ಯಶಸ್ವಿ ಪ್ರದರ್ಶನ ಕಂಡ “ಸಸ್ಪೆನ್ಸ್ ಥ್ರಿಲ್ಲರ್ ಆ 90 ದಿನಗಳು”; ಚಿತ್ರತಂಡ ಸಂತಸ

ತಾಯಿಯ ಪಾತ್ರದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಭವ್ಯಾ ಅವರು ನಟಿಸಿದ್ದಾರೆ.

Team Udayavani, Mar 26, 2022, 4:35 PM IST

ಯಶಸ್ವಿ ಪ್ರದರ್ಶನ ಕಂಡ “ಸಸ್ಪೆನ್ಸ್ ಥ್ರಿಲ್ಲರ್ ಆ 90 ದಿನಗಳು”; ಚಿತ್ರತಂಡ ಸಂತಸ

ಕುಂದಾಪುರ: ಪ್ರತಿಭಾವಂತ ನಟ ಯಾಕೂಬ್ ಖಾದರ್ ಗುಲ್ವಾಡಿ ಹಾಗೂ ರೋನಾಲ್ಡ್ ಲೋಬೋ ಜತೆಯಾಗಿ ನಿರ್ದೇಶಿಸಿದ್ದ “ ಆ 90 ದಿನಗಳು” ಎಂಬ ವಿಭಿನ್ನ ಶೈಲಿಯ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡಿರುವುದಕ್ಕೆ ಚಿತ್ರತಂಡ ಸಂತಸ ವ್ಯಕ್ತಪಡಿಸಿದೆ.

ಕೆಲವು ಚಿತ್ರಗಳಲ್ಲಿ ನಟಿಸಿ ತಮ್ಮ ಪ್ರತಿಭೆಯನ್ನು ಸಾಬೀತುಗೊಳಿಸಿದ್ದ ರತೀಕ್ ಮುರ್ಡೇಶ್ವರ್ ಆ 90 ದಿನಗಳು ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುವ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಚಿತ್ರದಲ್ಲಿ ರಾಧಾ ಭಗವತಿ ನಾಯಕಿಯಾಗಿದ್ದು, ತಾಯಿಯ ಪಾತ್ರದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಭವ್ಯಾ ಅವರು ನಟಿಸಿದ್ದಾರೆ. ನಟಿ ಕೃತಿಕಾ ಕೂಡಾ ತಾರಾಬಳಗದಲ್ಲಿದ್ದಾರೆ.

ಯಶಸ್ವಿ ಪ್ರದರ್ಶನ ಕಂಡಿದೆ:

ಚಿತ್ರದ ನಿರ್ದೇಶಕರಾದ ಯಾಕೂಬ್ ಖಾದರ್ ಗುಲ್ವಾಡಿ ಅವರು ಉದಯವಾಣಿ ಡಾಟ್ ಕಾಮ್ ಜೊತೆ ಮಾತನಾಡಿ, ಸಿನಿಮಾದ ಯಶಸ್ಸಿನ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಆರಂಭದಲ್ಲಿ ನಾವು ಆ 90 ದಿನಗಳು ಸಿನಿಮಾವನ್ನು ಕುಂದಾಪುರದಲ್ಲಿಯೇ ಬಿಡುಗಡೆ ಮಾಡಬೇಕೆಂದು ಆಲೋಚಿಸಿದ್ದೇವು. ನಂತರ ರಾಜ್ಯಾದ್ಯಂತ ಬಿಡುಗಡೆ ಮಾಡಿದೆವು. ನಾವು ಈ ಸಿನಿಮಾವನ್ನು ಹಣ ಗಳಿಸಲು ನಿರ್ಮಿಸಿದ್ದಲ್ಲ. ಒಟ್ಟಾರೆಯಾಗಿ ನಮಗೆ ಪ್ರೇಕ್ಷಕರ ಬೆಂಬಲ ತುಂಬಾ ಖುಷಿಕೊಟ್ಟಿದೆ. ಕುಂದಾಪುರ, ಬಾಗಲಕೋಟೆಯಲ್ಲಿ ಯಶಸ್ವಿ ಪ್ರದರ್ಶನ ಕಂಡಿದೆ ಎಂಬುದು ನಮಗೆ ಹೆಮ್ಮೆಯ ವಿಚಾರವಾಗಿದೆ. ಯಾಕೆಂದರೆ ಸ್ಟಾರ್ ನಟರಿಲ್ಲದೇ ಈಗ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುವುದಿಲ್ಲ. ಹೀಗಾಗಿ ನಮಗೆ ನಮ್ಮ ಶ್ರಮಕ್ಕೆ ಬೆಲೆ ಸಿಕ್ಕಂತಾಗಿದೆ. ಅಷ್ಟೇ ಅಲ್ಲ ಹಿರಿಯ ವಕೀಲರಾದ ರವಿಕಿರಣ್ ಮುರ್ಡೇಶ್ವರ್ ಅವರ ಬೆಂಬಲ, ಪ್ರೋತ್ಸಾಹ ನಾವು ನೆನಪಿಸಿಕೊಳ್ಳಬೇಕಾಗಿದೆ ಎಂದು ಯಾಕೂಬ್ ಈ ಸಂದರ್ಭದಲ್ಲಿ ಹೇಳಿದರು.

ಆ 90 ದಿನಗಳ ಚಿತ್ರದ ನಾಯಕ ನಟ ರತಿಕ್ ಮುರ್ಡೇಶ್ವರ್ ಕೂಡಾ ಚಿತ್ರದ ಗೆಲುವಿನ ಬಗ್ಗೆ ಖುಷಿಯನ್ನು ಹಂಚಿಕೊಂಡಿದ್ದು, ಸಿನಿಮಾ ಕುಂದಾಪುರ ಹಾಗೂ ಹಲವೆಡೆ ಉತ್ತಮ ಪ್ರದರ್ಶನ ಕಂಡಿರುವುದು ಸಂತಸವಾಗಿದೆ. ನಾಯಕನಾಗಿ ಈ ಚಿತ್ರದಲ್ಲಿ ಅಭಿನಯಿಸಿರುವುದು, ಹಿರಿಯ ನಟಿ ಭವ್ಯಾ ಅವರೊಂದಿಗೆ ನಟಿಸಿರುವುದು ಒಳ್ಳೆಯ ಅನುಭವ ನೀಡಿದೆ. ಮುಂಬರುವ ದಿನಗಳಲ್ಲಿ ಇನ್ನೂ ಉತ್ತಮ ಚಿತ್ರಕಥೆಯಲ್ಲಿ ಅಭಿನಯಿಸುವ ಅಭಿಲಾಷೆ ರತಿಕ್ ಮುರ್ಡೇಶ್ವರದ್ದಾಗಿದೆ.

ಆ 90 ದಿನಗಳು ಸಿನಿಮಾಕ್ಕೆ ಪ್ರಮೋದ್ ಮರವಂತೆ ಸಾಹಿತ್ಯ, ರಾಧಾಕೃಷ್ಣ ಬಸ್ರೂರ್ ಸಂಗೀತ ಸಂಯೋಜಿಸಿದ್ದರು. ಗಾಯಕ ಅರ್ಫಾಜ್ ಉಳ್ಳಾಲ್ ಹಾಗೂ ಶಶಿಕಲ ಸುನೀಲ್ ಚಿತ್ರದ ಹಾಡುಗಳನ್ನು ಹಾಡಿದ್ದು, ಕಥೆ-ಚಿತ್ರಕಥೆ, ನಿರ್ಮಾಣ ರೋನಾಲ್ಡ್ ಲೋಬೋ.

ಕುಂದಾಪುರದ ಹಿರಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ್ ಅವರ ಪುತ್ರ ರತಿಕ್ ಮುರ್ಡೇಶ್ವರ್ ನಾಯಕ ನಟರಾಗಿ ನಟಿಸಿದ್ದ ಆ 90 ದಿನಗಳು ಸಿನಿಮಾ 13ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2021ರ ಟಾಪ್ 12 ರಲ್ಲಿ ಆಯ್ಕೆಯಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.