“I.N.D.I.A ಒಕ್ಕೂಟದಲ್ಲಿ ವೈಮನಸ್ಸಿಲ್ಲ” – ನಿತೀಶ್ ಕುಮಾರ್
Team Udayavani, Dec 6, 2023, 9:00 PM IST
ಪಾಟ್ನಾ: ವಿಪಕ್ಷಗಳ ಒಕ್ಕೂಟದಲ್ಲಿ ಬಿರುಕು ಮೂಡಿದೆ, ಅದೇ ಕಾರಣಕ್ಕಾಗಿ ಬಿಹಾರ ಸಿಎಂ ನಿತೀಶ್ ಕುಮಾರ್ ಒಕ್ಕೂಟದ ಸಭೆಯಲ್ಲಿ ಭಾಗಿಯಾಗಲು ನಿರಾಕರಿಸಿದ್ದಾರೆ ಎನ್ನುವ ಸುದ್ದಿ ಕೇವಲ ವದಂತಿ ಮಾತ್ರ ಎಂದು ನಿತೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಪಂಚರಾಜ್ಯ ಚುನಾವಣೆಗಳ ಫಲಿತಾಂಶದ ಬೆನ್ನಲ್ಲೇ ಬುಧವಾರ ವಿಪಕ್ಷಗಳ ಒಕ್ಕೂಟವಾದ ಇಂಡಿಯಾದ ಸಭೆ ನಡೆಸಲು ಯೋಜಿಸಲಾಗಿತ್ತು. ಆದರೆ, ಒಕ್ಕೂಟದ ಹಲವು ನಾಯಕರು ಭಾಗಿಯಾಗದ ಕಾರಣ ಸಭೆಯನ್ನು ಡಿ.17ಕ್ಕೆ ಮುಂದೂಡಲಾಗಿದೆ.
ಒಕ್ಕೂಟದ ನಾಯಕರ ನಡುವೆ ವೈಮನಸ್ಸಿರುವ ಕಾರಣಕ್ಕಾಗಿಯೇ ನಿತೀಶ್ ಸಭೆ ನಿರಾಕರಿಸಿದ್ದಾರೆ ಎಂಬ ಮಾತೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಿತೀಶ್ ಸ್ಪಷ್ಟನೆ ನೀಡಿದ್ದು, ನನಗೆ ಜ್ವರ ಬಂದಿದ್ದ ಕಾರಣ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದಿದ್ದೆ. ಅದರ ಹೊರತಾಗಿ ಮತ್ತೆಲ್ಲವೂ ಕೇವಲ ವದಂತಿ ಮಾತ್ರ. ಇದೇ ತಿಂಗಳ 3ನೇ ವಾರಕ್ಕೆ ಸಭೆ ಮುಂದೂಡಲಾಗಿದೆ ಆಗ ನಾನು ಖಂಡಿತವಾಗಿಯೂ ಭಾಗಿಯಾಗುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು