ಸಂಸದರ ಕ್ಷೇತ್ರಾಭಿವೃದ್ಧಿ ನಿಧಿ ಮರು ಆರಂಭ ಸ್ವಾಗತಾರ್ಹ


Team Udayavani, Nov 11, 2021, 6:01 AM IST

ಸಂಸದರ ಕ್ಷೇತ್ರಾಭಿವೃದ್ಧಿ ನಿಧಿ ಮರು ಆರಂಭ ಸ್ವಾಗತಾರ್ಹ

ಕಳೆದ ಎರಡು ವರ್ಷಗಳಲ್ಲಿ ಕೊರೊನಾ ತಂದಿಟ್ಟ ಅಡ್ಡಿ ಆತಂಕಗಳು ಒಂದಿಷ್ಟಲ್ಲ. ಜನರಷ್ಟೇ ಅಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೂ ಆರ್ಥಿಕವಾಗಿ ದಿನವಹೀ ಕಾರ್ಯನಿರ್ವಹಣೆ ಮಾಡಲೂ ಕಷ್ಟಕರವಾದ ಸನ್ನಿವೇಶಗಳು ಎದುರಾಗಿದ್ದವು. ಕಳೆದ ಎರಡು ವರ್ಷಗಳಲ್ಲಿ ಈ ತೊಂದರೆಗಳಿಂದ ನರಳಿ ಈಗಷ್ಟೇ ಸರಕಾರಗಳು ಆರ್ಥಿಕವಾಗಿ ಸುಧಾರಣೆ ಕಾಣುತ್ತಿವೆ. ಈ ನಿಟ್ಟಿನಲ್ಲಿ ಕಳೆದ ವರ್ಷ ಸ್ಥಗಿತ ಮಾಡಲಾಗಿದ್ದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯನ್ನು ಮತ್ತೆ ಚಾಲನೆ ಮಾಡಲಾಗುತ್ತಿದೆ.

ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಇಂಥದ್ದೊಂದು ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಆರ್ಥಿಕ ವರ್ಷದ ಉಳಿದರ್ಧ ಭಾಗವೂ ಸೇರಿದಂತೆ 2024-25ರ ವರೆಗಿನ ಎಂಪಿಲಾಡ್ಸ್‌ಗೆ ಅನುದಾನ ನಿಗದಿ ಮಾಡಲಾಗಿದೆ. ಅಂದರೆ, ಪ್ರಸಕ್ತ ವರ್ಷದ ಉಳಿದರ್ಧ ಆರ್ಥಿಕ ವರ್ಷಕ್ಕಾಗಿ ಪ್ರತಿಯೊಬ್ಬ ಸಂಸದರಿಗೂ ತಲಾ 2 ಕೋಟಿ ರೂ. ನೀಡಲಾಗುತ್ತದೆ. ಈ ಆರ್ಥಿಕ ವರ್ಷ ಕಳೆದು, ಮುಂದಿನ ಆರ್ಥಿಕ ವರ್ಷದಿಂದ 2024-25ರ ವರೆಗೆ ಪ್ರತೀ ವರ್ಷವೂ ಸಂಸದರಿಗೆ ಪ್ರದೇಶಾಭಿವೃದ್ದಿಗಾಗಿ ತಲಾ 5 ಕೋಟಿ ರೂ.ಯನ್ನು ಎರಡು ಸಮಾನ ಕಂತುಗಳನ್ನು ನೀಡಲಾಗುತ್ತದೆ.

ಗ್ರಾಮೀಣ ಭಾಗದಲ್ಲಿನ ರಸ್ತೆಗಳು, ಬಸ್‌ ನಿಲ್ದಾಣಗಳು ಸೇರಿದಂತೆ ಇತರ ಸ್ಥಳೀಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಇದೇ ಎಂಪಿಲಾಡ್ಸ್‌ ನಿಧಿಯಿಂದಲೇ. ಕಳೆದ ಎರಡು ವರ್ಷ ಈ ನಿಧಿ ಸ್ಥಗಿತವಾಗಿದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಸರಿಯಾದ ಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿರಲಿಲ್ಲ. ಅಂದರೆ, ರಸ್ತೆ ನಿರ್ಮಾಣ, ಕುಡಿಯುವ ನೀರು ವ್ಯವಸ್ಥೆ, ಪ್ರಾಥಮಿಕ ಶಿಕ್ಷಣ, ಸಾರ್ವಜನಿಕ ಆರೋಗ್ಯ, ನೈರ್ಮಲ್ಯದಂಥ ಕೆಲಸಗಳು ನಿಂತೇ ಹೋಗಿದ್ದವು. ಈ ಕೆಲಸಗಳಿಗೆ ಸಾಮಾನ್ಯವಾಗಿ ಸ್ಥಳೀಯ ಸಂಸದರ ಅಭಿವೃದ್ಧಿ ನಿಧಿಯಿಂದಲೇ ಹಣ ಬಿಡುಗಡೆಯಾಗುತ್ತಿತ್ತು. ಜತೆಗೆ, ಸಂಸದರಿಗೂ ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಿಗುತ್ತಿದ್ದ ಅವಕಾಶವೂ ಇದಾಗಿತ್ತು.ಆದರೆ ಎರಡು ವರ್ಷಗಳ ಕಾಲ ಈ ಯೋಜನೆಯ ನಿಧಿ ಸ್ಥಗಿತವಾಗಿದ್ದರಿಂದ ಸ್ಥಳೀಯವಾಗಿ ಕೆಲಸ ಮಾಡಲು ಆಗದಂಥ ಪರಿಸ್ಥಿತಿ ತಲೆದೋರಿತ್ತು. ಈಗ ಕೇಂದ್ರ ಸರಕಾರ ಮತ್ತೆ ಸಂಸದರ ನಿಧಿಗೆ ಹಣ ಬಿಡುಗಡೆ ಮಾಡಿರುವುದರಿಂದ ಮತ್ತೆ ಅಭಿವೃದ್ಧಿ ಚಟುವಟಿಕೆಗಳು ಚುರುಕುಗೊಳ್ಳುವ ನಿರೀಕ್ಷೆ ಇದೆ.

ಇತ್ತೀಚೆಗಷ್ಟೇ ಹಲವಾರು ಸಂಸದರು ಕೇಂದ್ರ ಸರಕಾರದ ಮೇಲೆ ಎಂಪಿಲಾಡ್ಸ್‌ ನಿಧಿ ಪುನರ್‌ಸ್ಥಾಪಿಸುವ ಬಗ್ಗೆ ಒತ್ತಡ ಹೇರುತ್ತಲೇ

ಇದ್ದರು. ಅಲ್ಲದೆ, ಸಂಸತ್‌ನಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು. ಸಂಸದರ ನಿಧಿ ಬಿಡುಗಡೆಯಾಗದೇ ಇರುವ ಕಾರಣದಿಂದಾಗಿ ನಾವು ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಜನತೆ ಕೂಡ ಸ್ಥಳೀಯವಾಗಿ ಅಭಿವೃದ್ಧಿಗಾಗಿ ಮನವಿ ಹೊತ್ತು ತರುತ್ತಿದ್ದಾರೆ. ಇವರಿಗೆ ಉತ್ತರ ಹೇಳಲೂ ಆಗುತ್ತಿಲ್ಲ.  ಹೀಗಾಗಿ ಶೀಘ್ರವೇ ಎಂಪಿಲಾಡ್ಸ್‌ ಅನ್ನು ಮತ್ತೆ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಪಕ್ಷಭೇದ ಮರೆತು ಸದಸ್ಯರು ಆಗ್ರಹಿಸಿದ್ದರು. ಈಗ ಎಲ್ಲರ ಒತ್ತಾಸೆಯಂತೆ ಕೇಂದ್ರ ಸರಕಾರ ಸಂಸದರ ನಿಧಿ ಬಿಡುಗಡೆ ಮಾಡಲು ಒಪ್ಪಿದ್ದು, ಇದನ್ನು ಸಂಸದರೂ ಉತ್ತಮವಾಗಿ ಬಳಸಿಕೊಳ್ಳಬೇಕು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.