Kundapura; ಹಿಂದಕ್ಕೆ ಚಲಿಸಿದ ಟಿಪ್ಪರ್: ವ್ಯಕ್ತಿ ಸಾವು
Team Udayavani, Mar 2, 2024, 9:49 PM IST
ಕುಂದಾಪುರ: ಮನೆಯ ಕೆಲಸಕ್ಕೆ ಮರಳು ತಂದಿದ್ದ ಟಿಪ್ಪರ್ ಒಮ್ಮಿಂದೊಮ್ಮೆಲೇ ಹಿಂದಕ್ಕೆ ಚಲಿಸಿದ ಪರಿಣಾಮ ಅಲ್ಲಿ ನಿಂತಿದ್ದ ಕಾಳಾವರದ ನಿವಾಸಿ ದಿ| ರಾಮಕೃಷ್ಣ ಆಚಾರ್ಯ ಅವರ ಪುತ್ರ ರಾಘವೇಂದ್ರ ಆಚಾರ್ಯ (43) ಸಾವನ್ನಪ್ಪಿದ ಘಟನೆ ಕಾಳಾವರದಲ್ಲಿ ಶುಕ್ರವಾರ ಸಂಭವಿಸಿದೆ.
ರಾಘವೇಂದ್ರ ಆಚಾರ್ಯ ಅವರು ತಮ್ಮ ಮನೆಯ ಬಾವಿಯ ಆವರಣ ಗೋಡೆ ಕಟ್ಟಲೆಂದು ತರಿಸಿದ್ದ ಮರಳನ್ನು ಟಿಪ್ಪರ್ನಿಂದ ಇಳಿಸುವ ಸಲುವಾಗಿ ಹಿಂದಕ್ಕೆ ಬರುವಂತೆ ಸೂಚಿಸುತ್ತಿದ್ದರು. ಈ ವೇಳೆ ಟಿಪ್ಪರ್ ಚಾಲಕನ ನಿಯಂತ್ರಣಕ್ಕೆ ಬಾರದೆ ಒಮ್ಮೆಲೇ ವೇಗವಾಗಿ ಹಿಂದಕ್ಕೆ ಬಂದು, ನಿಂತಿದ್ದ ರಾಘವೇಂದ್ರ ಆಚಾರ್ಯ ಅವರಿಗೆ ಢಿಕ್ಕಿ ಹೊಡೆದು, ಗೇಟಿನ ಪಿಲ್ಲರ್ಗೆ ಗುದ್ದಿದೆ. ಟಿಪ್ಪರ್ ಹಾಗೂ ಗೇಟಿನ ಪಿಲ್ಲರ್ ನಡುವೆ ಸಿಕ್ಕಿ ಹಾಕಿಕೊಂಡು ಗಂಭೀರ ಗಾಯಗೊಂಡ ರಾಘವೇಂದ್ರ ಅವರನ್ನು ಕೂಡಲೇ ಕೋಟೇಶ್ವರದ ಆಸ್ಪತ್ರೆಗೆ ಕೊಂಡೊಯ್ದರೂ, ಅದಾಗಲೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಮೃತರ ತಾಯಿ ರಾಜೀವಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ
IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ
Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ