ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸ್ಪಷ್ಟನೆ
Team Udayavani, Apr 6, 2020, 5:40 AM IST
ಬೆಂಗಳೂರು: ಒಂದೆಡೆಯಿಂದ ರಾಜ್ಯ ಕೋವಿಡ್ 19 ವೈರಸ್ನಿಂದ ಮುಕ್ತಿ ಪಡೆಯಲು ಹೋರಾಟ ನಡೆಸುತ್ತಿದ್ದರೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ|ಕೆ.ಸುಧಾಕರ್ ನಡುವಣ ಮುಸುಕಿನ ಗುದ್ದಾಟ ತೀವ್ರಗೊಂಡಿದೆ ಎಂಬ ವರದಿಗಳ ನಡುವೆಯೇ ಇವರೀರ್ವರೂ ನಮ್ಮ ನಡುವೆ ಯಾವುದೇ ಪ್ರತಿಷ್ಠೆ ಅಥವಾ ವೈಮನಸ್ಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೋವಿಡ್ 19 ವೈರಸ್ ನಿಯಂತ್ರಣ ಕಾರ್ಯದಲ್ಲಿ ತಮ್ಮ ಮತ್ತು ಸಚಿವ ಡಾ| ಸುಧಾಕರ್ ಮಧ್ಯೆ ಪ್ರತಿಷ್ಠೆ ಇಲ್ಲ ಎಂದು ಪುನರುಚ್ಚರಿಸಿರುವ ಬಿ. ಶ್ರೀರಾಮುಲು, ಇಂಥ ಸಂಕಷ್ಟದ ಸಂದರ್ಭದಲ್ಲಿ ಕಿತ್ತಾಡಲು ನಮಗೇನು ಹುಚ್ಚೇ ಎಂದು ಪ್ರಶ್ನಿಸಿದ್ದಾರೆ. ಸಚಿವ ಡಾ| ಸುಧಾಕರ್ ನನ್ನ ಸಹೋದರರಿದ್ದಂತೆ. ನಮ್ಮಿಬ್ಬರ ನಡುವೆ ವೈಮನಸ್ಸಿದೆ ಎಂಬುದು ವದಂತಿ. ಇಂಥ ಆಧಾರರಹಿತ ಸುದ್ದಿಗಳಿಗೆ ಕಿವಿಗೊಡದೆ ನಾವು ಬಡವರ ಸೇವೆ ಮಾಡಲಿದ್ದೇವೆ. ಸರಕಾರದ ಕೆಲಸ ದೇವರ ಕೆಲಸ ಎಂದರು.
ನನ್ನ ಮತ್ತು ಆರೋಗ್ಯ ಸಚಿವ ಬಿ. ಶ್ರೀರಾಮುಲು ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕೋವಿಡ್ 19 ವಿರುದ್ಧ ಟೊಂಕಕಟ್ಟಿ ಹೋರಾಡುತ್ತಿದ್ದೇವೆ. ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ. ನಾನು ಬಿ. ಶ್ರೀರಾಮುಲು ಅಣ್ಣತಮ್ಮಂದಿರಿದ್ದಂತೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ. ನಮ್ಮದೇ ಆದ ಜವಾ ಬ್ದಾರಿಗಳಿವೆ ಎಂದು ಡಾ|ಕೆ.ಸುಧಾಕರ್ ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ