Karnataka: ಹುಲಿ ಉಗುರಿನ ಲಾಕೆಟ್- ಹೈಕೋರ್ಟ್ ಮೆಟ್ಟಿಲೇರಿದ ಜಗ್ಗೇಶ್
Team Udayavani, Oct 26, 2023, 10:05 PM IST
ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪ ಪ್ರಕರಣದಲ್ಲಿ ಅರಣ್ಯ ಇಲಾಖೆ ನೀಡಿರುವ ನೋಟಿಸ್ ವಿರುದ್ಧ ರಾಜ್ಯಸಭಾ ಸದಸ್ಯರೂ ಆಗಿರುವ ನಟ ಜಗ್ಗೇಶ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅರಣ್ಯ ಇಲಾಖೆ ನೀಡಿರುವ ನೋಟಿಸ್ ರದ್ದುಪಡಿಸಬೇಕು ಹಾಗೂ ಅರಣ್ಯ ಇಲಾಖೆಯವರು ಕೈಗೊಂಡ ತಪಾಸಣೆ, ಜಪ್ತಿ ಕಾನೂನು ಬಾಹಿರ ಮತ್ತು ಸಂವಿಧಾನದ ಕಲಂ 21ರ ಉಲ್ಲಂಘನೆ ಎಂದು ಘೋಷಿಸಬೇಕು. ಅರ್ಜಿಯ ವಿಚಾರಣೆ ಮುಗಿಯುವ ತನಕ ಅರಣ್ಯ ಇಲಾಖೆ ಅ.25ರಂದು ನೀಡಿರುವ ನೋಟಿಸ್ಗೆ ತಡೆ ನೀಡಬೇಕೆಂದು ಮನವಿ ಮಾಡಿ ಜಗ್ಗೇಶ್ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಅರಣ್ಯ ಇಲಾಖೆಗೆ ನೀಡಿರುವ ನೋಟಿಸ್ಗೆ ಉತ್ತರಿಸುವ ಮೊದಲೇ 14 ಮಂದಿ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ತಪಾಸಣೆ ಹೆಸರಲ್ಲಿ ರಾಜ್ಯಸಭಾ ಸದಸ್ಯನಾಗಿ ನಾನು ನಿರ್ವಹಿಸಿದ್ದ ಕೆಲ ದಾಖಲೆಗಳನ್ನು ಸೇರಿ ಇಡೀ ಮನೆಯನ್ನು ದರೋಡೆ ಮಾಡಿದ್ದಾರೆ. ಹೇಳಿಕೆ ನೀಡುವಂತೆ, ಸಹಿ ಮಾಡುವಂತೆ ಅಧಿಕಾರಿಗಳು ಬಲವಂತಪಡಿಸಿದ್ದಾರೆ. ಅಧಿಕಾರಿಗಳು ನಡೆದುಕೊಂಡ ರೀತಿ ದುರುದ್ದೇಶಪೂರಿತವಾಗಿದ್ದು, ಸಂವಿಧಾನದ ಕಲಂ 21ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಜಗ್ಗೇಶ್ ಅರ್ಜಿಯಲ್ಲಿ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..