ಅಂಚೆ ಇಲಾಖೆ ಅಸ್ತಿತ್ವ ಉಳಿಸಿ ಬೆಳೆಸಲು ಹೋರಾಟ: ಶಿವಕುಮಾರ್‌


Team Udayavani, Mar 15, 2021, 4:35 AM IST

ಅಂಚೆ ಇಲಾಖೆ ಅಸ್ತಿತ್ವ ಉಳಿಸಿ ಬೆಳೆಸಲು ಹೋರಾಟ: ಶಿವಕುಮಾರ್‌

ಉಡುಪಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸರಕಾರಿ ಸ್ವಾಮ್ಯದ ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಿದ್ದು, ಅಂಚೆ ಇಲಾಖೆಯ ಭವಿಷ್ಯ ಸವಾಲಿನಿಂದ ಕೂಡಿದೆ. ನೂರಾರು ವರ್ಷಗಳ ಇತಿಹಾಸವುಳ್ಳ ಇಲಾಖೆಯ ಅಸ್ತಿತ್ವ  ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು ಎಂದು ಫೆಡರೇಶನ್‌ ಆಫ್‌ ನ್ಯಾಷನಲ್‌ ಪೋಸ್ಟಲ್‌ ಆರ್ಗನೈಸೇಶನ್‌ (ಎಫ್‌ಎನ್‌ಪಿಒಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಗ್ರೂಪ್‌ “ಸಿ’ಯ ರಾಷ್ಟ್ರೀಯ ಅಧ್ಯಕ್ಷ ಬಿ. ಶಿವಕುಮಾರ ಹೇಳಿದರು.

ರಾಷ್ಟ್ರೀಯ ಅಂಚೆ ನೌಕರರ ಸಂಘ ಗ್ರೂಫ್‌ “ಸಿ’ ಪೋಸ್ಟ್‌ಮನ್‌ ಎಂಟಿಎಸ್‌ ಮತ್ತು ಗ್ರಾಮೀಣ ಅಂಚೆ ಸೇವಕರ ಸಂಘ ಉಡುಪಿ ವಿಭಾಗೀಯ ಶಾಖೆ ವತಿಯಿಂದ ಬನ್ನಂಜೆ ಶ್ರೀನಾರಾಯಣ ಗುರು ಮಂದಿರದ ಶಿವಗಿರಿ ಸಭಾಗೃಹದಲ್ಲಿ ರವಿವಾರ ನಡೆದ 16ನೇ ಜಂಟಿ ದ್ವೈವಾರ್ಷಿಕ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

7ನೇ ವೇತನ ಆಯೋಗಕ್ಕೆ ಸಂಬಂಧಿಸಿ ಈತನಕವೂ ಯಾವುದೇ ಪ್ರಗತಿ ಇಲ್ಲ. ಕ್ಯಾಬಿನೆಟ್‌ ಸಮಿತಿಗೆ ವರದಿ ಸಲ್ಲಿಕೆಯಾಗಿದೆಯೋ ಎಂಬ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಗ್ರೂಫ್‌ “ಸಿ’ ನಲ್ಲಿ ಸಿಬಂದಿ ಕೊರತೆ ಬಹಳಷ್ಟಿದೆ ಎಂದರು.

ರಾಷ್ಟ್ರೀಯ ಅಂಚೆ ನೌಕರರ ಸಂಘ ಗ್ರೂಪ್‌ “ಸಿ’ ಉಡುಪಿ ವಿಭಾಗದ ಅಧ್ಯಕ್ಷ ಹೇಮಂತ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ನವೀನ್‌ ಚಂದರ್‌, ರಾಷ್ಟ್ರೀಯ ಅಂಚೆ ನೌಕರರ ಸಂಘ ಗ್ರೂಪ್‌ “ಸಿ’
ಕರ್ನಾಟಕ ವಲಯ ಕಾರ್ಯದರ್ಶಿ ಎಸ್‌. ಖಂಡೋಜಿ ರಾವ್‌, ರಾಷ್ಟ್ರೀಯ ಅಂಚೆ ನೌಕರರ ಸಂಘ ಪೋಸ್ಟ್‌ ಮನ್‌ ಎಂಟಿಎಸ್‌ ಕರ್ನಾಟಕ ವಲಯ ಕಾರ್ಯದರ್ಶಿ ಆರ್‌. ಮಹದೇವ, ರಾಷ್ಟ್ರೀಯ ಗ್ರಾಮೀಣ ಅಂಚೆ ಸೇವಕರ ಸಂಘದ ಕೇಂದ್ರಸ್ಥಾನ ಹೊಸದಿಲ್ಲಿ ಅಧ್ಯಕ್ಷ ಎಂ.ಪಿ. ಚಿತ್ರಸೇನ, ಎಫ್‌ಎನ್‌ಪಿಒ ದಿಲ್ಲಿ ಸಹಾಯಕ ವಿತ್ತೀಯ ಕಾರ್ಯದರ್ಶಿ ಬಾಲಚಂದ್ರ ಕೆ.ಆರ್‌., ವಿಶ್ರಾಂತ ಅಂಚೆ ಪಾಲಕರು ಹಾಗೂ ರಾಷ್ಟ್ರೀಯ ಅಂಚೆ ನೌಕರರ ಸಂಘಗಳ ಹಿರಿಯ ಮಾರ್ಗದರ್ಶಕ ಎನ್‌. ದಯಾನಂದ, ಅಂಚೆ ಅಧೀಕ್ಷಕ ಧನಂಜಯ ಆಚಾರ್ಯ, ಪೋಸ್ಟ್‌ಮನ್‌ ಎಂಟಿಎಸ್‌ ಅಧ್ಯಕ್ಷ ಹಾಗೂ ವಲಯ ಉಪಾಧ್ಯಕ್ಷ ವಾಸುದೇವ ತೊಟ್ಟಂ, ರಾಷ್ಟ್ರೀಯ ಗ್ರಾಮೀಣ ಅಂಚೆ ಸೇವಕರ ಸಂಘದ ಅಧ್ಯಕ್ಷ ಹಿರಿಯಣ್ಣ ಮಡಿವಾಳ ಉಪಸ್ಥಿತರಿದ್ದರು. ಸಹಾಯಕ ವಲಯ ಕಾರ್ಯದರ್ಶಿ ಹಾಗೂ ಗ್ರೂಪ್‌ “ಸಿ’ ವಿಭಾಗೀಯ ಕಾರ್ಯದರ್ಶಿ ಸುರೇಶ್‌ ಕೆ. ನಿರೂಪಿಸಿದರು.

ಬೇಡಿಕೆಗೆ ಸ್ಪಂದನೆ ದೊರೆತಿಲ್ಲ
ಎನ್‌ಡಿಎ ಸರಕಾರದ ಮೇಲೆ ನಂಬಿಕೆ ಇಲ್ಲ. ಅಂಚೆ ನೌಕರರು ಹಿಂದೊಮ್ಮೆ 14 ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ಕೈಗೊಂಡಿದ್ದು, ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ನಮ್ಮನ್ನು ಮಾತುಕತೆಗೆ ಆಹ್ವಾನಿಸಿದ್ದರು. ಮುಷ್ಕರ ಕೈ ಬಿಟ್ಟು ಒಂದು ತಿಂಗಳೊಳಗೆ ನಿಮ್ಮ ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ಕೊಟ್ಟಿದ್ದರು. ಆದರೆ ಇಲಾಖೆಯ ಸಚಿವರ ಖಾತೆ ಬದಲಾವಣೆ ಆಗಿದೆ ಹೊರತು ನಮ್ಮ ಯಾವ ಬೇಡಿಕೆಗೂ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಎನ್‌ಡಿಎ ಸರಕಾರದ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದು 7ನೇ
ವೇತನ ಆಯೋಗದಿಂದ ಅಂಚೆ ನೌಕರರಿಗೆ ಆಗಿರುವ ಅನ್ಯಾಯದ ಬಗ್ಗೆ ಚರ್ಚಿಸಲು ಕರೆದ ಸಭೆಯಲ್ಲಿ ಹೇಳಿದ್ದೇನೆ ಎಂದು ಎಂದು ಫೆಡರೇಶನ್‌ ಆಫ್‌ ನ್ಯಾಷನಲ್‌ ಪೋಸ್ಟಲ್‌ ಆರ್ಗನೈಸೇಶನ್‌ (ಎಫ್‌ಎನ್ ಪಿಒ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಗ್ರೂಪ್‌ “ಸಿ’ಯ ರಾಷ್ಟ್ರೀಯ ಅಧ್ಯಕ್ಷ ಬಿ. ಶಿವಕುಮಾರ ಹೇಳಿದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.