Uppinangady ಪೆರಿಯಡ್ಕ ಹಾಲು ಉತ್ಪಾದಕರ ಸೊಸೈಟಿಯಿಂದ ಕಳ್ಳತನ
Team Udayavani, Mar 21, 2024, 12:50 AM IST
ಉಪ್ಪಿನಂಗಡಿ: ಪೆರಿಯಡ್ಕದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನುಗ್ಗಿದ ಕಳ್ಳನೋರ್ವ ಹಣಕ್ಕಾಗಿ ತಡಕಾಡಿದ ಘಟನೆ ಮಾ. 20ರಂದು ಬೆಳಕಿಗೆ ಬಂದಿದೆ.
ಮಾ. 19ರ ಸಂಜೆ ಸಂಘದ ಕಚೇರಿಯನ್ನು ಬಂದ್ ಮಾಡಿ ಸಿಬಂದಿ ತೆರಳಿದ್ದು, ಬೆಳಗ್ಗೆ ಬರುವಾಗ ಕಚೇರಿಯ ಷಟರ್ನ ಬೀಗ ಮುರಿದು ಕಳ್ಳನೋರ್ವ ಒಳಗೆ ನುಗ್ಗಿದ್ದು ಬೆಳಕಿಗೆ ಬಂದಿದೆ. ಈತ ಹಣಕ್ಕಾಗಿ ಮೇಜಿನ ಡ್ರಾವರ್ಗಳನ್ನು ಮುರಿದು ಸುಮಾರು ಒಂದೂವರೆ ಸಾವಿರ ರೂ. ಎಗರಿಸಿ, ಪರಾರಿಯಾಗಿದ್ದಾನೆ.
ಸ್ಥಳೀಯ ಮನೆಯೊಂದರಿಂದ ಪಿಕ್ಕಾಸನ್ನು ತಂದು ಷಟರ್ನ ಬೀಗ ಮುರಿಯಲು ಬಳಸಿದ್ದ ಎಂದು ತಿಳಿದು ಬಂದಿದೆ. ಗುರುತು ಸಿಗದಂತೆ ಮುಖಕ್ಕೆ ಬಟ್ಟೆಯನ್ನು ಸುತ್ತಿಕೊಂಡಿದ್ದ ಈತನ ಚಲನವಲನಗಳು ಸಂಘದ ಸಿಸಿ ಕೆಮರಾದಲ್ಲಿ ಪತ್ತೆಯಾಗಿವೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ