ಶತಕ ಗಡಿ ದಾಟಿವೆ.  ಸದ್ಯ ರಾಜ್ಯದ 1,743 ಸೋಂಕು ಪ್ರಕರಣಗಳಲ್ಲಿ 597 ಮಂದಿ ಗುಣಮುಖರಾಗಿದ್ದು, 42 ಮಂದಿ ಸಾವಿಗೀಡಾಗಿದ್ದಾರೆ. ಬಾಕಿ 1,104 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 19 ಮಂದಿ ತೀವ್ರ ನಿಗಾಘಟಕದಲ್ಲಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.