ತೆರಿಗೆ ವಿನಾಯಿತಿ ಪಿಎಫ್ ಎಲ್ಲರಿಗೂ ವಿಸ್ತರಣೆ ಸಾಧ್ಯತೆ
Team Udayavani, Jan 23, 2022, 6:20 AM IST
ಹೊಸದಿಲ್ಲಿ: ಮುಂಬರುವ ಬಜೆಟ್ನಲ್ಲಿ ತೆರಿಗೆ ವಿನಾಯಿತಿ ವ್ಯಾಪ್ತಿಯ ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್ ) ಮೊತ್ತದ ಮಿತಿಯನ್ನು ಎಲ್ಲರಿಗೂ ಅನ್ವಯವಾಗುವಂತೆ 5 ಲಕ್ಷ ರೂ.ಗಳಿಗೆ ಏರಿಕೆ ಮಾಡುವ ಸಾಧ್ಯತೆಗಳಿವೆ.
2021-22ನೇ ಸಾಲಿನ ಮುಂಗಡ ಪತ್ರ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತೆರಿಗೆ ವಿನಾಯಿತಿ ಮೊತ್ತ ಪ್ರಮಾಣವನ್ನು 2.5 ಲಕ್ಷ ರೂ.ಗೆ ಪರಿಷ್ಕರಿಸಿದ್ದರೂ ಅನಂತರ ಅದನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸುವ ನಿರ್ಧಾರ ಪ್ರಕಟಿಸಿದ್ದರು. ಆದರೆ ಈ ಸವಲತ್ತು ಕೇವಲ ಸರಕಾರಿ ಉದ್ಯೋಗಿಗಳಿಗೆ ಮಾತ್ರ ಲಭಿಸುತ್ತಿದೆ. ಅದನ್ನೂ ಎಲ್ಲ ರೀತಿಯ ವೇತನದಾರರಿಗೆ ವಿಸ್ತರಿಸಬೇಕು ಎಂಬ ಬೇಡಿಕೆ ಪ್ರಬಲವಾಗತೊಡಗಿದೆ.
ಅದಕ್ಕೆ ಪೂರಕವಾಗಿ ವಿವಿಧ ಕೇಂದ್ರ ಸರಕಾರದ ಉದ್ಯೋಗಿಗಳ ಸಂಘಟನೆಗಳೂ ಕೂಡ ಸರಕಾರದ ನಿರ್ಧಾರದ ಲಾಭ ಎಲ್ಲರಿಗೂ ಆಗುವಂತೆ ನೀತಿ ರೂಪಿಸಬೇಕು ಎಂದು ಕೇಂದ್ರ ವಿತ್ತ ಸಚಿವಾಲಯಕ್ಕೆ ಮನವಿಗಳೂ ಸಲ್ಲಿಕೆಯಾಗಿದ್ದವು.
ಭವಿಷ್ಯ ನಿಧಿಗೆ ಕೊಡುಗೆ ನೀಡದ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವವರಿಗೆ ಕೇಂದ್ರದ ಈ ನಿರ್ಧಾರದಿಂದಾಗಿ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ತೆರಿಗೆ ಪರಿಣತರು ಮತ್ತು ಭವಿಷ್ಯ ನಿಧಿ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?