ಮಾತೇ ಇಲ್ಲದ ಹೀಗೊಂದು ಮನಕಲಕುವ ಕಿರುಚಿತ್ರ


Team Udayavani, May 29, 2020, 4:18 AM IST

hindina sou

ಕಿತ್ತೋದ ಚಪ್ಪಲಿಗಿರೋ ಬೆಲೆ, ನೀ ಹೆಣವಾದ ಮರು ಘಳಿಗೆ ಇರದು…’  -ಈ ಮಾತು ಅಕ್ಷರಶಃ ನಿಜ. ಯಾಕೆಂದರೆ, ಮನುಷ್ಯ ಇರೋವರೆಗಷ್ಟೇ ಬೆಲೆ. ಅವನು ಮಣ್ಣು ಸೇರಿದ ಮೇಲೆ ಎಲ್ಲವೂ ಗೌಣ. ಈಗ ಈ ವಿಷಯ ಹೇಳ್ಳೋಕೆ ಕಾರಣ,  ಒಂದು ಕಿರುಚಿತ್ರ. ಅದರ ಹೆಸರು “ದುರ್ವಿಧಿ’ ಕಿರುಚಿತ್ರದ ಹೆಸರು ಕೇಳಿದ ಮೇಲೆ, ಇದೊಂದು ಮಾನವೀಯ ಮೌಲ್ಯ ಕುರಿತ ಕಥಾಹಂದರ ಹೊಂದಿರುವ ಕಥೆ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ ಬಿಡಿ. ಹೌದು, ಅಪ್ಪುವರ್ಧನ್‌  ಎಂಬ ಹೊಸ ಪ್ರತಿಭೆ ಕಥೆ, ಚಿತ್ರಕಥೆ ಬರೆದು “ದುರ್ವಿಧಿ ‘ ಕಿರುಚಿತ್ರ ನಿರ್ದೇಶಿಸಿ ದ್ದಾರೆ.

ಈ ಕಿರುಚಿತ್ರಕ್ಕೆ ಮಹೇಶ್‌ ರುದ್ರಪ್ಪ ನಿರ್ಮಾ ಪಕರು. ಈಗಾಗಲೇ ಚಿತ್ರೀ ಕರಣ ಮುಗಿಸಿರುವ ಈ ಕಿರುಚಿತ್ರ ಅಂತಾ ರಾಷ್ಟ್ರೀಯ ಕಿರುಚಿತ್ರೋತ್ಸವಕ್ಕೆ  ಹೋಗಲು ತಯಾರಾಗುತ್ತಿದೆ. ಸದ್ಯಕ್ಕೆ ಸಂಕಲನ ಕೆಲಸ ಮುಗಿಸಿರುವ ಈ ಚಿತ್ರದ ವಿಶೇಷತೆ ಅಂದರೆ, ಇಲ್ಲಿ ಯಾವುದೇ ಡೈಲಾಗ್‌ ಗಳಿಲ್ಲ. ಇಡೀ ಸಿನಿಮಾ ಕೇವಲ ನಟನೆ ಹಾಗು ಹಿನ್ನೆಲೆ ಸಂಗೀತದಲ್ಲೇ ಸಾಗಲಿದೆ. ಈಗಾಗಲೇ ಯಾವುದೇ  ಸಂಭಾಷಣೆಗಳಿಲ್ಲದೆ ಸಿನಿಮಾಗಳು, ಕಿರುಚಿತ್ರಗಳು ಬಂದಿವೆಯಾ ದರೂ, ಒಂದು ಮೌಲ್ಯಾಧಾರಿತ ವಿಷಯ ಇಟ್ಟುಕೊಂಡು ಕೇವಲ ಭಾವನೆಗಳಲ್ಲೇ ಕಟ್ಟಿಕೊಡುವ ಪ್ರಯತ್ನವನ್ನು “ದುರ್ವಿಧಿ ‘ ಮೂಲಕ ಮಾಡಲು ಹೊರಟಿದ್ದಾರೆ ಅಪ್ಪು ವರ್ಧನ್‌.

ಕಿರುಚಿತ್ರದ ಕಥೆ ಬಗ್ಗೆ ಹೇಳುವುದಾದರೆ, ಚಪ್ಪಲಿ ಹೊಲೆದು ಬದುಕು ಸಾಗಿಸುವ ಕುಟುಂಬದ ಸುತ್ತ ಸಾಗುವ ಕಥೆ ಇಲ್ಲಿದೆ. ಇಂದು ಅಂತಹವರ ಬದುಕು ಸಂಕಷ್ಟದಲ್ಲಿದೆ. ಒಂದೊತ್ತಿನ ಊಟಕ್ಕೂ ಪರದಾಡು ವಂತಹ ಪರಿಸ್ಥಿತಿ  ನಿರ್ಮಾಣವಾಗಿದೆ. ಹಿಂದೆ ಇದ್ದಂತಹ ದುಡಿಮೆ ಈಗಿಲ್ಲ. ಅಂತಹ ಕುಟುಂಬದ ಯಜಮಾನ ಅಂಗವೈಕಲ್ಯ ಹೊಂದಿದ್ದರೂ, ಬದುಕಿನ ಬಂಡಿ ಸಾಗಿಸಲು ಹರಸಾಹಸ ಪಡುತ್ತಾನೆ. ಕೊನೆಗೆ ತನ್ನ ಕುಟುಂಬ ಸಾಕಲು ಆಗದಂತಹ ಸ್ಥಿತಿ ತಲುಪಿ  ಆತ್ಮಹತ್ಯೆಗೆ ಶರಣಾಗುತ್ತಾನೆ. ಅತ್ತ, ಹೆಂಡತಿ, ಸಣ್ಣ ಮಗು ತುತ್ತು ಅನ್ನಕ್ಕಾಗಿ ಪರದಾಡುವ ಸ್ಥಿತಿ ಹೇಗಿರುತ್ತೆ.

ಕೊನೆಗೆ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಾರೋ, ಇಲ್ಲವೋ ಅನ್ನೋದೇ ಈ ಕಿರುಚಿತ್ರದ ಕಥೆ. ಇಲ್ಲಿ ಎಮೋಷನ್ಸ್‌, ತಾಯಿ,  ಮಗುವಿನ ಬಾಂಧವ್ಯ, ಉಳ್ಳವರ ಕ್ರೌರ್ಯ ಇತ್ಯಾದಿ ಕಥೆಯಲ್ಲಿದೆ. ಚಿತ್ರಕ್ಕೆ ವಾಸುಕಿ ವೈಭವ್‌ ಹಿನ್ನೆಲೆ ಸಂಗೀತ ನೀಡಲಿದ್ದಾರೆ. ರಮೇಶ್‌ ಕೊಯಿರ ಛಾಯಾಗ್ರಹಣವಿದೆ. ಲಾಕ್‌ಡೌನ್‌ ಸಂಪೂರ್ಣ ನಿಂತ ಬಳಿಕ ಚಿತ್ರದ ಇತರೆ ಕೆಲಸಗಳು  ನಡೆದು, ಆ ನಂತರ ಅವಾರ್ಡ್‌ಗೆ ಕಳುಹಿಸುವ ಯೋಚನೆ ನಿರ್ದೇಶಕರಿಗಿದೆ. ಕಿರುಚಿತ್ರದಲ್ಲಿ ಬಹುತೇಕ ಹೊಸ ಕಲಾವಿದರಿದ್ದಾರೆ. ಆರು ಪಾತ್ರಗಳು ಇಲ್ಲಿ ಹೈಲೈಟ್‌. ಕರಿಯ ನಾಣಿ, ಪವಿತ್ರಾ, ರೆಡ್ಡಿ, ಸೌಭಾಗ್ಯ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.