ರೈತರ ಹಿತ ರಕ್ಷಣೆಗೆ ಪೊಲೀಸ್ ಇಲಾಖೆ ಬದ್ದವಿದೆ: ಡಾ. ಸುಮನ್


Team Udayavani, Nov 12, 2021, 3:03 PM IST

22former

ಶಿರಸಿ: ಹಳ್ಳಿಯಲ್ಲಿ ಅಡಿಕೆ ರಕ್ಷಣೆಗೆ ಕಾವಲು ಪಡೆ ಮಾಡಿಕೊಂಡರೆ ಪೊಲೀಸ್ ಇಲಾಖೆ ಗುರುತಿನ ಚೀಟಿ ಕೊಡಲಿದೆ. ಇಲಾಖೆಯು ಕಳ್ಳತನ ಆಗದಂತೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ‌.ಪೆನ್ನೆಕರ್ ಶುಕ್ರವಾರ ತಿಳಿಸಿದರು.

ಅವರು ಟಿಎಸ್ಎಸ್, ಟಿಆರ್ಸಿ ಸಹಕಾರಿ ಸಂಸ್ಥೆ ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ಹಮ್ಮಿಕೊಂಡ ಅಡಿಕೆ ಕಳವು ಹಾಗೂ ಸಾಮೂಹಿಕ ಜವಾಬ್ದಾರಿ, ಕಾನೂನು ಅರಿವು ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ‌ಮಾತನಾಡಿದರು.

ರೈತರ ಹಿತ ರಕ್ಷಣೆಗೆ ಪೊಲೀಸ್ ಇಲಾಖೆ ಬದ್ದವಿದೆ. ಕಳವು, ಶಂಕಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ‌ ಕೊಡಿ ಎಂದ ಅವರು, ಇಲಾಖೆ ಹಾಗೂ ಸಮಾಜದ ಸಮಸ್ಯೆ ಗುರುತಿಸಿ ಕೆಲಸ ಮಾಡಲಾಗುತ್ತದೆ. ಬಂದೂಕು ಪರವಾನಗಿಗೆ ತರಬೇತಿ ಶಿಬಿರ ನಡೆಸಲಾಗಿದೆ. ಅಡಿಕೆ ಕಳ್ಳರ ಪೆರೆಡ್ ಕೂಡ ಇಲಾಖೆ‌ ನಡೆಸಲಿದೆ ಎಂದರು.

ಟಿಆರ್ ಸಿ ಅಧ್ಯಕ್ಷ ರಾಮಕೃಷ್ಣ ಹೆಗಡೆ ಮಾತನಾಡಿ, ಅಡಿಕೆಗೆ ಉತ್ತಮ ಮಾರುಕಟ್ಟೆ ಬಂದಿದೆ. ಆದರೆ ಅದಕ್ಕೆ ಕಾಡು ಪ್ರಾಣಿಗಳು ಹಾಗೂ ಕಳ್ಳಕಾರರ ಭಯ ಕಾಡಲಾರಂಭಿಸಿದೆ. ಅದಕ್ಕಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ:ಸತತ 10 ದಿನಗಳ ಮಳೆಗೆ ಚೆನ್ನೈ ತತ್ತರ; ಆಸ್ಪತ್ರೆ, ಮನೆಗಳಿಗೆ ನುಗ್ಗಿದ ನೀರು; 14 ಮಂದಿ ಸಾವು

ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬದರಿನಾಥ ಮಾತನಾಡಿ, ರೈತರ ಬೆಳೆಗಳ ಕಳ್ಳತನದ ಜಾಗೃತಿ ಕಾರ್ಯಕ್ರಮ ಮಾಡಿರಲಿಲ್ಲ. ಯಾವುದೋ ಬೇರೆ ರಾಜ್ಯಗಳಿಂದ ಜನರು ಬರುತ್ತಾರೆ. ನಕಲಿ ವಿಸಿಟಿಂಗ್ ಕಾರ್ಡ್ ತೆಗೆದುಕೊಂಡು ಬೇರೆ ರಾಜ್ಯಗಳಿಂದ ಬಂದು ತಾವು ಅಡಿಕೆ ಖರೀರಿಗೆ ಬಂದಿರುವುದಾಗಿ ಹೇಳಿ ದೋಚುತ್ತಾರೆ. ಈ ಬಗ್ಗೆ ಅನೇಕ ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಬಗ್ಗೆ ಜಾಗೃತಿ ಇರಬೇಕು. ಬಂದೂಕು‌ ಪುನರ್ ಬಂದೂಕು‌ ಪರವಾನಗಿ ಕೊಡುತ್ತೇವೆ. ಏನೇ ಘಟನೆ ಆದರೂ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ‌ ಕೊಡಬೇಕು ಎಂದರು.

ಶಿರಸಿ ಉಪವಿಭಾಗದ ಡಿಎಸ್ಪಿ ರವಿ ಡಿ ನಾಯ್ಕ, ಅಡಿಕೆಗೆ ಹೆಚ್ಚಿನ ಬೆಲೆ ಬಂದಿದ್ದರಿಂದ ಅದರ ರಕ್ಷಣೆ ರೈತರಿಗೆ ಸವಾಲು. ರಾತ್ರಿ ಗಸ್ತು ಹೆಚ್ಚಿಸಲಾಗಿದೆ.  ಅಡಿಕೆ ತೋಟಗಳು ಹೆಚ್ಚಿನ ಭಾಗ ಇದ್ದಲ್ಲಿ ಗಸ್ತುಗಳನ್ನು ಹೆಚ್ಚಿಸಲಾಗಿದೆ. ಹೇರೂರು ಹೆಗ್ಗರಣಿ, ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಚೆಕ್ ಪೋಸ್ಟ್ ಹೆಚ್ಚಿಸಲಾಗಿದೆ.  ಅನುಮಾನ ಬಂದರೆ 112 ಗೆ ಕಾಲ್ ಮಾಡಿ ತಕ್ಷಣ ಸ್ಪಂದನೆ ಸಿಗುತ್ತದೆ. ಅಪರಿಚಿತರು ಯಾರೇ ಬಂದರೂ ಅವರೊಟ್ಟಿಗೆ ವ್ಯವಹರಿಸಬೇಡಿ. ಅಧಿಕೃತ ಟ್ರೇಡರ್ಸ್ ಜೊತೆ ಮಾತ್ರ ವ್ಯವಹರಿಸಿ. ಮನೆಯಲ್ಲಿ ಹೆಚ್ಚಿನ ಹಣ ಇರಿಸಿಕೊಳ್ಳಬೇಡಿ. ಎಷ್ಟು ಅವಶ್ಯಕತೆ ಇದೆಯೋ ಅಷ್ಟನ್ನು ಮಾತ್ರ ಮನೆಯಲ್ಲಿಟ್ಟುಕೊಳ್ಳಿ. ಕಳ್ಳತನದ ಬಗ್ಗೆ ಜಾಗೃತಿಯಿಂದ ಇರಬೇಕು. ಯಾರಾದರೂ ಅಪರಿಚಿತರು ಬಂದು ಬೆಳೆಗಳ ಬಗ್ಗೆ ಮೋಸ ಮಾಡಲು ಬಂದಾಗ ರೈತರು ಕಾನೂನು ಕೈಗೆ ತೆಗೆದುಕೊಳ್ಳದೇ ತಕ್ಷಣ ಪೊಲೀಸರಿಗೆ ತಿಳಿಸಿ. ಆನ್ ಲೈನ್ ವಂಚನೆ ಆಗುತ್ತವೆ. ಈ ಬಗ್ಗೆ ಹತ್ತು ಬಾರಿ ಯೋಚನೆ ಮಾಡಿ ವ್ಯವಹರಿಸಿ ಎಂದರು.

ಸಿಪಿಐ ರಾಮಚಂದ್ರ ನಾಯಕ ವಂದಿಸಿದರು. ಶಿರಸಿ, ಯಲ್ಲಾಪುರ, ಮುಂಡಗೋಡ ಭಾಗದ ರೈತರು ಇದ್ದರು. ಪೊಲೀಸರ ಜೊತೆ ಸಂವಾದ‌ ಕೂಡ ನಡೆಯಿತು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.