ನೀಟ್‌, ಸಿಇಟಿ ನಂತರ ಪಿಯು ಪರೀಕ್ಷೆ ಫ‌ಲಿತಾಂಶಕ್ಕೆ ಚಿಂತನೆ


Team Udayavani, Nov 3, 2019, 3:07 AM IST

Suresh-Kumar

ಬೆಂಗಳೂರು: ಪಿಯು ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳಿಗೆ ದಾಖಲಾಗಲು ಪೂರಕವಾಗುವಂತೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬಳಿಕವೇ ದ್ವಿತೀಯ ಪಿಯು ಪರೀಕ್ಷೆ ಫ‌ಲಿತಾಂಶ ಪ್ರಕಟಿಸುವ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಭರವಸೆ ನೀಡಿದರು.

ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇಲಾಖೆಯಲ್ಲಿನ ಸಮಸ್ಯೆಗಳನ್ನು ಆಲಿಸುವುದಕ್ಕಾಗಿ ನಗರದ ಡಿಎಸ್‌ಇಆರ್‌ಟಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ “ಸಂವೇದನಾ’ ಎಂಬ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದ ವಿವಿಧ ಜಿಲ್ಲೆಗಳ 38 ಮಂದಿ ಸಚಿವರಿಗೆ ಫೋನ್‌ ಕರೆ ಮಾಡಿ, 44 ಪ್ರಶ್ನೆಗಳನ್ನು ಕೇಳಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರ.ಕಾರ್ಯದರ್ಶಿ ಎಸ್‌.ಆರ್‌.ಉಮಾಶಂಕರ್‌, ಆಯುಕ್ತ ಡಾ. ಕೆ.ಜಿ. ಜಗದೀಶ್‌, ನಿರ್ದೇಶಕರಾದ ಕೆ.ಎಸ್‌.ಮಣಿ, ಎಂ.ಪಿ. ಮಾದೇಗೌಡ, ಡಿಎಸ್‌ಇಆರ್‌ಟಿ ನಿರ್ದೇಶಕ ಗೋಪಾಲಕೃಷ್ಣ ಇದ್ದರು.

“ಸಂವೇದನಾ’ದಲ್ಲಿ ಕೇಳಿದ ಪ್ರಶ್ನೆಗಳು: ನೀಟ್‌ ಪರೀಕ್ಷೆಗೆ ವಿದ್ಯಾರ್ಥಿಗಳು ಸಿದ್ಧತೆ ನಡೆಸುತ್ತಿರುವಾಗಲೇ ಪಿಯು ಫ‌ಲಿತಾಂಶ ಪ್ರಕಟಿಸುವುದರಿಂದ ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ಪರಿಣಾಮ ಬೀರಲಿದೆ. ನೀಟ್‌ ಪರೀಕ್ಷೆ ಮುಗಿದ ಬಳಿಕ ಪಿಯು ಫ‌ಲಿತಾಂಶ ಪ್ರಕಟಿಸಿದರೆ, ವಿದ್ಯಾರ್ಥಿಗಳ ದೃಷ್ಟಿಯಿಂದ ಉತ್ತಮ ಎಂದು ಮಧುಗಿರಿಯ ನಾಗರಾಜ್‌ ಕರೆ ಮಾಡಿ ಮನವಿ ಸಲ್ಲಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಫ‌ಲಿತಾಂಶ, ನೀಟ್‌ ಹಾಗೂ ಸಿಇಟಿ ಫ‌ಲಿತಾಂಶಕ್ಕೂ ಮೊದಲೇ ಪ್ರಕಟವಾಗುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಗಿದ ಬಳಿಕ ಫ‌ಲಿತಾಂಶ ಪ್ರಕಟಿಸಲು ಪಿಯು ಇಲಾಖೆಯ ಅಧಿಕಾರಿಗಳ ಜತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಶಾಲೆ ಸ್ಥಳಾಂತರಿಸಿ: ಹತ್ತಕ್ಕಿಂತ ಕಡಿಮೆ ಮಕ್ಕಳು ಇರುವ ಶಾಲೆಗಳನ್ನು ಸಮೀಪದ ಶಾಲೆಗೆ ಸ್ಥಳಾಂತರಿಸಿ, ಆ ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಉತ್ತರ ಕನ್ನಡದ ವೆಂಕಟೇಶ್‌ ಎಂಬುವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಒಂದೇ ಮಗು ಶಾಲೆಯಲ್ಲಿದ್ದರೆ ಆಟ, ಪಾಠ ಎಲ್ಲದಕ್ಕೂ ಸಮಸ್ಯೆಯಾಗುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲೂ ಈ ಬಗ್ಗೆ ಚರ್ಚೆಯಾಗಿದೆ ಎಂದರು.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಮಾತನಾಡಿ, ಹತ್ತು ಅಥವಾ ಅದಕ್ಕಿಂತ ಕಡಿಮೆ ಮಕ್ಕಳು ಇರುವ ಶಾಲೆಗಳನ್ನು ಸಮೀಪದ ಕರ್ನಾಟಕ ಪಬ್ಲಿಕ್‌ ಶಾಲೆಗೆ ಸ್ಥಳಾಂತರಿಸಿ, ಅವರಿಗೆ ನಿತ್ಯ ಶಾಲೆಗೆ ಹೋಗಿ ಬರಲು ಸರ್ಕಾರದಿಂದ ಸಾರಿಗೆ ವ್ಯವಸ್ಥೆ ಮಾಡಲು ಬೇಕಾದ ಪ್ರಸ್ತಾವನೆ ಸರ್ಕಾರದ ಮುಂದಿದೆ. ನೀತಿ ಕೂಡ ಸಿದ್ಧಪಡಿಸಿದ್ದೇವೆ. ಸಚಿವ ಸಂಪುಟದಲ್ಲಿ ತೀರ್ಮಾನ ಆಗಬೇಕಿದೆ. ಗುಣಮಟ್ಟದ ಕಲಿಕೆಗೆ ಇದು ಪೂರಕವಾಗಲಿದೆ ಎಂದರು.

ವಿದ್ಯಾರ್ಥಿ-ಶಿಕ್ಷಕರ ಅನುಪಾತ ಇಳಿಸಿ: ಸರ್ಕಾರಿ ಶಾಲೆಗಳಲ್ಲಿ ಸದ್ಯ ವಿದ್ಯಾರ್ಥಿ ಹಾಗೂ ಶಿಕ್ಷಕರ ಅನುಪಾತ 70:1 ಇದೆ. ಗುಣಮಟ್ಟದ ಶಿಕ್ಷಣ ನೀಡಲು ಇದನ್ನು 50:1ಕ್ಕೆ ಇಳಿಸಬೇಕು ಎಂದು ಉಡುಪಿ ಜಿಲ್ಲೆ ಬೈಂದೂರಿನ ನಾಗರಾಜ್‌ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅನುಪಾತ ಕಡಿಮೆ ಮಾಡುವುದರಿಂದ ಹೆಚ್ಚಳವಾಗುವ ಶಿಕ್ಷಕರ ಸಂಖ್ಯೆ, ಕೊಠಡಿ ಮತ್ತು ಕಟ್ಟಡಗಳ ಪ್ರಮಾಣ ಹಾಗೂ ಆರ್ಥಿಕ ವೆಚ್ಚವನ್ನು ಅಂದಾಜಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಸ್ಯಾಟ್‌ ಮಾಹಿತಿ ಸರಳೀಕರಣಗೊಳಿಸಿ: ವಿದ್ಯಾರ್ಥಿಗಳ ಸಾಧನಾ ಟ್ರ್ಯಾಕಿಂಗ್‌ ವ್ಯವಸ್ಥೆ (ಸ್ಯಾಟ್‌) ಯಲ್ಲಿ ವಿದ್ಯಾರ್ಥಿಗಳ ಹಾಜರಾತಿ, ಬಿಸಿಯೂಟ, ವಿವಿಧ ಸೌಲಭ್ಯಗಳ ವಿತರಣೆ ಮಾಹಿತಿಯನ್ನು ಪ್ರತಿದಿನ ಆನ್‌ಲೈನ್‌ ಮೂಲಕ ಅಪ್‌ಲೋಡ್‌ ಮಾಡಬೇಕಿದೆ. ಗ್ರಾಮೀಣ ಪ್ರದೇಶ ದಲ್ಲಿ ಇಂಟರ್‌ನೆಟ್‌ ಹಾಗೂ ಕಂಪ್ಯೂಟರ್‌ ಸೌಲಭ್ಯವಿಲ್ಲದ ಕಾರಣ ಮಾಹಿತಿ ಅಪ್‌ಲೋಡ್‌ ಮಾಡುವ ವಿಧಾನವನ್ನು ಸರಳೀ ಕರಣಗೊಳಿಸುವಂತೆ ಅರ್ಚನಾ ಎಂಬುವರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಸರಳೀಕರಣ ಗೊಳಿಸಲು ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

ಸರ್ಕಾರವು 4ನೇ ಶನಿವಾರವನ್ನು ಕೂಡ ಸರ್ಕಾರಿ ರಜೆ ಎಂದು ಘೋಷಿಸಿದ ಬಳಿಕ ಸರ್ಕಾರಿ ನೌಕರರ ಸಾಂದರ್ಭಿಕ ರಜೆ (ಸಿಎಲ್‌)ಯನ್ನು 15ರಿಂದ 10ಕ್ಕೆ ಇಳಿಸಿದೆ. ಆದರೆ, ಶಿಕ್ಷಕರು ಈ ಎರಡೂ ದಿನಗಳು ಕಾರ್ಯ ನಿರ್ವಹಿಸುತ್ತಿರುವುದರಿಂದ ಎಂದಿನಂತೆ 15 ರಜೆ ನೀಡಬೇಕು ಎಂದು ಶಿಕ್ಷಕ ವರ್ಗ ಮನವಿ ಮಾಡಿದೆ. ಈ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳಲು ಗಮನ ಹರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ಬೋಧನೆಗೆ ಅವಕಾಶ ನೀಡಿ: ಬಸವಕಲ್ಯಾಣ ತಾಲೂಕಿನ ಮದನ ಪಟೇಲ್, ತಾನು ಮರಾಠಿ ಮಾಧ್ಯಮದ ಶಿಕ್ಷಕನಾಗಿದ್ದು, ಕನ್ನಡ ಬೋಧನೆಗೆ ಅಗತ್ಯವಾದ ಪರೀಕ್ಷೆಗಳಲ್ಲಿ ಉತ್ತೀರ್ಣನಾಗಿದ್ದೇನೆ. ಕನ್ನಡ ಶಾಲೆಗಳಲ್ಲಿ ಬೋಧಿಸಲು ಉತ್ಸುಕನಾಗಿದ್ದೇನೆ, ಅವಕಾಶ ನೀಡಿ ಎಂದು ಮನವಿ ಮಾಡಿದರು. ಇಲಾಖೆ ಆಯುಕ್ತರು ಪ್ರತಿಕ್ರಿಯಿಸಿ, ಅಗತ್ಯ ದಾಖಲೆಗಳೊಂದಿಗೆ ಮನವಿ ಸಲ್ಲಿಸಿದರೆ ಪರಿಶೀಲಿಸುವುದಾಗಿ ತಿಳಿಸಿದರು.

ಬೇಸಿಗೆ ಸಂಭ್ರಮ: ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯುವುದಕ್ಕಾಗಿ ಆರಂಭಿಸಿದ್ದ “ಬೇಸಿಗೆ ಸಂಭ್ರಮ’ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು. “ಫೋನ್‌ ಇನ್‌ ಕಾರ್ಯಕ್ರಮ’ದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಆಟೋಟ, ಸೃಜನಶೀಲತೆ ಮತ್ತು ಕಲಿಕಾ ಮನೋಭಾವ ಉಂಟು ಮಾಡುವುದಕ್ಕಾಗಿ ಆರಂಭಿಸಿದ್ದ “ಬೇಸಿಗೆ ಸಂಭ್ರಮ’ವನ್ನು ಮರು ಆರಂಭಿಸುವಂತೆ ಸೂಚಿಸಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.