KRS ಡ್ಯಾಂನಲ್ಲಿ ನೀರಿಲ್ಲ, ನಾಲೆಗೆ ಹರಿಸುವುದಿಲ್ಲ: ಚಲುವರಾಯ ಸ್ವಾಮಿ
Team Udayavani, Dec 23, 2023, 12:27 AM IST
ಶ್ರೀರಂಗಪಟ್ಟಣ: ಕೆಆರ್ಎಸ್ ಜಲಾಶಯದಿಂದ ಯಾವುದೇ ನಾಲೆಗಳಿಗೆ ನೀರು ಹರಿಸಲಾಗುವು ದಿಲ್ಲ, ಇರುವ ನೀರನ್ನು ಕುಡಿಯಲು ಬಳಸಲಾಗುತ್ತದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯ ಸ್ವಾಮಿ ತಿಳಿಸಿದರು.
ಕೆಆರ್ಎಸ್ನ ಕಾವೇರಿ ಸಭಾಂಗಣದಲ್ಲಿ ಕಾವೇರಿ ನೀರಾವರಿ ಸಲಹಾ ಸಮಿತಿಯ ಸಭೆಯ ಬಳಿಕ ಮಾತನಾಡಿದ ಅವರು, ಸಮಿತಿ ಮೂಲಕ ರೈತರಿಗೆ ಬೇಸಗೆ ಬೆಳೆಯನ್ನು ಬೆಳೆಯಬಾರದು ಎಂದು ಎಲ್ಲಾ ರೈತರಿಗೆ ವಿನಂತಿ ಮಾಡುತ್ತೇನೆ. ಬೆಳೆ ಬೆಳೆಸಿ ನೀರಿಲ್ಲದೆ ಯಾವ ರೈತರೂ ತೊಂದರೆಗೆ ಸಿಲುಕುವುದು ಬೇಡ. ಆದ್ದರಿಂದ ಬೇಸಗೆಯ ಯಾವುದೇ ಬೆಳೆಗೂ ಮುಂದಾಗಬೇಡಿ ಎಂದು ಈ ಮೂಲಕ ರೈತರಿಗೆ ಮನವಿ ಮಾಡಿದರು.
ಸದ್ಯ 16 ಟಿಎಂಸಿ ನೀರಿದೆ
ಸದ್ಯದ ಪರಿಸ್ಥಿತಿಯಲ್ಲಿ ಕೆಆರ್ಎಸ್ ಜಲಾಶಯದಲ್ಲಿ ಕೇವಲ 16 ಟಿಎಂಸಿ ನೀರಿದೆ. ಅದರಲ್ಲಿ ಬೇಸಗೆಯಲ್ಲಿ 2 ರಿಂದ 3 ಟಿಎಂಸಿ ನೀರು ಆವಿಯಾಗುತ್ತದೆ. ಬಳಿಕ 13 ಟಿಎಂಸಿ ಉಳಿಯುತ್ತದೆ. ಪ್ರತಿ ತಿಂಗಳಿಗೆ 2.1 ಟಿಎಂಸಿ ನೀರು ಕುಡಿಯಲು ಹಾಗೂ ಕಾರ್ಖಾನೆಗಳಿಗೆ ಹಾಗೂ ಕಟಾವಿಗೆ ಬಂದ ಬೆಳೆಗೆ ಬೇಕಾಗುತ್ತದೆ. ಮೇ, ಜೂನ್ನಲ್ಲಿ ಮಳೆ ಬರದಿದ್ದರೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತೆ ಎಂದು ಹೇಳಿದರು.
ತಮಿಳುನಾಡಿಗೆ ನೀರಿಲ್ಲ
ಕಾವೇರಿ ಪ್ರಾಧಿಕಾರದ ಸೂಚನೆ ಮೇರೆಗೆ ತಮಿಳುನಾಡಿಗೆ 1 ಸಾವಿರ ಕ್ಯೂಸೆಕ್ ನೀರನ್ನು ಮಾತ್ರ ಹರಿಸಲಾಗುತ್ತಿದೆ. ನಮಗೆ ಕುಡಿಯಲು ನೀರಿನ ಕೊರತೆ ಇರುವಾಗ ತಮಿಳು ನಾಡಿಗೆ ನೀರು ಬಿಡುವುದು ಹೇಗೆ ಎಂದು ಸಚಿವರು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ