Dandeli: ಅಸ್ಪಷ್ಟ ಮಾತನಾಡುವ ವೃದ್ಧೆಯನ್ನು ಬಿಟ್ಟು ಹೋದ ದುರುಳರು
ವೃದ್ಧೆಯ ಆರೈಕೆಯಲ್ಲಿ ಹಳಿಯಾಳ ರಸ್ತೆಯ ಜನತೆ
Team Udayavani, Dec 19, 2023, 8:52 PM IST
ದಾಂಡೇಲಿ : ಅವರು ಸರಿ ಸುಮಾರು 70 ವರ್ಷ ದಾಟಿದ ವೃದ್ಧೆ. ಅಸ್ಪಷ್ಟವಾಗಿ ಮಾತನಾಡುವುದರಿಂದ ಅವರ ಹೆಸರು, ಊರು ಯಾವುದೆಂದು ಇನ್ನೂ ನಿಖರವಾಗಿ ಹೇಳಲಾಗುತ್ತಿಲ್ಲ. ಈ ವೃದ್ಧೆ ಯಾರೆಂದು ಗೊತ್ತಿಲ್ಲದೇ ಇದ್ದರೂ ಸ್ಥಳೀಯ ಜನತೆ ಪ್ರತಿ ನಿತ್ಯ ಊಟೋಪಚಾರವನ್ನು ನೀಡುವ ಮೂಲಕ ಆರೈಕೆ ಮಾಡಿ ಮಾನವೀಯತೆಯನ್ನು ಮೆರೆಯುತ್ತಿದ್ದಾರೆ.
ಅಂದ ಹಾಗೆ ಇದು ದಾಂಡೇಲಿ ನಗರದ ಹಳಿಯಾಳ ರಸ್ತೆಯಲ್ಲಿರುವ 3 ನಂಬರ್ ಗೇಟ್ ಪ್ರದೇಶ ವ್ಯಾಪ್ತಿಯಲ್ಲಿರುವ ಶ್ರೀ.ಮಾರುತಿ ಮಂದಿರದ ಆವರಣದಲ್ಲಿ ವೃದ್ಧೆಯೋರ್ವರು ತಮ್ಮ ಕುಟುಂಬಸ್ಥರಿಗಾಗಿ ಕಳೆದ 15 ದಿನಗಳಿಂದ ನಿತ್ಯ ರೋಧಿಸುತ್ತಿರುವ ಘಟನೆಯಿದು.
ಮರಾಠಿ ಮತ್ತು ಕೊಂಕಣಿ ಮಾತನಾಡುವ ಈ ವೃದ್ಧೆ ಲೋಂಡಾ ವ್ಯಾಪ್ತಿಯ ನಿವಾಸಿ ಎನ್ನುತ್ತಿದ್ದಾರೆ ಸ್ಥಳೀಯರು. ಈ ಅಜ್ಜಿ ಹೇಳಿದ ಪ್ರಕಾರ ಮಗ ರಾಮದಾಸ ಎಂಬಾತನು ಅಜ್ಜಿಯನ್ನು ಇಲ್ಲಿ ಬಿಟ್ಟು ಹೋಗಿದ್ದಾನೆ ಎಂದು ಅಜ್ಜಿ ಹೇಳಿರುವುದನ್ನು ಇಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
ವಯೋವೃದ್ಧೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿಯೂ ಕೂಡ ಏರುಪೇರಾಗಿದೆ. ಈ ನಿಟ್ಟಿನಲ್ಲಿ ಈ ಕೂಡಲೇ ಈ ವೃದ್ಧೆಯ ಕುಟುಂಬಸ್ಥರು ಎಲ್ಲಿದ್ದರೂ ಕೂಡ ಬಂದು ವೃದ್ಧೆಯನ್ನು ಕರೆದುಕೊಂಡು ಹೋಗುವಂತೆ ಸ್ಥಳೀಯರು ಮಾಧ್ಯಮದ ಮೂಲಕ ಮನವಿಯನ್ನು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ