ವಾಡಿ: ಶಿವಲಿಂಗ ಕಿತ್ತು ನಿಧಿ ಶೋಧಿಸಿದ ಕಳ್ಳರು
Team Udayavani, Jun 4, 2023, 12:16 PM IST
ವಾಡಿ: ನಿಧಿ ಶೋಧನೆಗಾಗಿ ಕಳ್ಳರು ಪುರಾತನ ದೇವಾಲಯದ ಶಿವಲಿಂಗವನ್ನು ಕಿತ್ತು ಬೀಸಾಡಿದ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಹೋಬಳಿ ವಲಯದ ಸುಗೂರ (ಎನ್) ಗ್ರಾಮದಲ್ಲಿ ಜೂ.3ರ ಶನಿವಾರ ತಡರಾತ್ರಿ ನಡೆದಿದೆ.
ಗ್ರಾಮದ ಹೊರ ವಲಯದ ನಿರ್ಜನ ಪ್ರದೇಶದಲ್ಲಿರುವ ಸುಮಾರು 200 ವರ್ಷಗಳಷ್ಟು ಹಳೆಯದಾದ ಎನ್ನಲಾದ ಐತಿಹಾಸಿಕ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಕಳ್ಳರು ನಿಧಿಗಾಗಿ ಹುಡುಕಾಟ ನಡೆಸಿದ್ದಾರೆ.
ನಿಧಿಗಾಗಿ ಕಳ್ಳರು ಶಿವಲಿಂಗ ಕಿತ್ತು ಬೇರೆಡೆಗೆ ಇಡುವ ಮೂಲಕ ಗರ್ಭಗುಡಿಯ ನೆಲ ಅಗೆದಿದ್ದಾರೆ. ಇದಕ್ಕೂ ಮುಂಚೆ ನಿಧಿಗಳ್ಳರು ಸ್ಥಳದಲ್ಲಿ ಪೂಜೆ ಸಲ್ಲಿಸಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿ ಬಾಳೆಹಣ್ಣು, ನಿಂಬೆಹಣ್ಣು, ಕುಂಕುಮ, ಕರ್ಪೂರ, ಊದುಬತ್ತಿ, ದೀಪದ ಹಣತೆ ಪತ್ತೆಯಾಗಿವೆ.
ಸುಗೂರು (ಎನ್) ಗ್ರಾಮದ ಈ ಮಲ್ಲಿಕಾರ್ಜುನ ದೇವಸ್ಥಾನ ಪದೆ ಪದೇ ನಿಧಿಗಳ್ಳರ ದಾಳಿಗೆ ಒಳಗಾಗುತ್ತಿದ್ದು, ಈ ಮೊದಲು ಮೂರು ಸಲ ಇದೇ ದೇವಸ್ಥಾನದಲ್ಲಿ ನಿಧಿ ಶೋಧ ನಡೆಸಿದ ಘಟನೆಗಳು ನಡೆದಿವೆ. ಆದರೆ ಪ್ರಕರಣ ಮಾತ್ರ ದಾಖಲಿಸಿರಲಿಲ್ಲ.
ಈ ಪರಿಣಾಮ ಕಳ್ಳರು ಪತ್ತೆಯಾಗಲಿಲ್ಲ. ಈ ಬಾರಿ ಪೊಲೀಸರಿಗೆ ದೂರು ನೀಡಿ ಪ್ರಕರಣ ದಾಖಲಿಸಲು ಮುಂದಾಗಿದ್ದೇವೆ ಎಂದು ಗ್ರಾಮದ ಮುಖಂಡರೊಬ್ಬರು ತಿಳಿಸಿದ್ದಾರೆ.
ಮುಂದುವರೆದು ಮಾತನಾಡಿ, ಗ್ರಾಮದಲ್ಲಿ ಒಟ್ಟು ನಾಲ್ಕು ಐತಿಹಾಸಿಕ ಶಿವಲಿಂಗಗಳಿವೆ. ಮೂರು ದೇಗುಲ ಸುರಕ್ಷಿತವಾಗಿವೆ. ಆದರೆ ಊರ ಹೊರಗಿನ ದೇವಸ್ಥಾನಕ್ಕೆ ಪ್ರತಿಸಲವೂ ಕಳ್ಳರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಗ್ರಾಮಸ್ಥರೇ ಯಾರಾದರೂ ಈ ಕೃತ್ಯ ಎಸಗುತ್ತಿರಬಹುದಾ ಎಂಬ ಅನುಮಾನ ಕಾಡುತ್ತಿದೆ. ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡರಾದ ಭೀಮರೆಡ್ಡಿಗೌಡ ಕುರಾಳ, ಸಿದ್ದುಗೌಡ ಕುರಾಳ ಆಗ್ರಹಿಸಿದ್ದಾರೆ.
ವಾಡಿ ಠಾಣೆಯ ಪಿಎಸ್ ಐ ಸುದರ್ಶನ ರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್