Theft: ಚಿನ್ನ ಕದ್ದ ಸಾಕ್ಷಿ ನಾಶಕ್ಕೆ ಕೆಮರಾವನ್ನೂ ಕದ್ದರು!
Team Udayavani, Feb 16, 2024, 12:26 AM IST
ಬೆಂಗಳೂರು: ಚಿನ್ನಾಭರಣ ಮಳಿಗೆ ಬಾಗಿಲನ್ನು ಕಬ್ಬಿಣದ ರಾಡ್ನಿಂದ ಮುರಿದು ಒಳ ನುಗ್ಗಿರುವ ಇಬ್ಬರು ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ, ಸಿಸಿ ಕೆಮರಾದ ಡಿವಿಆರ್ ಕದ್ದೊಯ್ದಿದ್ದಾರೆ.
ಬಸವನಗುಡಿ ನೆಟ್ಟಕಲ್ಲಪ್ಪ ವೃತ್ತದ ಬಳಿ ಇರುವ ಜ್ಯುವೆಲ್ಲರಿಯಲ್ಲಿ ಬುಧವಾರ ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಗುರುವಾರ ಬೆಳಗ್ಗೆ ಕೆಲಸಗಾರರು ಮಳಿಗೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ರಾತ್ರಿ ಕೆಲಸಗಾರರು ಮಳಿಗೆಯ ಬಾಗಿಲು ಬಂದ್ ಮಾಡಿ ಮನೆಗೆ ಹೋಗಿದ್ದರು. ತಡರಾತ್ರಿ ಮಳಿಗೆಯ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ್ದ ಕಳ್ಳರು, ಹಲವೆಡೆ ಹುಡುಕಾಡಿದ್ಧಾರೆ. 250 ಗ್ರಾಂ ಚಿನ್ನ ಹಾಗೂ 1.8 ಲಕ್ಷ ರೂ. ನಗದು ಕದ್ದಿದ್ದಾರೆ. ಬಳಿಕ ಸಾಕ್ಷ್ಯ ನಾಶ ಪಡಿಸುವ ಉದ್ದೇಶದಿಂದ ಮಳಿಗೆಯ ಒಳಗೆ ಹಾಗೂ ಹೊರಗೆ ಸಿಸಿ ಕೆಮರಾದಲ್ಲಿದ್ದ ಡಿವಿಆರ್ ಉಪಕರಣ ವನ್ನೂ ಬಿಚ್ಚಿಕೊಂಡು ಪರಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ