ಅಂದು ಸೇವಾ ಕ್ಷೇತ್ರ: ಇಂದು ವ್ಯಾಪಾರೀಕರಣ


Team Udayavani, Feb 1, 2023, 6:15 AM IST

ಅಂದು ಸೇವಾ ಕ್ಷೇತ್ರ: ಇಂದು ವ್ಯಾಪಾರೀಕರಣ

ಸೊಗಡು ಎಸ್‌.ಶಿವಣ್ಣ, ಮಾಜಿ ಸಚಿವರು
ತುಮಕೂರು: ಸೇವಾಕ್ಷೇತ್ರವಾಗಿದ್ದ ರಾಜಕಾರಣ ಇಂದು ವ್ಯಾಪಾರೀಕರಣವಾಗಿದೆ. ಬಂಡವಾಳ ಹಾಕಿ ಬಂಡವಾಳ ತೆಗೆಯುವ ಸ್ಥಿತಿಗೆ ರಾಜಕಾರಣ ಬಂದು ಬಿಟ್ಟಿದೆ. ಜನರೇ ಹಣ ನೀಡಿ ಓಟು ಹಾಕುವ ಕಾಲ ಅಂದು ಇತ್ತು, ಇಂದು ಹಣ ಪಡೆದೇ ಓಟು ಹಾಕುವ ಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ತುಮಕೂರು ನಗರ ಕ್ಷೇತ್ರದಿಂದ ನಾಲ್ಕು ಬಾರಿ ಗೆಲುವು ಸಾಧಿಸಿದ್ದ ಮಾಜಿ ಸಚಿವ ಸೊಗಡು ಎಸ್‌.ಶಿವಣ್ಣ ಅಂದಿನ ತಮ್ಮ ಚುನಾವಣ ದಿನಗಳನ್ನು “ಉದಯವಾಣಿ’ಯೊಂದಿಗೆ ನೆನಪಿಸಿಕೊಂಡಿದ್ದಾರೆ.

ಇಂದಿನ ಚುನಾವಣೆ ಜಾತಿ, ಭ್ರಷ್ಟಾಚಾರದಿಂದ ಕೂಡಿದೆ. ಹಣವಿಲ್ಲದೇ ಚುನಾವಣೆ ನಡೆಸಲು ಸಾಧ್ಯವಿ ಲ್ಲದ ಸ್ಥಿತಿಗೆ ಬಂದಿದೆ. ಬಂಡವಾಳಗಾರರು ಹಣ ಲೂಟಿ ಮಾಡಲು ರಾಜಕಾರಣಕ್ಕೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಈಗ ಎಲೆಕ್ಷನ್‌ ಅಲ್ಲ ಕಲಕ್ಷನ್‌ ಆಗಿ ಬಿಟ್ಟಿದೆ. ಭ್ರಷ್ಟರ, ಭ್ರಷ್ಟಾಚಾರದ ಕೂಟವಾಗಿದೆ ಎನ್ನುತ್ತಾರೆ ಮಾಜಿ ಸಚಿವ ಸೊಗಡು ಎಸ್‌.ಶಿವಣ್ಣ.

1994, 1999, 2004 ಮತ್ತು 2008ರಲ್ಲಿ ನಿರಂತರವಾಗಿ ಗೆಲುವು ಸಾಧಿಸಿರುವ ಶಿವಣ್ಣ ತಮ್ಮ ಪ್ರಚಾರ ವೈಖರಿ ಬಗ್ಗೆ ವಿವರಿಸಿದ್ದು, ನನ್ನ ಪ್ರಚಾರ ಬಹಳ ಸರಳವಾಗಿತ್ತು, ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದೆ. ಯಾವುದೇ ಅಬ್ಬರ ಇಲ್ಲ, ಮನೆಗೆ ಹೋದಾಗ ಜಾತಿ, ಮತ, ಧರ್ಮ ಭೇದವಿಲ್ಲದೇ ಜನರು ಬಹಳ ಪ್ರೀತಿಯಿಂದ ಸ್ವಾಗತಿಸುತ್ತಿದ್ದರು. ಕೆಲವರು ನಮಗೇ ಚುನಾವಣೆ ಖರ್ಚಿಗಾಗಿ ಎಲೆ, ಅಡಿಕೆಯಲ್ಲಿ ಹಣ ಇಟ್ಟು ನನಗೆ ಕೊಟ್ಟು ಚುನಾವಣೆ ಖರ್ಚಿಗೆ ಇಟ್ಟುಕೊಳ್ಳಿ ಎಂದು ಹೇಳುತ್ತಿದ್ದರು. ಆಗ ಬಹಳ ಸರಳವಾದ ಪ್ರಚಾರ ಇತ್ತು ಈಗಿನ ರೀತಿಯಲ್ಲಿ ಅಬ್ಬರ ಇರಲಿಲ್ಲ.

ನನ್ನ ಮೊದಲ ಚುನಾವಣೆ 1994ರಲ್ಲಿ ಕೇವಲ 80 ಸಾವಿರ ರೂ ಮಾತ್ರ ಖರ್ಚಾಗಿತ್ತು, ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಿದ್ದ‌ರು. ಅದರಿಂದ ನಾನು ನಾಲ್ಕು ಬಾರಿ ನಿರಂತರ ಗೆಲುವು ಸಾಧಿಸಲು ಸಾಧ್ಯವಾಗಿತ್ತು.

ಅಂದು ಪಕ್ಷಕ್ಕಾಗಿ ಪ್ರಾಣ ಬಿಡುವ ಕಾರ್ಯಕರ್ತರು ಇದ್ದರು, ಇಂದು ಪ್ರಾಮಾಣಿಕವಾಗಿ ಕೆಲಸ ಮಾಡುವ ಕಾರ್ಯಕರ್ತರಿಲ್ಲ, ಅವರು ವರ್ಕರ್ಗಳಾಗಿದ್ದಾರೆ. ಅಂದು ಜನಪ್ರತಿನಿಧಿಯೊಂದಿಗೆ ಮತದಾರರು ಉತ್ತಮ ಸಂಬಂಧ ಹೊಂದಿ ಕೆಲಸ ಮಾಡಲು ಪ್ರೇರೇಪಿಸುತ್ತಿದ್ದರು. ಇಂದು ಮತದಾರರು ಯಾರೂ ಪ್ರಶ್ನೆ ಮಾಡದ ಸ್ಥಿತಿಗೆ ರಾಜಕಾರಣ ಬಂದಿದೆ.

-ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

ಕೊಳ್ಳೇಗಾಲ ‘ಕೈ’ ಟಿಕೆಟ್‌ಗೆ ಇಬ್ಬರ ಹೆಸರು ಫೈನಲ್‌

ಕೊಳ್ಳೇಗಾಲ ‘ಕೈ’ ಟಿಕೆಟ್‌ಗೆ ಇಬ್ಬರ ಹೆಸರು ಫೈನಲ್‌

siddaramaiah

ಚುನಾವಣೆಗೆ ಐಟಿ ಅಧಿಕಾರಿಗಳ ನೇಮಕ ; ಕಾಂಗ್ರೆಸ್ ಕಟ್ಟಿಹಾಕಲು ಪ್ಲ್ಯಾನ್: ಸಿದ್ದರಾಮಯ್ಯ

tdy-17

ಬೆಂಗಳೂರು ಗ್ರಾಮಾಂತರ: ಕಮಲ ಅಭ್ಯರ್ಥಿಗಳ ಆಯ್ಕೆ ಕುತೂಹಲ

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

KAGODU

ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.