ಮಹಿಳೆಯರ ಅಹವಾಲುಗಳಿಗೆ ಪೊಲೀಸರ ಕ್ಷಿಪ್ರ ಸ್ಪಂದನೆ

 "112- ತುರ್ತು ಸಹಾಯವಾಣಿ' ಜಾಗೃತಿ ಅಭಿಯಾನ

Team Udayavani, Aug 28, 2021, 9:26 PM IST

ಮಹಿಳೆಯರ ಅಹವಾಲುಗಳಿಗೆ ಪೊಲೀಸರ ಕ್ಷಿಪ್ರ ಸ್ಪಂದನೆ

ಮಹಾನಗರ: ಮಂಗಳೂರು ನಗರ ಪೊಲೀಸರು ಶನಿವಾರ “ತುರ್ತು ಸಹಾಯವಾಣಿ  112′ ಮೂಲಕ ಮಹಿಳೆಯರಿಂದ ಕರೆಗಳನ್ನು ಸ್ವೀಕರಿಸಿ ತ್ವರಿತ ವಾಗಿ ಸ್ಥಳಕ್ಕೆ ತೆರಳಿ ಸ್ಪಂದಿಸಿದರು.

“ಮಹಿಳೆಯರ ಸುರಕ್ಷೆಗಾಗಿ ಒಂದು ದಿನ’ ಎಂಬ ಈ ಅಭಿಯಾನದಲ್ಲಿ ಸಬ್‌ಇನ್‌ಸ್ಪೆಕ್ಟರ್‌ ದರ್ಜೆಗಿಂತ ಮೇಲಿನ ದರ್ಜೆಯ ಪೊಲೀಸ್‌ ಅಧಿಕಾರಿಗಳು, ಮಹಿಳಾ ಪೊಲೀಸ್‌ ಅಧಿ ಕಾರಿ, ಸಿಬಂದಿಯನ್ನೊಳಗೊಂಡ 100ಕ್ಕೂ ಅಧಿಕ ಪೊಲೀಸರು ಪಾಲ್ಗೊಂಡಿ ದ್ದರು. ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಈ ವಿಶೇಷ ಅಭಿಯಾನ ನಡೆಯಿತು.

ಅಣಕು ಕಾರ್ಯಾಚರಣೆ
ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಅವರ ನೇತೃತ್ವದಲ್ಲಿ ನಗರದ ಕೆಲವೆಡೆ 112 ಸಹಾಯವಾಣಿ (ಇಆರ್‌ಎಸ್‌ಎಸ್‌-112)ಅಣಕು ಕಾರ್ಯಾಚರಣೆಯ ನಡೆಸಿ ಜಾಗೃತಿ ಮೂಡಿಸಲಾಯಿತು. ಎಂ.ಆರ್‌. ಪೂವಮ್ಮ ಮತ್ತು ಅವರ ತಾಯಿ ಜಾನಕಿ ಅವರು ನಗರದ ಅಥೆನಾ ಆಸ್ಪತ್ರೆಯಲ್ಲಿ ನಡೆದ ಅಣಕು ಪ್ರದರ್ಶನದಲ್ಲಿ ಪಾಲ್ಗೊಂಡರು.

8 ತಿಂಗಳುಗಳಲ್ಲಿ 4,000ಕ್ಕೂ ಅಧಿಕ ಕರೆ
ಅಥೆನಾ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಯರನ್ನುದ್ದೇಶಿಸಿ ಮಾತನಾಡಿದ ಪೊಲೀಸ್‌ ಆಯುಕ್ತರು “ಮಹಿಳೆಯರು ಸಹಿತ ಸಾರ್ವ ಜನಿಕರು 112ಗೆ ಕರೆ ಮಾಡಿದರೆ ತುರ್ತು ಸ್ಪಂದನೆ ದೊರೆಯುತ್ತದೆ. ಮಂಗಳೂರಿನಲ್ಲಿ 112 ಸಹಾಯವಾಣಿ ಆರಂಭಗೊಂಡ 8 ತಿಂಗಳುಗಳಲ್ಲಿ 4,000ಕ್ಕೂ ಅಧಿಕ ಕರೆ ಗಳನ್ನು ಸ್ವೀಕರಿಸಿ ಸ್ಪಂದಿಸಲಾಗಿದೆ. ಈ ಸಹಾಯವಾಣಿ ಮೂಲಕ ಪೊಲೀಸರಿಗೆ ದಿನಕ್ಕೆ ಸರಾಸರಿ 30ರಿಂದ 40 ಕರೆಗಳು ಬರುತ್ತಿವೆ’ ಎಂದರು.

ಇದನ್ನೂ ಓದಿ:ಮುಂದಿನ ದಿನಗಳಲ್ಲಿ ಕೆಎಚ್‌ಡಿಸಿ ನಿಗಮಕ್ಕೆ ಹೊಸ ಬೆಳಕು – ಸಿದ್ದು ಸವದಿ

12 ನಿಮಿಷಗಳಲ್ಲಿ ಸ್ಪಂದನೆ
ತುರ್ತುಸಹಾಯವಾಣಿ 112ಕ್ಕೆ 38 ಕರೆಗಳು ಬಂದಿವೆ. ಪೊಲೀಸ್‌ ಅಧಿಕಾರಿಗಳ ಮೊಬೈಲ್‌ಗ‌ಳಿಗೆ 200ಕ್ಕೂ ಅಧಿಕ ಮಂದಿ ಕರೆ ಮಾಡಿ ಸಹಾಯವಾಣಿ ಕುರಿತು ಮಾಹಿತಿ ಪಡೆದು ಕೊಂಡಿ ದ್ದಾರೆ. ಕರೆ ಬಂದ ಅನಂತರ ಸರಾಸರಿ 12 ನಿಮಿಷದಲ್ಲಿ ಸ್ಥಳಕ್ಕೆ ತೆರಳಿ ಸ್ಪಂದನೆ ನೀಡಲಾಗಿದೆ. ಅಲ್ಲದೆ ಆಸ್ಪತ್ರೆ, ಲೇಡಿಸ್‌ ಹಾಸ್ಟೆಲ್‌, ವಿಶ್ವವಿದ್ಯಾನಿಲಯ, ಸಾರ್ವಜನಿಕ ಸ್ಥಳಗಳಲ್ಲಿ 152ಕ್ಕೂ ಅಧಿಕ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಧೈರ್ಯ ತುಂಬಿಸುವ ಕಾರ್ಯ
ಅಂತಾರಾಷ್ಟ್ರೀಯ ಕ್ರೀಡಾಪಟು, ಒಲಿಂಪಿಯನ್‌ ಎಂ.ಆರ್‌. ಪೂವಮ್ಮ ಅವರು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ಮಾತನಾಡಿ, ಮಹಿಳೆಯರು ಹಲವಾರು ಬಾರಿ ಅಸುರಕ್ಷೆಯ ಅನುಭವ ಹೊಂದುವ ಸಂದರ್ಭಗಳು ಎದುರಾಗುತ್ತವೆ. ಇಂತಹ ಸಂದರ್ಭ ಗಳಲ್ಲಿ ಸುರಕ್ಷೆಯ ಭರವಸೆ ನೀಡಲು 112 ಸಹಾಯವಾಣಿ ಉಪಯುಕ್ತ. ಮಂಗಳೂರು ಪೊಲೀಸರು ಹಮ್ಮಿಕೊಂಡಿರುವ ಈ ವಿಶೇಷ ಅಭಿಯಾನ ಶ್ಲಾಘನೀಯ’ ಎಂದರು.

ಟಾಪ್ ನ್ಯೂಸ್

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.