SSLC ಪರೀಕ್ಷೆಗೆ ಈ ಬಾರಿಯೂ 50:30:20 ಸೂತ್ರ

ಈ ಬಾರಿ ಪರೀಕ್ಷೆ ತುಸು ಕಠಿನ ಮತ್ತೆ ಕೊರೊನಾಪೂರ್ವದ ಹಳೆಯ ಮಾದರಿ ಪಾಲನೆಗೆ ಸಿದ್ಧತೆ

Team Udayavani, Feb 5, 2024, 12:39 AM IST

exam

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಕಾಠಿನ್ಯ ಮಟ್ಟವನ್ನು 50:30:20 ಮಾದರಿಯಲ್ಲಿ ಮುಂದುವರಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ತೀರ್ಮಾನಿಸಿದೆ. ಈ ವರ್ಷ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳ ಅವಕಾಶವಿದ್ದು, ಈ ಮೂರು ಪರೀಕ್ಷೆಗಳಲ್ಲಿಯೂ ಇದೇ ಮಾದರಿ ಅನುಸರಣೆಯಾಗಲಿದೆ.
ಶೇ. 50ರಷ್ಟು ಸುಲಭ, ಶೇ. 30ರಷ್ಟು ಸಾಧಾರಣ ಮತ್ತು ಶೇ. 20ರಷ್ಟು ಕಠಿನ ಅಥವಾ ಅನ್ವಯಿಕ ಪ್ರಶ್ನೆಗಳು 2023-24ರ ಸಾಲಿನ ಎಸೆಸೆಲ್ಸಿ ಪ್ರಶ್ನೆಪತ್ರಿಕೆಗಳಲ್ಲಿ ಇರಲಿವೆ.

ಈ ಪೈಕಿ ಶೇ. 30 ಅಂಕಗಳು ಸಾಧಾರಣ ಕಠಿನ ಮತ್ತು ಸಾಧಾರಣ ಸುಲಭ ಎಂದು ಮತ್ತೆ ವಿಭಜನೆಗೊಳ್ಳುವುದರಿಂದ ಪರೀಕ್ಷೆಯ ಕಾಠಿನ್ಯ ವ್ಯತ್ಯಾಸಗೊಳ್ಳುತ್ತದೆ ಎಂದು ಮಂಡಳಿಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಾರೆ ಕೋವಿಡ್‌ ಅವಧಿಯಲ್ಲಿ ಇದ್ದಷ್ಟು ಸುಲಭವಾಗಿ ಈ ಬಾರಿ ಪರೀಕ್ಷೆ ಇರಲಾರದು.

ಕೋವಿಡ್‌ ಅವಧಿಯಲ್ಲಿ ಹೇಗಿತ್ತು?
ಕೋವಿಡ್‌ ಅವಧಿಯ 2020-21 ಮತ್ತು 2021-22ರ ಸಾಲಿನಲ್ಲಿ ಕಠಿನ ಪ್ರಶ್ನೆ ಅಥವಾ ಅನ್ವಯಿಕ ಉತ್ತರ ಬಯಸುವ ಪ್ರಶ್ನೆಗಳನ್ನು ಕಡಿಮೆಗೊಳಿಸಿ 60:30:10 ಕಾಠಿನ್ಯದ ಮಾದರಿ ಅನುಸರಿಸಲಾಗಿತ್ತು. 2022-23ರ ಸಾಲಿನಲ್ಲಿ 50:30:20ರ ಮಾದರಿಯನ್ನು ಪ್ರಸ್ತಾವಿಸಿದ್ದರೂ ಪೂರ್ಣ ರೂಪದಲ್ಲಿ ಜಾರಿಗೆ ಬಂದಿರಲಿಲ್ಲ.

ಭಾಷೆಗಳು, ಮುಖ್ಯ ವಿಷಯ ಪರೀಕ್ಷೆಗಳಲ್ಲಿ ಇದೇ ಮಾದರಿಯನ್ನು ಅನುಸರಿಸಲು ಮಂಡಳಿ ತೀರ್ಮಾನಿಸಿದೆ.

ಸಾಧಕಗಳೇನು?
- ಈ ವರ್ಷ 3 ಪರೀಕ್ಷೆಗೆ ಅವಕಾಶ ಇರುವುದ ರಿಂದ ವಿದ್ಯಾರ್ಥಿಗಳು ಪರೀಕ್ಷೆಯನ್ನು ನಿರ್ಲಕ್ಷಿಸುವ ಸಾಧ್ಯತೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯ ಕಾಠಿನ್ಯ ಹೆಚ್ಚಿಸುವುದರಿಂದ ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನ ಶೀಲರಾಗಬಹುದು.
- ಉನ್ನತ ಶಿಕ್ಷಣದಲ್ಲಿ ಅನ್ವಯಕ್ಕೆ ಹೆಚ್ಚು ಮನ್ನಣೆ ಸಿಗುವುದರಿಂದ ಅನ್ವಯ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಅನ್ವಯಿಕ ಮನೋಭಾವಕ್ಕೆ ಕಾರಣವಾಗಬಲ್ಲವು.
- ಮೂರು ಪರೀಕ್ಷೆಗಳಲ್ಲಿಯೂ ಏಕರೂಪದ ಮಾದರಿ ಅನುಸರಿಸುವುದರಿಂದ ವಿದ್ಯಾರ್ಥಿಗಳು ಪ್ರತಿ ಪರೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಅನಿವಾರ್ಯ.

ಬಾಧಕ?
– ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ಬರೆಯುವ ಅವಕಾಶ ಇರುವುದರಿಂದ ಮೊದಲ ಪರೀಕ್ಷೆಯತ್ತ ನಿರ್ಲಕ್ಷ್ಯ
– ಮೊದಲ ಪರೀಕ್ಷೆಯಲ್ಲಿ ಚೆನ್ನಾಗಿ ಬರೆಯದ ವಿದ್ಯಾರ್ಥಿಗೆ ಹೆಚ್ಚುವ ಒತ್ತಡ
– 50:30:20 ಮಾದರಿ ಅನುಸರಿಸಿದಾಗ ಕಡಿಮೆಯಾಗುವ ಒಟ್ಟು ಫ‌ಲಿತಾಂಶ

ಮಂಡಳಿ ಬಿಡುಗಡೆ ಮಾಡಿರುವ ಮಾದರಿ ಪ್ರಶ್ನೆ ಪತ್ರಿಕೆಯಲ್ಲಿಯೂ ಇದೇ ಮಾದರಿಯನ್ನು ಪಾಲಿಸಲಾಗಿದೆ.

ರಾಜ್ಯದಲ್ಲಿ ಸಾಮಾನ್ಯವಾಗಿ ಎಸೆಸೆಲ್ಸಿ ಪರೀಕ್ಷೆಯನ್ನು 50:30:20ರ ಮಾದರಿಯಲ್ಲಿಯೇ ನಡೆಸಲಾಗುತ್ತಿತ್ತು. ಹಿಂದಿನ ವರ್ಷ ಇದೇ ಮಾದರಿ ಅನುಸರಿಸಿದಾಗ ಕೋವಿಡ್‌ ಅವಧಿಗಿಂತ ಕಡಿಮೆ ಫ‌ಲಿತಾಂಶ ದಾಖಲಾಗಿತ್ತು.

ಆದರೆ ಈ ಸಲ ಮೊದಲ ಬಾರಿಗೆ ಎಸೆಸೆಲ್ಸಿಯಲ್ಲಿ ಮೂರು ವಾರ್ಷಿಕ ಪರೀಕ್ಷೆಗಳು ನಡೆಯಲಿವೆ ಮತ್ತು ಮೊದಲ ಬಾರಿಗೆ 80 ಅಂಕಗಳಿಗೆ ಪರೀಕ್ಷೆ ನಡೆಯುತ್ತಿದೆ. ಈ ಬದಲಾವಣೆಗಳಿದ್ದರೂ ಮಂಡಳಿ ಕಳೆದ ವರ್ಷದ ತನ್ನ ಮಾದರಿಯಲ್ಲಿ ಬದಲಾವಣೆ ಮಾಡಿಲ್ಲ.

ನಾವು ಪ್ರಶ್ನೆಪತ್ರಿಕೆಯನ್ನು ತಯಾರಿಸುವಾಗ ಎಲ್ಲ ವಿದ್ಯಾರ್ಥಿಗಳನ್ನು ಗಮನಿಸಿಯೇ ತಯಾರಿಸುತ್ತೇವೆ. ಒಬ್ಬ ಸಾಧಾರಣ ವಿದ್ಯಾರ್ಥಿಯೂ ಉತ್ತೀರ್ಣಗೊಳ್ಳಲು ಸಾಧ್ಯವಾಗಬೇಕು ಎಂಬುದು ನಮ್ಮ ಆಶಯ. ಈ ಅಂಶ ಗಮನಿಸಿಕೊಂಡು ಪ್ರಶ್ನೆಪತ್ರಿಕೆಯ ಮಾದರಿ ಸಿದ್ಧಪಡಿಸಲಾಗುತ್ತದೆ.
– ಎಚ್‌. ಎನ್‌. ಗೋಪಾಲಕೃಷ್ಣ, ನಿರ್ದೇಶಕರು, ಕೆಎಸ್‌ಇಎಬಿ

 ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.