“ಮನಿಯಾರ್ಡರ್‌ ಎಕಾನಮಿ’ಗೆ ಭಾರೀ ಹೊಡೆತ

ವಲಸಿಗರು ತವರಿಗೆ ಕಳುಹಿಸುವ ಹಣ

Team Udayavani, May 19, 2020, 4:15 PM IST

“ಮನಿಯಾರ್ಡರ್‌ ಎಕಾನಮಿ’ಗೆ ಭಾರೀ ಹೊಡೆತ

ಹಾಂಕಾಂಗ್‌: ಬಹ್ರೈನ್‌ ಬ್ಯಾಕ್‌ನಲ್ಲಿ ನಿರ್ಮಾಣ ಕೆಲಸಗಾರನಾಗಿದ್ದ ಸೈಫ‌ುಲ್‌ ಇಸ್ಲಾಂ ಕಳೆದ ನಾಲ್ಕು ವರ್ಷಗಳಿಗಿಂತ ಹೆಚ್ಚು ಸಮಯದಿಂದ ತನ್ನ ಸಂಪಾದನೆಯ ಅರ್ಧಾಂಶವನ್ನು ಬಾಂಗ್ಲಾದೇಶದಲ್ಲಿನ ತನ್ನ ವೃದ್ಧ ತಂದೆ-ತಾಯಿಯರಿಗೆ ಕಳುಹಿಸುತ್ತಿದ್ದ. ಕೋವಿಡ್‌-19ರ ಅಟ್ಟಹಾಸದಿಂದಾಗಿ ಈ ವಾರದ ಆದಿಯಲ್ಲಿ 25ರ ಹರೆಯದ ಇಸ್ಲಾಂ ತನ್ನ ಕೆಲಸ ಕಳಕೊಂಡಾಗ ಹೆತ್ತವರಿಗೆ ಕಳುಹಿಸುತ್ತಿದ್ದ ಹಣವೂ ಹಠಾತ್‌ ನಿಂತುಹೋಯಿತು.

“ಈಗ ನಾನು ಮನೆಗೆ ಹಣ ಕಳುಹಿಸಲಾಗುತ್ತಿಲ್ಲ. ನನ್ನ ಕುಟುಂಬ ಸಂಕಷ್ಟದಲ್ಲಿದೆ ಮತ್ತು ಆಹಾರ ಖರೀದಿಸಲು ಹಾಗೂ ವೈದ್ಯಕೀಯ ಚಿಕಿತ್ಸೆಗೆ ನನ್ನ ವೃದ್ಧ ಹೆತ್ತವರಲ್ಲಿ ಹಣವಿಲ್ಲ’ ಎಂದು ಆತ ಸಿಎನ್‌ಎನ್‌ನೊಂದಿಗೆ ಹೇಳಿದ.

ಇದು ಇಸ್ಲಾಂ ಒಬ್ಬನ ಕತೆಯಲ್ಲ. ಕೋವಿಡ್‌ನಿಂದಾಗಿ ಜಗತ್ತಿನಾದ್ಯಂತ ಅರ್ಥವ್ಯವಸ್ಥೆಗಳು ಕುಸಿದಿವೆ ಮತ್ತು ಲಾಕ್‌ಡೌನ್‌ನಿಂದಾಗಿ ನಿರ್ಮಾಣದಂಥ ಅನೇಕ ಉದ್ದಿಮೆಗಳು ಮುಚ್ಚಿವೆ. ಇದರಿಂದಾಗಿ ವಲಸೆ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ ಮತ್ತು ಹಣಕ್ಕಾಗಿ ಅವರನ್ನು ಅವಲಂಬಿಸಿದ್ದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಕೋವಿಡ್‌ನಿಂದಾಗಿ 2020ರಲ್ಲಿ ಜಾಗತಿಕ ಹಣ ರವಾನೆ (ಮನಿಯಾರ್ಡರ್‌ ಎಕಾನಮಿ) ಶೇ. 20ರಷ್ಟು ಕುಸಿಯಲಿದೆ ಮತ್ತು ಜಗತ್ತಿನ ಕಡುಬಡವರಿಗೆ ಮಹತ್ವದ ಆದಾಯ ಮೂಲದಲ್ಲಿ 10,000 ಕೋಟಿ ಡಾಲರ್‌ಗಳ ಕಡಿತವಾಗಲಿದೆ. 2009ರಲ್ಲಿ ಜಾಗತಿಕ ಆರ್ಥಿಕ ಕುಸಿತ ಸಂಭವಿಸಿದ ವೇಳೆ ಜಾಗತಿಕ ರವಾನೆಯಲ್ಲಾಗಿದ್ದ ಕುಸಿತ ಕೇವಲ ಶೇ. 5ರಷ್ಟಿತ್ತು ಎಂದು ವಿಶ್ವ ಬ್ಯಾಂಕ್‌ ಹೇಳಿದೆ.

ಈ ಬಾರಿ ರವಾನೆಯಲ್ಲಿ ನಾವು ನಿರೀಕ್ಷಿಸಿರುವ ಇಳಿಕೆ ಇತಿಹಾಸದಲ್ಲಿ ಅಭೂತಪೂರ್ವವಾದುದು ಎಂದು ವಲಸೆ ಕುರಿತ ಅರ್ಥಶಾಸ್ತ್ರಜ್ಞ ದಿಲೀಪ್‌ ರಥ್‌ ಹೇಳುತ್ತಾರೆ. ಸುಮಾರು 80 ಕೋಟಿ ಜನರು, ಅಂದರೆ ಭೂಮಿಯಲ್ಲಿರುವ ಪ್ರತಿ 9ರಲ್ಲಿ ಒಬ್ಬ ವ್ಯಕ್ತಿ ಜೀವನೋಪಾಯಕ್ಕೆ ಹಣ ರವಾನೆಯನ್ನು ಅವಲಂಬಿಸಿದ್ದಾನೆಂದು ವಿಶ್ವ ಸಂಸ್ಥೆ ಹೇಳುತ್ತದೆ.

ರವಾನೆಯಲ್ಲಿನ ಕುಸಿತ ಅಭಿವೃದ್ಧಿಶೀಲ ರಾಷ್ಟ್ರಗಳ ಬೆಳವಣಿಗೆ ಮೇಲೆ ಕೂಡ ನಾಟಕೀಯ ಪರಿಣಾಮ ಬೀರಲಿದೆ. ಹೈಟಿ, ದಕ್ಷಿಣ ಸುಡಾನ್‌ ಮತ್ತು ಟೊಂಗಾದಂಥ ಚಿಕಣಿ ಅರ್ಥವ್ಯವಸ್ಥೆಗಳ ಜಿಡಿಪಿಯ ಮೂರನೆ ಒಂದು ಭಾಗಕ್ಕಿಂತ ಹೆಚ್ಚು ಮೊತ್ತ ರವಾನೆಯಿಂದ ಬರುತ್ತದೆ. ವಲಸಿಗರು ಕಳುಹಿಸುವ ಹಣ ಇಂಥ ರಾಷ್ಟ್ರಗಳಿಗೆ ಪ್ರಮುಖ ಆರ್ಥಿಕ ಜೀವನಾಡಿಯಾಗಿದೆ. ಬಡ ಹಾಗೂ ಸಣ್ಣ ರಾಷ್ಟ್ರಗಳು ಈ ಬಿಕ್ಕಟ್ಟಿನಿಂದ ಕುಸಿಯುವ ಅಪಾಯ ಹೆಚ್ಚು ಎಂದು ರಥ್‌ ಹೇಳುತ್ತಾರೆ. ವಿಶ್ವಾದ್ಯಂತ ಸುಮಾರು 27 ಕೋಟಿ ವಲಸಿಗರಿದ್ದಾರೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.