ಮುಂಡಗೋಡ: ವೈನ್ ಶಾಪ್ನಲ್ಲಿ ಕಳ್ಳತನ; ದೂರು ದಾಖಲು
Team Udayavani, Aug 19, 2021, 8:33 PM IST
ಮುಂಡಗೋಡ: ಕಳ್ಳರು ವೈನ್ ಶಾಪ್ನ ಮೇಲ್ಛಾವಾಣಿ ಕೊರೆದು ಒಳಗೆ ಪ್ರವೇಶಿಸಿ ಬಾಕ್ಸ್ನಲ್ಲಿದ್ದ 1,93,500 ರೂ. ನಗದನ್ನು ಕಳ್ಳತನ ಮಾಡಿಕೊಂಡು ಹೋದ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.
ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ತೃಪ್ತಿ ವೈನ್ ಶಾಪ್ ಕಳ್ಳತನವಾಗಿರುವುದು. ಈ ಶಾಪ್ ಪಕ್ಕದ ಬಿಲ್ಡಂಗ್ ಮೂಲಕ ಬಂದ ಕಳ್ಳರು ಮೊದಲಿಗೆ ವೈನ್ಶಾಪ್ನ ಮೇಲ್ಮಹಡಿ ತಗಡಿನ ಶೀಟ್ ತೆಗೆದಿದ್ದಾರೆ. ನಂತರ ರೂಮಿನ ಪಾಟಿಕಲ್ಲ ಒಡೆದು ಅದರ ಕೆಳಗೆ ಇದ್ದ ಕಟ್ಟಗಿಯ ಹಲಗೆಯನ್ನು ಮುರಿದು ಒಳಗೆ ಇಳಿದು ಪ್ಲಾಸ್ಟಿಕ್ ಬಾಕ್ಸ್ನಲ್ಲಿ ವ್ಯಾಪಾರ ಮಾಡಿ ಇಟ್ಟಿದ್ದ 1,93,500 ರೂ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಈರಜ್ಜ ಮಳವಳ್ಳಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪಿಎಸೈ ಎನ್.ಡಿ. ಜಕ್ಕಣ್ಣವರ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಇದನ್ನೂ ಓದಿ:ಕನ್ನಡೇತರರಿಗೆ ಕನ್ನಡ ಕಲಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ
ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಮಾಹಿತಿ ಸಂಗ್ರಹಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ. ಕಳ್ಳರು ಪ್ಲಾಸ್ಟಿಕ್ ಬಾಕ್ಸ್ನಲ್ಲಿದ್ದ ನಗದನ್ನು ಮಾತ್ರ ಕಳ್ಳತನ ಮಾಡಿದ್ದು ವೈನ್ ಶಾಪ್ನಲ್ಲಿರುವ ಯಾವೊಂದು ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೊಗಿಲ್ಲ. ಆದರೆ ಶಾಪ್ನಲ್ಲಿದ್ದ ಸಿ.ಸಿ ಕ್ಯಾಮೆರಾದಲ್ಲಿ ಒಬ್ಬ ಕಳ್ಳ ಮಾತ್ರ ಮೇಲ್ಮಹಡಿಯಿಂದ ಇಳಿದು ಕಳ್ಳತನ ಮಾಡಿರುವುದು ಕಂಡುಬಂದಿದೆ. ಪೊಲೀಸರು ಅತಿ ಶೀಘ್ರದಲ್ಲಿ ಕಳ್ಳರನ್ನು ಪತ್ತೆಹಚ್ಚುವ ವಿಶ್ವಾಸದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!