Education: ಪಠ್ಯ ಪರಿಷ್ಕರಣೆಗೆ ಸಮಿತಿ ರಚಿಸಿದ ರಾಜ್ಯ ಸರಕಾರ

ಐವರು ಅಧ್ಯಕ್ಷರನ್ನೊಳಗೊಂಡು 37 ಸದಸ್ಯರ ಪರಿಷ್ಕರಣ ಸಮಿತಿ ರಚನೆ

Team Udayavani, Sep 26, 2023, 11:28 PM IST

text books

 

ಬೆಂಗಳೂರು: ರಾಷ್ಟ್ರೀಯ ಪಠ್ಯ ಕ್ರಮ ಚೌಕಟ್ಟು-2005 ಆಧಾರಿತವಾಗಿ ರಚನೆಯಾಗಿರುವ ರಾಜ್ಯದ ಒಂದರಿಂದ ಹತ್ತನೇ ತರಗತಿಯವರೆಗಿನ ಕನ್ನಡ ಪ್ರಥಮ ಮತ್ತು ದ್ವಿತೀಯ ಭಾಷೆ, ಒಂಭತ್ತು ಮತ್ತು ಹತ್ತನೇ ತರಗತಿಯ ಕನ್ನಡ ತೃತೀಯ ಭಾಷೆ ಪಠ್ಯ ಪುಸ್ತಕ ಮತ್ತು ಆರರಿಂದ ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ರಾಜ್ಯ ಸರಕಾರ ಸಮಿತಿ ರಚಿಸಿದೆ.

ಈ ಸಮಿತಿಗೆ ಉತ್ತರ ಕನ್ನಡದ ಕುಮಟದ ನಿವೃತ್ತ ಪ್ರಾಧ್ಯಾಪಕ ಡಾ| ಮಂಜುನಾಥ್‌ ಜಿ. ಹೆಗಡೆ ಅವರನ್ನು ಮುಖ್ಯ ಸಂಯೋಜಕರನ್ನಾಗಿ ನೇಮಿಸಲಾಗಿದೆ.

ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಈ ಪಠ್ಯ ಪುಸ್ತಕಗಳನ್ನು ರೋಹಿತ್‌ ಚಕ್ರತೀರ್ಥ ಅವರ ಸಮಿತಿ ಪರಿಷ್ಕರಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಆಗ ಈ ಪರಿಷ್ಕರಣೆಯನ್ನು ಕಾಂಗ್ರೆಸ್‌ ಕಟುವಾಗಿ ವಿರೋಧಿಸಿತ್ತು. ತಾನು ಅಧಿಕಾರಕ್ಕೆ ಬಂದರೆ ಪಠ್ಯ ಪುಸ್ತಕವನ್ನು ಮತ್ತೆ ಪರಿಷ್ಕರಿಸುವುದಾಗಿ ಹೇಳಿದ್ದಲ್ಲದೇ ಅಧಿಕಾರಕ್ಕೆ ಬಂದ ಬಳಿಕ ಕೆಲವು ಪ್ರಮುಖ ಅಂಶಗಳನ್ನು ಪರಿಷ್ಕರಿಸಿತ್ತು. ಇದೀಗ ಐವರು ಅಧ್ಯಕ್ಷರನ್ನೊಳಗೊಂಡು ಒಟ್ಟು 37 ಸದಸ್ಯರ ಪರಿಷ್ಕರಣ ಸಮಿತಿ ರಚಿಸಿದ್ದು, 2024-25ನೇ ಶೈಕ್ಷಣಿಕ ಸಾಲಿಗೆ ಜಾರಿಗೊಳಿಸಲು ಅನುಕೂಲವಾಗುವಂತೆ 2 ರಿಂದ 3 ತಿಂಗಳೊಳಗೆ ಪರಿಷ್ಕರಣ ಕಾರ್ಯ ಪೂರ್ಣಗೊಳಿಸುವಂತೆ ಸರಕಾರ ಸೂಚಿಸಿದೆ.

2023-24ರ ಸಾಲಿನ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕ ಪರಿಷ್ಕರಣ ಸಮಿತಿಗೆ ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ| ಆಂಜನಪ್ಪ, ಕನ್ನಡ ದ್ವಿತೀಯ ಭಾಷೆ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ಚಿಕ್ಕಮಗಳೂರಿನ ಬಸವನಹಳ್ಳಿಯ ಸರಕಾರಿ ಬಾಲಿಕಾ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ಡಾ| ಎಚ್‌.ಎನ್‌. ಸತ್ಯನಾರಾಯಣ್‌, ಕನ್ನಡ ತೃತೀಯ ಭಾಷೆ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ದಾವಣಗೆರೆಯ ಸರಕಾರಿ ಮಹಿಳಾ ಪ್ರಥಮ ದರ್ಜೆಯ ಉಪನ್ಯಾಸಕ ಡಾ| ಮಂಜಣ್ಣ, 6 ಮತ್ತು 7ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಪರಿಷ್ಕರಣೆಗೆ ಕಲಬುರಗಿಯ ಕೇಂದ್ರೀಯ ವಿದ್ಯಾನಿಲಯದ ಸಾರ್ವಜನಿಕ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಕಿರಣ ಎಂ., 8 ಮತ್ತು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆ ಸಮಿತಿಯ ಸಮಿತಿಗೆ ಬೆಂಗಳೂರು ವಿವಿ ಇತಿಹಾಸ ವಿಭಾಗದ ಡಾ| ಅಶ್ವತ್ಥ ನಾರಾಯಣ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸಮಿತಿಗಳ ಸದಸ್ಯ ಕಾರ್ಯದರ್ಶಿಯಾಗಿ ಕರ್ನಾಟಕ ಪಠ್ಯಪುಸ್ತಕ ಸಂಘದ ನಿರ್ದೇಶಕರು ಕಾರ್ಯನಿರ್ವಹಿಸಲಿದ್ದಾರೆ.

ಹಾಗೆಯೇ ಸರಕಾರಕ್ಕೆ ಮಾಸಿಕ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸಂಯೋಜಕರಿಗೆ ಸರಕಾರ ಸೂಚಿಸಿದೆ. ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಸದಸ್ಯರಾಗಿ ಬೆಂಗಳೂರಿನ ಡಾ| ಬಿ.ಸಿ. ನಾಗೇಂದ್ರ ಕುಮಾರ್‌, ಚಿಕ್ಕದೇವೇಗೌಡ, ನೇತ್ರಾವತಿ, ನರಸಿಂಹ ಮೂರ್ತಿ ಬಿ.ಕೆ., ವಿಶ್ವನಾಥ್‌ ಜಿ.ಎಸ್‌., ಗಂಗಾವತಿಯ ಅಜಮೀರ ನಂದಾಪುರ, ಮದ್ದೂರಿನ ಸುಶೀಲಾ, ಶಿರಸಿಯ ಅಕ್ಷತಾ ಅವರನ್ನು ನೇಮಕ ಮಾಡಲಾಗಿದೆ.

ಕನ್ನಡ ದ್ವಿತೀಯ ಭಾಷೆ ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಸದಸ್ಯರನ್ನಾಗಿ ಬೆಂಗಳೂರಿನ ಡಾ| ಬಿ. ಪಾಪಣ್ಣ, ಅನಿತಾ, ಈರಪ್ಪ ಮಹಾಲಿಂಗಪುರ, ರಶ್ಮಿ, ಪವಿತ್ರಾ, ಚಿಕ್ಕಮಗಳೂರಿನ ಡಾ| ಗಣೇಶ್‌, ಬೆಳಗಾವಿಯ ಡಾ| ಗಜಾನಂದ್‌, ಮೈಸೂರಿನ ರವೀಶ್‌ ಕುಮಾರ್‌ ಅವರನ್ನು ನೇಮಿಸಲಾಗಿದೆ. ಕನ್ನಡ ತೃತೀಯ ಭಾಷೆಯ ಪರಿಷ್ಕರಣ ಸಮಿತಿಗೆ ಬೆಂಗಳೂರಿನ ಮಮತಾ ಭಾಗವತ್‌, ತುಮಕೂರಿನ ಶಿವಣ್ಣ ಹೆಂದೊರೆ ಅವರನ್ನು ಆಯ್ಕೆ ಮಾಡಲಾಗಿದೆ.

ಸುಳ್ಯದ ಡಾ| ಪ್ರದೀಪ ಕೆಂಚನೂರ್‌ ನೇಮಕ
6 ಮತ್ತು 7ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಪರಿಷ್ಕರಣೆಗೆ ಮೈಸೂರಿನ ಡಾ| ಕೃಷ್ಣಾ ಹೊಂಬಾಳೆ, ಸುಳ್ಯದ ಡಾ| ಪ್ರದೀಪ ಕೆಂಚನೂರ್‌, ಚಿಕ್ಕಬಳ್ಳಾಪುರದ ಡಾ| ಕೋಡಿ ರಂಗಪ್ಪ, ಬೆಳಗಾವಿಯ ದಾನಮ್ಮ ಜಳಕಿ, ಗುಬ್ಬಿಯ ವಸೀಮ್‌ ಅನ್ವರ್‌ ಅವರನ್ನು ನೇಮಿಸಲಾಗಿದೆ. 8, 9 ಮತ್ತು 10 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಪರಿಷ್ಕರಣೆಗೆ ಚಿತ್ರದುರ್ಗದ ಡಾ| ಗಂಗಾಧರ್‌ ಪಿ.ಎಸ್‌., ತುಮಕೂರಿನ ಪ್ರೊ| ಬಿ. ಶೇಖರ್‌, ಬೆಳಗಾವಿಯ ಎ.ಬಿ. ವಗ್ಗರ, ಬೆಂಗಳೂರಿನ ಡಾ| ಶ್ರೀನಿವಾಸ ಯಡವಾಣಿ, ಮೊಹನ್‌ ಕುಮಾರಿ ಎಸ್‌., ಕನಕಪುರದ ತಬುಸ್ಸಮ್‌ ಫಾತಿಮ, ಶಿರಾದ ಪಿ.ಎಂ. ಕಾಗಿನಕರ್‌, ನೆಲಮಂಗಲದ ಶಾಹಿನಾ ಅಲ್ಲಾಪುರ ಅವರನ್ನು ನೇಮಕ ಮಾಡಲಾಗಿದೆ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.