Election: ಸ್ಪರ್ಧೆ ವಯೋಮಿತಿ 18ಕ್ಕೆ ಇಳಿಕೆ ಪ್ರಸ್ತಾವ ಸ್ವಾಗತಾರ್ಹ ವಿಚಾರ


Team Udayavani, Aug 9, 2023, 11:32 PM IST

politi

ದೇಶದಲ್ಲಿ ಚುನಾವಣೆಗೆ ಸ್ಪರ್ಧಿಸುವವರ ವಯೋಮಿತಿಯನ್ನು 25ರಿಂದ 18ಕ್ಕೆ ಇಳಿಸಬೇಕೆಂದು ಈಚೆಗೆ ಸಂಸದೀಯ ಸಮಿತಿಯೊಂದು ಶಿಫಾರಸು ಮಾಡಿದೆ. ಇದರ ಸಾಧಕ-ಬಾಧಕಗಳೇನು? ಈ ಬಗ್ಗೆ ಚಾವಡಿಯಲ್ಲೊಂದು ಚರ್ಚೆ.

ಚುನಾವಣೆಗೆ ಸ್ಪರ್ಧೆ ಮಾಡುವ ವಯೋಮಿತಿ ಯನ್ನು 25ರಿಂದ 18ಕ್ಕೆ ಇಳಿಸಲು ಸಂಸದೀಯ ಸಮಿತಿ ಸಲಹೆ ನೀಡಿರು ವುದು ಸ್ವಾಗತಾರ್ಹ ವಿಚಾರವಾಗಿದೆ. ಭಾರತ ದೇಶದ ಒಕ್ಕೂಟದ ವ್ಯವಸ್ಥೆಯಲ್ಲಿ 25 ವರ್ಷ ಮೇಲ್ಪಟ್ಟ ಭಾರತದ ಪ್ರಜೆ ಚುನಾವಣೆಗೆ ಸ್ಪರ್ಧೆ ಮಾಡಲು ಸಾಂವಿಧಾನಿಕ ಅವಕಾಶ ಇದೆ. 25 ವರ್ಷ ಇರುವ ಈ ನಿಯಮ ವನ್ನು 18ನೇ ವರ್ಷಕ್ಕೆ ಇಳಿಕೆ ಮಾಡುವುದು ದೇಶದ ಹಲವು ಅಭಿವೃದ್ಧಿ ವಿಚಾರಗಳಲ್ಲಿ ಪೂರಕವಾದ ಅಭಿಪ್ರಾಯವಾಗಿದೆ.

18 ವರ್ಷಕ್ಕೆ ಲೋಕಸಭೆ ಹಾಗೂ ವಿಧಾನಸಭೆಗೆ ಚುನಾವಣೆಗೆ ಸ್ಪರ್ಧೆ ಮಾಡುವುದಾದರೆ ಯುವಕರು ದೇಶವನ್ನು ಮುಂದಿನ ಪೀಳಿಗೆಯಲ್ಲಿ ಸದೃಢವಾಗಿ ನಿರ್ಮಾಣ ಮಾಡುವ ಗುರಿ ಸುಲಭವಾಗಿ ತಲುಪಬಹುದಾಗಿದೆ. ಹಾಗೂ ಬಹುಮುಖ್ಯ ವಾಗಿ ದೇಶಕ್ಕೆ ಮಾರಕವಾಗಿರುವ ಬಹುದೊಡ್ಡ ಪಿಡುಗು ಭ್ರಷ್ಟಾಚಾರವನ್ನು ತಡೆಯಲು ಇದು ಬಹಳ ಉಪಯುಕ್ತಕಾರಿಯಾಗಿದೆ. ಈ ನೂತನ ನಿಯಮದಿಂದ ಯುವ ಪ್ರತಿಭಾನ್ವಿತರನ್ನು ರಾಜಕೀಯ ಕ್ಷೇತ್ರಕ್ಕೆ ಹಾಗೂ ದೇಶದ ಸೇವೆಗೆ ಬಳಸಿಕೊಳ್ಳ ಬಹುದಾಗಿದೆ.

ಬಹುತೇಕ ಪ್ರತಿಭಾನ್ವಿತ ಯುವಕ ಯುವತಿಯರು 25 ವರ್ಷಗಳವರೆಗೆ ತಮ್ಮ ಶಿಕ್ಷಣವನ್ನು ಮುಗಿಸಿ ಅನಂತರ ತಮ್ಮ ವೃತ್ತಿ ಜೀವನದ ಕಡೆ ಗಮನವಹಿಸುತ್ತಾರೆ, ಆದರೆ ಒಂದು ಅಂದಾಜಿನ ಪ್ರಕಾರ ಹೆಚ್ಚು ಶಿಕ್ಷಣ ಪಡೆದವರು ರಾಜಕೀಯಕ್ಕೆ ಬರುತ್ತಿಲ್ಲ ಎನ್ನು ವುದು ಬಹಳಷ್ಟು ತಜ್ಞರ ಅಭಿಪ್ರಾಯವಾಗಿದೆ.

ಬಹುತೇಕ ಮಂದಿ ವಂಶ ಪರಂಪರೆಯಾಗಿ ಮತ್ತು ಉದ್ಯಮದ ದೃಷ್ಟಿಯಿಂದ ಚುನಾ ವಣೆಗಳಲ್ಲಿ ಸ್ಪರ್ಧೆ ಮಾಡುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಇದು ದೇಶದ ಅಭಿವೃದ್ಧಿಗೆ ಮಾರಕವಾಗಿದೆ ಆದರೆ ಉದ್ಯಮಿಗಳು ಅಥವಾ ಶಿಕ್ಷಣ ಪಡೆಯದೆ ಇರುವವರು ಜನ ಪ್ರತಿನಿಧಿ ಗಳಾಗ ಬಾರದು ಎಂದು ಯಾವುದೇ ಕಾನೂನು ಇಲ್ಲ, ಎಲ್ಲರೂ ಸಮಾನರು ಎನ್ನುವ ಆಶಯ ನಮ್ಮ ಸಂವಿಧಾನದ್ದಾಗಿದೆ.

18ನೇ ವರ್ಷಕ್ಕೇ ಸ್ಪರ್ಧೆ ಮಾಡುವ ಅವಕಾಶ ದೊರೆತರೆ ಪ್ರತಿಭಾನ್ವಿತ ಯುವ ಪೀಳಿಗೆ ರಾಜಕೀಯಕ್ಕೆ ಬರುವುದಾದರೆ ವೈಜ್ಞಾನಿಕವಾಗಿ ಮತ್ತು ತಾಂತ್ರಿಕವಾಗಿ ದೇಶ ಅಭಿವೃದ್ಧಿ ಹೊಂದುತ್ತದೆ. ಈ ಹಿಂದೆ 18 ವರ್ಷಕ್ಕೆ ಮತದಾನ ಮಾಡುವ ಹಕ್ಕನ್ನು ಇಳಿಕೆ ಮಾಡಿದ್ದ ಲಾಭವನ್ನು ಇಂದು ನಾವು ಪಡೆಯುತ್ತಿದ್ದೇವೆ. ಅದರಂತೆ ಚುನಾವಣೆಗೆ ಸ್ಪರ್ಧೆ ಮಾಡುವ ವಯಸ್ಸನ್ನು ಇಳಿಕೆ ಮಾಡುವುದು ಹಲವು ಮಜಲುಗಳಲ್ಲಿ ದೇಶದ ಅಭಿವೃದ್ಧಿಗೆ ಪೂರಕವಾಗಿದೆ.
ಸಂಸದೀಯ ಸಮಿತಿಯ ಈ ಸಲಹೆ ಒಂದು ರೀತಿಯಲ್ಲಿ ಸ್ವಾಗತಾರ್ಹವಾಗಿದೆ.

ಐಶ್ವರ್ಯ ಮಂಚನಹಳ್ಳಿ, ಎಐಸಿಸಿ ವಕ್ತಾರರು

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.