Parliament: ಉಪರಾಷ್ಟ್ರಪತಿಗಳನ್ನು ಮತ್ತೆ ಅಣಕಿಸಿದ ಟಿಎಂಸಿ ಸಂಸದ!
ಸಾವಿರ ಬಾರಿ ಅದನ್ನೇ ಮಾಡುವೆ ಎಂದ ಕಲ್ಯಾಣ್ ಬ್ಯಾನರ್ಜಿ
Team Udayavani, Dec 25, 2023, 11:16 PM IST
ಹೊಸದಿಲ್ಲಿ/ಕೋಲ್ಕತಾ: ಉಪರಾಷ್ಟ್ರಪತಿ ಮತ್ತು ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಕರ್ಅವರನ್ನು ಮಿಮಿಕ್ರಿ ಮಾಡಿ ವಿವಾದಕ್ಕೆ ಒಳಗಾಗಿದ್ದ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಮತ್ತೆ ಅದೇ ಕೃತ್ಯವೆಸಗಿದ್ದಾರೆ. “ಮಿಮಿಕ್ರಿ ಎನ್ನುವುದು ಕಲೆ. ನಾನು ಇನ್ನೂ ಸಾವಿರ ಬಾರಿ ಉಪರಾಷ್ಟ್ರಪತಿಗಳನ್ನು ಅಣಕಿಸುವೆ” ಎಂದು ಸವಾಲನ್ನೂ ಹಾಕಿ, ಉದ್ಧಟತನ ಮೆರೆದಿದ್ದಾರೆ.
ಇದೀಗ ಪಶ್ಚಿಮ ಬಂಗಾಲದ ಸೆರ್ಮಾರ್ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯ ಕ್ರಮದಲ್ಲಿ ಮತ್ತೆ ರಾಜ್ಯಸಭೆ ಸಭಾಪತಿಗಳನ್ನು ಅಣಕವಾಡಿದ್ದಾರೆ. “ಇದೊಂದು ಮಿಮಿಕ್ರಿ. ಒಂದು ಬಾರಿ ಏಕೆ? ಅಗತ್ಯ ಬಿದ್ದರೆ ನಾನು ಸಾವಿರ ಬಾರಿ ಅವರನ್ನು ಅಣಕ ಮಾಡುತ್ತೇನೆ” ಸವಾಲನ್ನೂ ಹಾಕಿದ್ದಾರೆ. “ನನಗೆ ಮೂಲಭೂತ ಹಕ್ಕುಗಳಿವೆ. ನಾನು ಮಾಡಿದ್ದು ತಪ್ಪಾದರೆ ಜೈಲಿಗೆ ಕೂಡ ಹಾಕಿ. ನನ್ನ ನಿಲುವಿನಿಂದ ಹಿಂದೆ ಸರಿಯುವುದೇ ಇಲ್ಲ” ಎಂದಿದ್ದಾರೆ.
ಸಂಸತ್ ಭವನದಲ್ಲಿ ಡಿ.13ರಂದು ಭದ್ರತಾ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡ ಸಂಸದರಲ್ಲಿ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಕೂಡ ಒಬ್ಬರಾಗಿದ್ದರು. ಅಮಾನತು ಖಂಡಿಸಿ ಸಂಸತ್ ಹೊರಭಾಗದಲ್ಲಿ ಪ್ರತಿಭಟನೆ ನಡೆಸುವ ವೇಳೆ, ಉಪರಾಷ್ಟ್ರಪತಿ ಮತ್ತು ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಕರ್ ಅವರನ್ನು ಅಣಕಿಸಿ, ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಅದನ್ನು ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡದ್ದು ಕೂಡ ಎನ್ಡಿಎ ನಾಯಕ ಆಕ್ರೋಶಕ್ಕೆ ಕಾರಣವಾಗಿತ್ತು. ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಕೂಡ ವರ್ತನೆಯನ್ನು ಆಕ್ಷೇಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ