ಮನೆ-ಮನೆಗೆ ಮಳೆಕೊಯ್ಲು ಅಳವಡಿಕೆಗೆ ಸಕಾಲ

ಮಳೆಗಾಲಕ್ಕೆ ಮುನ್ನುಡಿ

Team Udayavani, May 22, 2020, 5:57 AM IST

ಮನೆ-ಮನೆಗೆ ಮಳೆಕೊಯ್ಲು ಅಳವಡಿಕೆಗೆ ಸಕಾಲ

ವಿಶೇಷ ವರದಿ- ಮಂಗಳೂರು: ಮಂಗಳೂರು ನಗರ ಸಹಿತ ಕರಾವಳಿಯಲ್ಲಿ ಒಂದು ವಾರದಿಂದ ಆಗಾಗ ಮಳೆ ಸುರಿಯುತ್ತಿದ್ದು, ವಾಡಿಕೆಯಂತೆ ಮಳೆಗಾಲ ಆರಂಭಕ್ಕೂ ಎರಡು ವಾರಗಳಷ್ಟೇ ಬಾಕಿಯಿದೆ. ಬೇಸಗೆಯಲ್ಲಿ ಉಲ½ಣಿಸುವ ಕುಡಿಯುವ ನೀರಿನ ಸಮಸ್ಯೆ ನೀಗಿಸುವುದಕ್ಕೆ ನಮ್ಮ ಮುಂದಿರುವ ಸುಲಭ ಯೋಚನೆ-ಯೋಜನೆಯೇ ಮಳೆಕೊಯ್ಲು. ಇದನ್ನು ಅಳವಡಿಸಿಕೊಳ್ಳಲು ಇದು ಸಕಾಲವಾಗಿದೆ.

ಮಂಗಳೂರಿನಲ್ಲಿ ಕಳೆದ ಮೂರ್‍ನಾಲ್ಕು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ವಿಪರೀತವಾದರೆ, ದ.ಕ. ಮತ್ತು ಉಡುಪಿ ಜಿಲ್ಲಾದ್ಯಂತ ಕಳೆದ ವರ್ಷದ ಬೇಸಗೆ ಯಲ್ಲಿ ನೀರಿಗಾಗಿ ಪರಿತಪಿಸಿದ್ದೇ ಜಾಸ್ತಿ. ಈ ವರ್ಷದ ಮಟ್ಟಿಗೆ ಬಹುತೇಕ ಕಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿರಲಿಲ್ಲ. ಇದೇ ರೀತಿ ಬೇಸಗೆಯಲ್ಲಿನ ಜಲಕ್ಷಾಮ ದೂರಗೊಳಿಸಬೇಕಾದರೆ ಎಲ್ಲರ ಮನೆ-ಕಟ್ಟಡಗಳಲ್ಲಿಯೂ ಮಳೆಕೊಯ್ಲು ಅಳವಡಿಕೆಯಾಗಬೇಕು.

ಕಳೆದ ಬಾರಿ ಮಳೆಗಾಲ ಪ್ರಾರಂಭಕ್ಕೆ ಮುನ್ನುಡಿಯಾಗಿ “ಉದಯವಾಣಿ’ಯು “ಮನೆ-ಮನೆಗೆ ಮಳೆಕೊಯ್ಲು’ ಎನ್ನುವ ಜಲ ಸಾಕ್ಷರತಾ ಅಭಿಯಾನವನ್ನು ಸುಮಾರು 100 ದಿನಗಳ ಕಾಲ ಹಮ್ಮಿಕೊಂಡಿತ್ತು. ಜನಸಾಮಾನ್ಯರಲ್ಲಿ ನೀರು ಉಳಿತಾಯದ ಜಾಗೃತಿಗೆ ಎಲ್ಲೆಡೆಯಿಂದ ಅಭೂತಪೂರ್ವ ಬೆಂಬಲ-ಉತ್ತೇಜನ ವ್ಯಕ್ತವಾಗಿತ್ತು. ಪರಿಣಾಮವಾಗಿ ದ.ಕ. ಜಿಲ್ಲೆ ಮಾತ್ರವಲ್ಲದೆ, ನೆರೆಯ ಉಡುಪಿ, ಕಾಸರಗೋಡು, ಉತ್ತರ ಕನ್ನಡ ಜಿಲ್ಲೆ ಸಹಿತ ಸುಮಾರು 400ಕ್ಕೂ ಹೆಚ್ಚು ಮನೆಗಳಲ್ಲಿ, ಸಂಘ ಸಂಸ್ಥೆ, ಧಾರ್ಮಿಕ ಕ್ಷೇತ್ರ, ಶಾಲಾ ಕಾಲೇಜುಗಳಲ್ಲಿ ಮಳೆಕೊಯ್ಲು ಅಳವಡಿಸುವುದಕ್ಕೆ ಪ್ರೇರಣೆಯಾಗಿತ್ತು. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲಾºವಿ ಮಾರ್ಗದರ್ಶನದಲ್ಲಿ ಹಲವಾರು ಮನೆಗಳಲ್ಲಿ ಮಳೆಕೊಯ್ಲು ಅಳವಡಿಕೆಯಾಗಿದೆ.

ನಳನಳಿಸುತ್ತಿದೆ ನೀರು
ಮಳೆಕೊಯ್ಲು ಅಳವಡಿಸಿಕೊಂಡವರೆಲ್ಲ ಈ ಬಾರಿ ತಮ್ಮ ಮನೆಯ ಬಾವಿ, ಬೋರ್‌ವೆಲ್‌ಗ‌ಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿರುವುದಕ್ಕೆ ಖುಷಿಯಾಗಿದ್ದಾರೆ. ಈ ಬೇಸಗೆಯಲ್ಲಿ ನೀರಿನ ಅಭಾವ ಎದುರಾದರೂ ತಮ್ಮ ಮನೆಯ ಬಾವಿಯಲ್ಲಿ ಕಡಿಮೆಯಾಗದು ಎಂಬ ವಿಶ್ವಾಸವನ್ನು ಮೊದಲೇ ಹೊಂದಿದ್ದರು.

ಈಗ ಮತ್ತೂಂದು ಮಳೆಗಾಲಕ್ಕೆ ನಾವೆಲ್ಲ ಅಣಿಯಾಗುತ್ತಿದ್ದೇವೆ. ಮಳೆಕೊಯ್ಲು ಅಳವಡಿಸಿಕೊಳ್ಳಲು ಇದು ಪ್ರಶಸ್ತ ಸಮಯ. ಒಂದೆರಡು ಮಳೆ ಬಿದ್ದಾಗಲೇ ಮಳೆ ಕೊಯ್ಲು ಅಳವಡಿಸಿಕೊಂಡರೆ ಬಹುಶಃ ಮಳೆಗಾಲ ಕಳೆಯುವ ಹೊತ್ತಿಗೆ ಮಳೆ ನೀರು ಇಂಗಿ ಮುಂದಿನ ಬೇಸಗೆಯನ್ನು ನೀರಿನ ಬವಣೆಯಿಲ್ಲದೆ ಕಳೆಯಬಹುದು. ಸದ್ಯ ಭವಿಷ್ಯದಲ್ಲಿ ನೀರಿನ ಹಾಹಾಕಾರ ತಪ್ಪಿಸಲು ಜನ ಜಾಗ್ರತರಾಗಬೇಕೆಂಬುದೇ ಉದಯವಾಣಿಯ ಕಳಕಳಿಯಾಗಿದೆ.

ಈ ಬಾರಿಯೂ
ನಿರಂತರ ಜಾಗೃತಿ
ನಿರ್ಮಿತಿ ಕೇಂದ್ರದ ಮುಖಾಂತರ ಒಂದು ವರ್ಷದಿಂದ ನಿರಂತರವಾಗಿ ಮಳೆಕೊಯ್ಲು ಜಾಗೃತಿ ನಡೆಯುತ್ತಿದೆ. ಉದಯವಾಣಿಯ “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನಕ್ಕೆ ಪೂರಕವಾಗಿ ಮಳೆಕೊಯ್ಲು ಅಳವಡಿಸುವುದರ ಬಗ್ಗೆ ಉಚಿತವಾಗಿಯೇ ಪ್ರಾತ್ಯಕ್ಷಿಕೆ ನೀಡಲಾಗಿದೆ. ಯಾರೇ ಮಾಹಿತಿಗಾಗಿ ಕರೆದರೂ ನಿರ್ಮಿತಿ ಕೇಂದ್ರ ಉಚಿತವಾಗಿ ಮಾಹಿತಿ ಒದಗಿಸಲಿದೆ.
-ರಾಜೇಂದ್ರ ಕಲ್ಬಾವಿ, ಯೋಜನಾ ನಿರ್ದೇಶಕರು ನಿರ್ಮಿತಿ ಕೇಂದ್ರ ಸುರತ್ಕಲ್‌

ಮಳೆಕೊಯ್ಲು ಅಳವಡಿಸಿ
ಕಳೆದ ಬೇಸಗೆಯಲ್ಲಿ ನೀರಿಗಾಗಿ ಪರಿತಪಿಸುವ ಹಾಗಾಗಿತ್ತು. ಈ ವರ್ಷ ನೀರಿನ ಸಮಸ್ಯೆ ಉಂಟಾಗಿಲ್ಲ. ಆದಾಗ್ಯೂ ಮುಂದೆ ಹೇಗೆಂದು ಹೇಳಲಾಗುವುದಿಲ್ಲ. ಜನ ಈಗಿಂದಲೇ ನೀರು ಉಳಿತಾಯದ ದಾರಿಗಳನ್ನು ಕಂಡುಕೊಳ್ಳಬೇಕು. “ಉದಯವಾಣಿ’ ಕಳೆದ ವರ್ಷ ಆರಂಭಿಸಿದ್ದ ಮನೆ-ಮನೆಗೆ ಮಳೆಕೊಯ್ಲು ಅಭಿಯಾನಕ್ಕೆ ಜನ ಸ್ಪಂದನೆ ನೀಡಿದ ರೀತಿ ಉತ್ತಮವಾಗಿತ್ತು. ಈ ಬಾರಿಯೂ ಮಳೆ ನೀರಿಂಗಿಸಲು ಇದು ಪ್ರಶಸ್ತವಾದ ಸಮಯ. ಜನರು ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ನೀರಿಂಗಿಸುವುದು, ಮಳೆಕೊಯ್ಲು ಅಳವಡಿಸುವುದಕ್ಕೆ ಮುಂದಾಗಬೇಕು.
-ಡಾ| ಆರ್‌. ಸೆಲ್ವಮಣಿ,
ದ.ಕ. ಜಿಲ್ಲಾ ಪಂಚಾಯತ್‌ ಸಿಇಒ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.