Thirthahalli:ಜಮೀನಿನ ವಿಚಾರದಲ್ಲಿ ಗಲಾಟೆ; ವ್ಯಕ್ತಿ ಮೇಲೆ ಕತ್ತಿಯಿಂದ ಹಲ್ಲೆ
Team Udayavani, Aug 17, 2023, 7:25 PM IST
ತೀರ್ಥಹಳ್ಳಿ : ಜಮೀನಿನ ವಿಚಾರದಲ್ಲಿ ಗಲಾಟೆಯಾಗಿದ್ದು, ವ್ಯಕ್ತಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಹೊನ್ನೇತಾಳು ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸಕೊಪ್ಪ ಗ್ರಾಮದಲ್ಲಿ ನಡೆದಿದೆ.
ಅರುಣ್ (37) ಹಲ್ಲೆಗೊಳಗಾಗಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಶ್ರೀಕಂಠ ( 55 ) ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಗಾಯಾಳು ಅರುಣ್ ತೀರ್ಥಹಳ್ಳಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಘಟನೆ ಕುರಿತು ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.