Karnataka: “ಲೋಕಸಭಾ ಚುನಾವಣೆ ಬಳಿಕ ಸರಕಾರ ಇರುವುದಿಲ್ಲ”: ಆರ್. ಅಶೋಕ್
Team Udayavani, Aug 29, 2023, 11:21 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮುಂದಿನ ಲೋಕಸಭಾ ಚುನಾವಣೆ ನಂತರ ಅಸ್ತಿತ್ವದಲ್ಲಿ ಇರುವುದಿಲ್ಲ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಸರಕಾರಕ್ಕೆ ಶಾಸಕರ ಕೊರತೆ ಇತ್ತು. ಆಗ ಕೆಲವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಆದರೆ ಈ ಸರಕಾರಕ್ಕೆ ಅಗತ್ಯ ಬೆಂಬಲವಿದ್ದರೂ, ಇತರ ಪಕ್ಷಗಳ ಶಾಸಕರನ್ನು ಅನಗತ್ಯವಾಗಿ ಸೆಳೆಯಲು ಮುಂದಾಗಿದೆ. ಲೋಕಸಭೆ ಚುನಾವಣೆ ಬಳಿಕ ಈ ಸರಕಾರ ಇರುವುದಿಲ್ಲ ಎಂಬುದು ಖಾತರಿ ಆಗಿರುವುದರಿಂದಲೇ ಆಪರೇಷನ್ ಹಸ್ತ ಮಾಡುತ್ತಿದ್ಧಾರೆ ಎಂದು ಟೀಕಿಸಿದರು. ಎಸ್.ಟಿ. ಸೋಮಶೇಖರ್ ಸೇರಿದಂತೆ ಪಕ್ಷ ತೊರೆಯುತ್ತಾರೆಂದು ಹೇಳಲಾಗುತ್ತಿರುವ ಕೆಲವು ಶಾಸಕರೊಂದಿಗೆ ತಾವು ಮಾತನಾಡಿದ್ದು ಯಾರೂ ನಮ್ಮ ಪಕ್ಷ ಬಿಡುವುದಿಲ್ಲ. ಎಲ್ಲರೂ ಪಕ್ಷದ ಹಂಗಿನಲ್ಲಿದ್ಧಾರೆ. ಪಕ್ಷದಲ್ಲಿ ಉಳಿಯಲು ಪಕ್ಷ ನಿಷ್ಠೆ ಇರಬೇಕಾಗುತ್ತದೆ. ಈಗ ಇರುವವರಿಗೆಲ್ಲ ಪಕ್ಷ ನಿಷ್ಠೆ ಇದೆ ಎಂದು ಭಾವಿಸಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ಸರಕಾರ ನೂರು ಕರಾಳ ದಿನಗಳನ್ನು ಪೂರೈಸಿದೆ. ಒಂದೇ ಒಂದು ಅಭಿವೃದ್ಧಿ ಕೆಲಸವೂ ಆಗಿಲ್ಲ. ರಸ್ತೆ ಅಭಿವೃದ್ಧಿ ಆಗಿಲ್ಲ. ಕಸ ವಿಲೇವಾರಿಯೂ ಆಗುತ್ತಿಲ್ಲ. ಕುಡಿಯುವ ನೀರಿನ ಯೋಜನೆಗಳು ಆಗುತ್ತಿಲ್ಲ. ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಸುತ್ತಿಲ್ಲ. ಕಳೆದ ನೂರು ದಿನ ಅಭಿವೃದ್ಧಿ ಶೂನ್ಯದಿನ. ಇದೇ ಹೊಸ ಸರಕಾರದ ಸಾಧನೆ ಎಂದು ಅಶೋಕ್ ಲೇವಡಿ ಮಾಡಿದರು.
ಲೋಡ್ ಶೆಡ್ಡಿಂಗ್
ಪ್ರತೀದಿನ ಉಚಿತ (ಗ್ಯಾರಂಟಿ)ಗಳ ಬಗ್ಗೆಯೇ ಮಾತನಾಡುತ್ತಿದ್ಧಾರೆ. ಎಲ್ಲ ಕಡೆ ಲೋಡ್ ಶೆಡ್ಡಿಂಗ್ ಆಗುತ್ತಿದೆ. ಬರಗಾಲದ ಹಿನ್ನೆಲೆಯಲ್ಲಿ ರೈತರ ನೀರಾವರಿ ಪಂಪ್ಸೆಟ್ಗಳಿಗೂ ವಿದ್ಯುತ್ ಪೂರೈಸಲು ಆಗುತ್ತಿಲ್ಲ. ಉಚಿತ ಕೊಡುವುದರಲ್ಲಿ ಕಡಿಮೆ ಮಾಡಬೇಕೆಂದು ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್