ತುಂಬೆ ಡ್ಯಾಂ: 4 ಮೀ. ನೀರು ಸಂಗ್ರಹ
Team Udayavani, Jun 16, 2020, 5:56 AM IST
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದ್ದಂತೆ ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಂನಲ್ಲಿ ಕೆಲವು ಗೇಟ್ಗಳನ್ನು ತೆರೆಯಲಾಗಿದ್ದು, ಪ್ರಸ್ತುತ ಡ್ಯಾಂನಲ್ಲಿ 4 ಮೀ. ಮಾತ್ರ ನೀರು ಸಂಗ್ರಹಿಸಲಾಗಿದೆ.
ತುಂಬೆ ಡ್ಯಾಂನಲ್ಲಿ ಗೇಟ್ಗಳನ್ನು ತೆರೆ ಯುತ್ತಿದ್ದಂತೆ ಅದರ ಮೇಲ್ಭಾಗದಲ್ಲಿರುವ ಪಾಣೆಮಂಗಳೂರು-ಬಂಟ್ವಾಳ ಪ್ರದೇಶದ
ನದಿಯಲ್ಲಿ ನೀರು ಗಣನೀಯ ಇಳಿಕೆ ಯಾಗಿದ್ದು, ರವಿವಾರ ಬೆಳಗ್ಗೆ 5.1 ಮೀ. ಇದ್ದ ನೀರು ಸೋಮವಾರ ಬೆಳಗ್ಗೆ 2.3 ಮೀ.ಗೆಇಳಿಕೆಯಾಗಿದೆ. ಮುಂದೆ ಮಳೆ ಹೆಚ್ಚಾಗಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದ್ದಂತೆ ತುಂಬೆಯಲ್ಲಿನ ಗೇಟ್ಗಳನ್ನು ತೆರೆಯಲಾಗುತ್ತದೆ.
ಬಂಟ್ವಾಳಕ್ಕಿಂತ ಮೇಲ್ಭಾಗದಲ್ಲಿರುವ ಶಂಭೂರು ಎಎಂಆರ್ ಡ್ಯಾಂನಲ್ಲಿ ಈಗಾಗಲೇ ವಿದ್ಯುತ್ ಉತ್ಪಾದನೆ ಆರಂಭವಾಗಿದ್ದು, ಈ ಬಾರಿ ಮಳೆಗಾಲಕ್ಕೆ ಮುಂಚಿತವಾಗಿಯೇ ಡ್ಯಾಂನಲ್ಲಿ ಹೆಚ್ಚಿನ ನೀರಿನ ಸಂಗ್ರಹ ಇದ್ದ ಕಾರಣ ಜೂನ್ ಪ್ರಾರಂಭದಲ್ಲೇ ಉತ್ಪಾದನೆಯೂ ಆರಂಭಗೊಂಡಿದೆ.
ವಿದ್ಯುತ್ ಉತ್ಪಾದನೆಯ ಹಿನ್ನೆಲೆಯಲ್ಲಿ ಶಂಭೂರು ಡ್ಯಾಂನಿಂದ ನೀರು ಹೊರಕ್ಕೆ ಹರಿದು ಬರುತ್ತಿದೆ. ಜತೆಗೆ ಘಟ್ಟ ಪ್ರದೇಶ ದಿಂದ ಹೆಚ್ಚಿನ ನೀರು ಹರಿದುಬಂದರೆ ಶಂಭೂರು ಡ್ಯಾಂಗಿಂತ ಮೇಲಿನ ಪ್ರದೇಶ ದಲ್ಲಿ ನೆರೆ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ