ಈ ಬಾರಿಯೂ ಸರಳವಾಗಿ ದಸರಾ ಆಚರಣೆ: ಎಸ್ಟಿಎಸ್
Team Udayavani, Aug 7, 2021, 9:07 PM IST
ಸಾಂದರ್ಭಿಕ ಚಿತ್ರ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯೂ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಎಚ್.ಡಿ.ಕೋಟೆ ತಾಲೂಕಿನ ಬಾವಲಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯಂತೆಯೇ ಈ ಸಲವೂ ಸರಳ ದಸರಾ ಆಚರಿಸಲಾಗುವುದು. ಈ ಸಂಬಂಧ ಮೈಸೂರು ಜಿಲ್ಲಾಡಳಿತ ಸಿದ್ಧಪಡಿಸುವ ರೂಪುರೇಷೆಗಳನ್ನು ಮುಖ್ಯಮಂತ್ರಿಗಳ ಅವಗಾಹನೆಗೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ನೀರಜ್ ಚೋಪ್ರಾ ‘ಚಿನ್ನ’ದ ಸಾಧನೆಗೆ ಅಪ್ಪಟ ಕನ್ನಡಿಗನ ಕೊಡುಗೆ ಕೂಡ ಇದೆ
ಕಳೆದ ಬಾರಿ ದಸರಾ ಉತ್ಸವಕ್ಕೆ ಸರ್ಕಾರ ನೀಡಿದ್ದ 10 ಕೋಟಿ ರೂ. ಪೈಕಿ 7 ಕೋಟಿ ರೂ. ಉಳಿತಾಯ ಮಾಡಲಾಗಿತ್ತು. ಈ ಬಾರಿ ಆ ಹಣವನ್ನೇ ಬಳಸಿಕೊಂಡು ದಸರಾ ಮಹೋತ್ಸವವನ್ನು ಹೇಗೆ ಆಚರಣೆ ಮಾಡಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದರು.
ಮುನಿರತ್ನ ಜತೆಗಿನ ಮುನಿಸು ಒಪ್ಪಿಕೊಂಡ ಸಚಿವ
ಕಾಂಗ್ರೆಸ್ನಲ್ಲಿದ್ದಾಗ ಎಸ್ಬಿಎಂ (ಎಸ್.ಟಿ ಸೋಮಶೇಖರ್, ಭೈರತಿ ಬಸವರಾಜು ಮತ್ತು ಮುನಿರತ್ನ) ಟೀಂ ಇತ್ತು. ಈಗ ಆ ಟೀಂ ಬಿಜೆಪಿಯಲ್ಲಿಲ್ಲ ಎಂದು ಹೇಳುವ ಮೂಲಕ ಸಚಿವ ಮುನಿರತ್ನ ಜತೆಗಿನ ಸ್ನೇಹ ಮುರಿದಿರುವ ಬಗ್ಗೆ ಬಹಿರಂಗ ಹೇಳಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?