ಅಂದು ಸೇವಾ ಕ್ಷೇತ್ರ: ಇಂದು ವ್ಯಾಪಾರೀಕರಣ


Team Udayavani, Feb 1, 2023, 6:15 AM IST

ಅಂದು ಸೇವಾ ಕ್ಷೇತ್ರ: ಇಂದು ವ್ಯಾಪಾರೀಕರಣ

ಸೊಗಡು ಎಸ್‌.ಶಿವಣ್ಣ, ಮಾಜಿ ಸಚಿವರು
ತುಮಕೂರು: ಸೇವಾಕ್ಷೇತ್ರವಾಗಿದ್ದ ರಾಜಕಾರಣ ಇಂದು ವ್ಯಾಪಾರೀಕರಣವಾಗಿದೆ. ಬಂಡವಾಳ ಹಾಕಿ ಬಂಡವಾಳ ತೆಗೆಯುವ ಸ್ಥಿತಿಗೆ ರಾಜಕಾರಣ ಬಂದು ಬಿಟ್ಟಿದೆ. ಜನರೇ ಹಣ ನೀಡಿ ಓಟು ಹಾಕುವ ಕಾಲ ಅಂದು ಇತ್ತು, ಇಂದು ಹಣ ಪಡೆದೇ ಓಟು ಹಾಕುವ ಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ತುಮಕೂರು ನಗರ ಕ್ಷೇತ್ರದಿಂದ ನಾಲ್ಕು ಬಾರಿ ಗೆಲುವು ಸಾಧಿಸಿದ್ದ ಮಾಜಿ ಸಚಿವ ಸೊಗಡು ಎಸ್‌.ಶಿವಣ್ಣ ಅಂದಿನ ತಮ್ಮ ಚುನಾವಣ ದಿನಗಳನ್ನು “ಉದಯವಾಣಿ’ಯೊಂದಿಗೆ ನೆನಪಿಸಿಕೊಂಡಿದ್ದಾರೆ.

ಇಂದಿನ ಚುನಾವಣೆ ಜಾತಿ, ಭ್ರಷ್ಟಾಚಾರದಿಂದ ಕೂಡಿದೆ. ಹಣವಿಲ್ಲದೇ ಚುನಾವಣೆ ನಡೆಸಲು ಸಾಧ್ಯವಿ ಲ್ಲದ ಸ್ಥಿತಿಗೆ ಬಂದಿದೆ. ಬಂಡವಾಳಗಾರರು ಹಣ ಲೂಟಿ ಮಾಡಲು ರಾಜಕಾರಣಕ್ಕೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಈಗ ಎಲೆಕ್ಷನ್‌ ಅಲ್ಲ ಕಲಕ್ಷನ್‌ ಆಗಿ ಬಿಟ್ಟಿದೆ. ಭ್ರಷ್ಟರ, ಭ್ರಷ್ಟಾಚಾರದ ಕೂಟವಾಗಿದೆ ಎನ್ನುತ್ತಾರೆ ಮಾಜಿ ಸಚಿವ ಸೊಗಡು ಎಸ್‌.ಶಿವಣ್ಣ.

1994, 1999, 2004 ಮತ್ತು 2008ರಲ್ಲಿ ನಿರಂತರವಾಗಿ ಗೆಲುವು ಸಾಧಿಸಿರುವ ಶಿವಣ್ಣ ತಮ್ಮ ಪ್ರಚಾರ ವೈಖರಿ ಬಗ್ಗೆ ವಿವರಿಸಿದ್ದು, ನನ್ನ ಪ್ರಚಾರ ಬಹಳ ಸರಳವಾಗಿತ್ತು, ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದೆ. ಯಾವುದೇ ಅಬ್ಬರ ಇಲ್ಲ, ಮನೆಗೆ ಹೋದಾಗ ಜಾತಿ, ಮತ, ಧರ್ಮ ಭೇದವಿಲ್ಲದೇ ಜನರು ಬಹಳ ಪ್ರೀತಿಯಿಂದ ಸ್ವಾಗತಿಸುತ್ತಿದ್ದರು. ಕೆಲವರು ನಮಗೇ ಚುನಾವಣೆ ಖರ್ಚಿಗಾಗಿ ಎಲೆ, ಅಡಿಕೆಯಲ್ಲಿ ಹಣ ಇಟ್ಟು ನನಗೆ ಕೊಟ್ಟು ಚುನಾವಣೆ ಖರ್ಚಿಗೆ ಇಟ್ಟುಕೊಳ್ಳಿ ಎಂದು ಹೇಳುತ್ತಿದ್ದರು. ಆಗ ಬಹಳ ಸರಳವಾದ ಪ್ರಚಾರ ಇತ್ತು ಈಗಿನ ರೀತಿಯಲ್ಲಿ ಅಬ್ಬರ ಇರಲಿಲ್ಲ.

ನನ್ನ ಮೊದಲ ಚುನಾವಣೆ 1994ರಲ್ಲಿ ಕೇವಲ 80 ಸಾವಿರ ರೂ ಮಾತ್ರ ಖರ್ಚಾಗಿತ್ತು, ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಿದ್ದ‌ರು. ಅದರಿಂದ ನಾನು ನಾಲ್ಕು ಬಾರಿ ನಿರಂತರ ಗೆಲುವು ಸಾಧಿಸಲು ಸಾಧ್ಯವಾಗಿತ್ತು.

ಅಂದು ಪಕ್ಷಕ್ಕಾಗಿ ಪ್ರಾಣ ಬಿಡುವ ಕಾರ್ಯಕರ್ತರು ಇದ್ದರು, ಇಂದು ಪ್ರಾಮಾಣಿಕವಾಗಿ ಕೆಲಸ ಮಾಡುವ ಕಾರ್ಯಕರ್ತರಿಲ್ಲ, ಅವರು ವರ್ಕರ್ಗಳಾಗಿದ್ದಾರೆ. ಅಂದು ಜನಪ್ರತಿನಿಧಿಯೊಂದಿಗೆ ಮತದಾರರು ಉತ್ತಮ ಸಂಬಂಧ ಹೊಂದಿ ಕೆಲಸ ಮಾಡಲು ಪ್ರೇರೇಪಿಸುತ್ತಿದ್ದರು. ಇಂದು ಮತದಾರರು ಯಾರೂ ಪ್ರಶ್ನೆ ಮಾಡದ ಸ್ಥಿತಿಗೆ ರಾಜಕಾರಣ ಬಂದಿದೆ.

-ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.