ರಾಮನಗರದಲ್ಲಿ ಕಾರ್ಖಾನೆಗಳ ಪುನರಾರಂಭಕ್ಕೆ ಅವಕಾಶ ನೀಡಬೇಕು: ಕುಮಾರಸ್ವಾಮಿ
Team Udayavani, Apr 30, 2020, 6:01 PM IST
ಬೆಂಗಳೂರು: ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು. ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.
ಹೊರಗಿನಿಂದ ಬರುವ ಕಾರ್ಮಿಕರಿಗೆ ತಾತ್ಕಾಲಿಕ ನಿರ್ಬಂಧ ಮುಂದುವರಿಸಿದರೂ, 9 ಜಿಲ್ಲೆಗಳಿಗೆ ನೀಡಿರುವಂತೆ ರಾಮನಗರ ಜಿಲ್ಲೆಯ ಕಾರ್ಮಿಕರು ದುಡಿದು ತಿನ್ನಲು ತಕ್ಷಣವೇ ವಿನಾಯಿತಿ ಘೋಷಿಸಬೇಕು ಎಂದಿದ್ದಾರೆ.
ರಾಮನಗರ ಜಿಲ್ಲೆಯಾದ್ಯಂತ ಕಾರ್ಖಾನೆಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಹಸಿರು ನಿಶಾನೆ ತೋರಬೇಕು. ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುವ ಮೂಲಕ ಉದ್ದಿಮೆದಾರರು ಮತ್ತು ಕಾರ್ಮಿಕರ ಬದುಕಿಗೆ ಆಸರೆಯಾಗಬೇಕು.
1/3— H D Kumaraswamy (@hd_kumaraswamy) April 30, 2020