ಅನರ್ಹ ಶಾಸಕರ ಮುಂದಿನ ಹಾದಿ ನಿಗೂಢ


Team Udayavani, Aug 3, 2019, 3:09 AM IST

anarha

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದೊಂದು ತಿಂಗಳಲ್ಲಿ ಉಂಟಾದ ದಿಢೀರ್‌ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅನರ್ಹಗೊಂಡಿರುವ 17 ಶಾಸಕರ ಮುಂದಿನ ನಡೆಯೇನು ಎಂಬುದು ನಿಗೂಢವಾಗಿದೆ. ಒಂದು ವೇಳೆ, ಸುಪ್ರೀಂಕೋರ್ಟ್‌ ಈ ಶಾಸಕರ ಅನರ್ಹತೆಯನ್ನು ಅನೂರ್ಜಿತಗೊಳಿಸಿದರೆ ಮುಂದೇನು? ಸುಪ್ರೀಂಕೋರ್ಟ್‌ ಮಧ್ಯಪ್ರವೇಶಿಸಿ, ಇವರ ಅನರ್ಹತೆ ರದ್ದುಪಡಿಸಿ, ರಾಜೀನಾಮೆ ಅಂಗೀಕರಿಸಿದರೆ ಉಪ ಚುನಾವಣೆಯಲ್ಲಿ ಎಲ್ಲರೂ ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆ ಮೂಡಿದೆ.

ಯಾಕೆಂದರೆ, ಅನರ್ಹತೆಗೊಂಡಿರುವ ಶಾಸಕರಲ್ಲಿ ಕೆಲವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಿದ್ದರೆ, ಮತ್ತೆ ಕೆಲವರು ಪಕ್ಷೇತರರಾಗಿ ಸ್ಪರ್ಧೆ ಮಾಡ್ತೇವೆ ಎಂದು ಹೇಳುತ್ತಿರುವುದರಿಂದ ಅವರ ನಡೆ ಕುತೂಹಲಕ್ಕೆ ಕಾರಣವಾಗಿದೆ. ಈ ಮಧ್ಯೆ, ಎಚ್‌.ವಿಶ್ವನಾಥ್‌ ಸೇರಿ ಕೆಲವರು ಉಪ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ವಿಧಾನಪರಿಷತ್‌ ಸದಸ್ಯರಾಗಿ ಸಚಿವರಾಗಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ. ಜತೆಗೆ, “ನಾನು ಬಿಜೆಪಿ ಸೇರುವುದಿಲ್ಲ. ಹೀಗಾಗಿ, ಅನರ್ಹತೆಗೊಂಡಿರುವವರೆಲ್ಲಾ ಸೇರಿ ಹೊಸ ಪಕ್ಷ ಕಟ್ಟಬಾರದೇಕೆ’ ಎಂದೂ ಹೇಳಿದ್ದಾರೆ. ಹೀಗಾಗಿ, ಸುಪ್ರೀಂಕೋರ್ಟ್‌ ಮೊರೆ ಹೋಗಿರುವ ಅನರ್ಹತೆಗೊಂಡಿರುವ ಶಾಸಕರ ಮುಂದಿನ ನಡೆ ಹಾಗೂ ರಾಜಕೀಯ ಹೆಜ್ಜೆ ಏನಿರಬಹುದು ಎಂದು ರಾಜಕೀಯ ವಲಯಗಳಲ್ಲಿ ಚರ್ಚೆ ನಡೆದಿದೆ.

ಹಿಂದೆ ನರೇಂದ್ರಸ್ವಾಮಿ, ಶಿವರಾಜ ತಂಗಡಗಿ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ಒಂದು ವರ್ಷಕ್ಕೂ ಮೇಲ್ಪಟ್ಟು ನಡೆದ ಕಾರಣ ಅದುವರೆಗೂ ಉಪ ಚುನಾವಣೆಯೂ ಘೋಷಣೆಯಾಗಿರಲಿಲ್ಲ. ಈಗಲೂ ಪ್ರಕರಣ ಇತ್ಯರ್ಥವಾಗುವವರೆಗೆ ಉಪ ಚುನಾವಣೆ ದಿನಾಂಕ ನಿಗದಿ ಅನುಮಾನವೇ ಎಂದೂ ಹೇಳಲಾಗುತ್ತಿದೆ. ಅನರ್ಹತೆಗೊಂಡಿರುವ ಶಾಸಕರಾದ ಎಂ.ಟಿ.ಬಿ. ನಾಗರಾಜ್‌, ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವ ರಾಜ್‌ ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇವೆ. ಜನರು ಬಯಸಿದರೆ ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತೇವೆ ಎಂಬ ಮಾತುಗಳನ್ನು ಆಡುತ್ತಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಅನರ್ಹಗೊಂಡಿರುವ ಶಾಸಕರ ವಿಚಾರ ನ್ಯಾಯಾಲ ಯದ ಅಂಗಳಕ್ಕೆ ಹೋಗಿದ್ದು, ಅಲ್ಲಿಂದ ಇತ್ಯರ್ಥ ಗೊಂಡ ನಂತರವಷ್ಟೇ ಮುಂದಿನ ವಿಚಾರ ಅಲ್ಲವೇ ಎಂಬ ವಾದವನ್ನು ಬಿಜೆಪಿ ನಾಯಕರು ಮುಂದಿಡು ತ್ತಾರೆ. ಹೀಗಾಗಿ, ಬಿಜೆಪಿಯ ನಡೆಯ ಹಿಂದೆ ನಾನಾ ಲೆಕ್ಕಾಚಾರಗಳು ಇರುವ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಅನರ್ಹತೆಯಾಗಿರುವ ಶಾಸಕರ ಪರ ನ್ಯಾಯಾಲಯ ದಲ್ಲಿ ತೀರ್ಪು ಬಂದರೆ ಅವರು ಪಕ್ಷೇತರರಾಗಿಯೇ ಸ್ಪರ್ಧೆ ಮಾಡಿದರೆ ಬಿಜೆಪಿ ಆಗ ಅಭ್ಯರ್ಥಿ ಹಾಕುವುದಿಲ್ಲವಾ?,

ಒಂದೊಮ್ಮೆ ಬಿಜೆಪಿ ಅಭ್ಯರ್ಥಿ ಹಾಕದಿದ್ದರೆ ಅಲ್ಲಿ ಬಿಜೆಪಿ ಚಿಹ್ನೆಯಡಿ ಅಭ್ಯರ್ಥಿಗಳು ಇಲ್ಲದಿದ್ದರೆ ಬಿಜೆಪಿ ಮತಗಳು ಪಕ್ಷೇತರರಿಗೆ ಅಷ್ಟು ಸುಲಭವಾಗಿ ವರ್ಗಾವಣೆ ಆಗುತ್ತಾ?, ಆ ಕ್ಷೇತ್ರಗಳಲ್ಲಿನ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ನಡೆ ಏನಾಗಬಹುದು ಎಂಬ ಪ್ರಶ್ನೆಗಳು ಮೂಡಿವೆ. ಕಾಂಗ್ರೆಸ್‌-ಜೆಡಿಎಸ್‌ ಒಟ್ಟುಗೂಡಿ ಮೈತ್ರಿ ಮಾಡಿ ಕೊಂಡು ಚುನಾವಣಾ ಕಣಕ್ಕಿಳಿದರೆ, ಅನರ್ಹಗೊಂಡಿರುವ ಶಾಸಕರು ಪಕ್ಷೇತರರಾಗಿ ಕಣಕ್ಕಿಳಿದರೆ ಗೆಲುವು ಅಷ್ಟು ಸುಲಭವಲ್ಲ. ಜತೆಗೆ, ಇವರು ಪಕ್ಷೇತರರಾಗಿ ಗೆದ್ದರೆ ಮುಂದೆ ಯಾವುದೇ ಸರ್ಕಾರಕ್ಕೆ ಬೆಂಬಲ ಕೊಡಲು ಸ್ವತಂತ್ರರಾಗುತ್ತಾರೆ. ಹೀಗಾಗಿ, ಬಿಜೆಪಿ ಅದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪ್ರತ್ಯೇಕ ಆಸನದಲ್ಲಿ ಕೂರ್ತಾರಾ?: ಮತ್ತೂಂದು ಮೂಲಗಳ ಪ್ರಕಾರ, ಒಂದೊಮ್ಮೆ ನ್ಯಾಯಾಲಯದಲ್ಲಿ ಅನರ್ಹತೆ ರದ್ದಾಗಿ ರಾಜೀನಾಮೆ ಸ್ವೀಕಾರ ವಿಚಾರ ಮತ್ತೆ ಸ್ಪೀಕರ್‌ ಅಂಗಳಕ್ಕೆ ಬಂದರೆ ಆಗ ಅವರು ಶಾಸಕರಾಗಿಯೇ ಇರಲಿದ್ದಾರೆ. ಎರಡೂ ಪಕ್ಷಗಳು ಅವರನ್ನು ಉಚ್ಚಾಟನೆ ಮಾಡಿರುವುದರಿಂದ ವಿಧಾನಸಭೆಯಲ್ಲಿ ಪ್ರತ್ಯೇಕ ಆಸನ ವ್ಯವಸ್ಥೆಗೂ ಕೋರಬಹುದು ಎಂದು ಹೇಳಲಾಗುತ್ತಿದೆ. ಆದರೆ, ಅವರು ಶಾಸಕರಾಗಿಯೇ ಮುಂದುವರಿದರೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಲು ಸಾಧ್ಯವಿಲ್ಲ. ಹೀಗಾಗಿ, ರಾಜೀನಾಮೆ ಅಂಗೀಕಾರ ಮಾಡಿಸಿಕೊಂಡು ಉಪ ಚುನಾವಣೆಗೆ ಹೋಗಬೇಕಾಗುತ್ತದೆ.

12 ಜನರಿಗೆ ಸಚಿವಗಿರಿ ಭರವಸೆ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ರಚನೆಯಾಗಲು ಕಾರಣವಾಗಿರುವ 17 ಶಾಸಕರ ಪೈಕಿ 12 ಜನರಿಗೆ ಸಚಿವಗಿರಿ ಭರವಸೆ ನೀಡಲಾಗಿದೆ. ಸಂಪುಟ ವಿಸ್ತರಣೆ ಯಾದರೂ ಮೊದಲ ಹಂತದಲ್ಲಿ 22 ಸ್ಥಾನ ಮಾತ್ರ ಭರ್ತಿಯಾಗಲಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಕೋಟಾದಡಿ ನಾಲ್ಕು ಸ್ಥಾನ ಖಾಲಿ ಇರಲಿದೆ ಎಂದು ತಿಳಿದು ಬಂದಿದೆ. ಇದರ ನಡುವೆ, ಶಾಸಕರ ಅನರ್ಹತೆ ವಿಚಾರ ಇತ್ಯರ್ಥವಾಗುವವರೆಗೆ ಬೆಂಗಳೂರಿನ ಸಚಿವಾಕಾಂಕ್ಷಿಗಳಿಗೆ ಅವಕಾಶ ಕೊಟ್ಟು ಆ ನಂತರ ರಾಜೀನಾಮೆ ಕೊಡಿಸುವ ಬಗ್ಗೆಯೂ ಚಿಂತನೆ ನಡೆದಿದೆ. ನ್ಯಾಯಾಲಯದ ತೀರ್ಮಾನ ಬರುವವರೆಗೆ ಮಾತ್ರ ನಿಮಗೆ ಅವಕಾಶ ಎಂದು ಷರತ್ತು ವಿಧಿಸಿಯೇ ಸಚಿವಗಿರಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಲ್ಲಿ ಯಾರ್ಯಾರಿಗೆ ಸಚಿವ ಸ್ಥಾನ?: ಅನರ್ಹತೆ ವಿಚಾರ ಇತ್ಯರ್ಥಗೊಂಡರೆ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರು ನಗರದಿಂದ ಎಸ್‌.ಟಿ. ಸೋಮಶೇಖರ್‌, ಬೈರತಿ ಬಸವರಾಜ್‌, ಗೋಪಾಲಯ್ಯ, ಬೆಂಗಳೂರು ಗ್ರಾಮಾಂತರದಿಂದ ಎಂ.ಟಿ.ಬಿ. ನಾಗರಾಜ್‌ ಸಚಿವರಾಗುವ ಸಾಧ್ಯತೆಯಿದೆ. ಬಿಜೆಪಿಯಲ್ಲಿ ಬೆಂಗಳೂರಿನಿಂದ ಆರ್‌.ಅಶೋಕ್‌, ಅರವಿಂದ ಲಿಂಬಾವಳಿ, ಎಸ್‌.ಆರ್‌.ವಿಶ್ವನಾಥ್‌, ಡಾ.ಅಶ್ವಥ್‌ ನಾರಾಯಣ್‌, ಸುರೇಶ್‌ಕುಮಾರ್‌ ಸಚಿವಗಿರಿ ರೇಸ್‌ನಲ್ಲಿದ್ದಾರೆ. ಇವರಲ್ಲಿ ಯಾರ್ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ನೋಡಬೇಕಾಗಿದೆ. ಇನ್ನು, ರೋಷನ್‌ಬೇಗ್‌ ಅವರು ಬಿಜೆಪಿ ಸಂಪುಟ ಸೇರಲಿದ್ದಾರೆ ಎಂಬ ಮಾತಿದೆಯಾದರೂ ಆರ್‌ಎಸ್‌ಎಸ್‌ ನಾಯಕರಿಗೆ ಅದು ಇಷ್ಟವಿಲ್ಲ ಎನ್ನಲಾಗಿದೆ. ಹೀಗಾಗಿ, ಅವರು, ರಾಜೀನಾಮೆ ವಿಚಾರ ಇತ್ಯರ್ಥವಾದ ನಂತರ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟು ಕೊಟ್ಟು ಬಿಜೆಪಿಯಿಂದ ಕಣಕ್ಕಿಳಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನಿರ್ಧಾರ ಕೈಗೊಂಡಿಲ್ಲ: ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ನಿಖೀಲ್‌ ಕುಮಾರಸ್ವಾಮಿ ಸ್ಪರ್ಧೆ ಕುರಿತು ಸುದ್ದಿಗಾರರ ಪ್ರಶ್ನೆಗೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಶಾಸಕಿ ಅನಿತಾ ಕುಮಾರಸ್ವಾಮಿ,” ಸದ್ಯ ನಿಖೀಲ್‌ ಹೊಸ ಪ್ರೊಡಕ್ಷನ್‌ನಲ್ಲಿ ಕೆಲಸ ಮಾಡಲು ಸಹಿ ಹಾಕಿದ್ದಾನೆ. ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧಾರ ಕೈಗೊಂಡಿಲ್ಲ’ ಎಂದು ತಿಳಿಸಿದ್ದಾರೆ.

* ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.