ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…


Team Udayavani, Mar 24, 2023, 5:30 PM IST

Dark-circle

ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡುಬರುವ ಸಾಮಾನ್ಯ ಸಮಸ್ಯೆ ಡಾರ್ಕ್ ಸರ್ಕಲ್‌. ಇದು ನಿಮ್ಮ ಮುಖದ ಸೌಂದರ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ನಿದ್ರೆ ಕೊರತೆಯಿಂದಾಗಿ ಡಾರ್ಕ್‌ ಸರ್ಕಲ್ಸ್‌ ಕಾಣಿಸಿಕೊಳ್ಳುತ್ತವೆ ಎಂದು ಸಾಮಾನ್ಯವಾಗಿ ಭಾವಿಸಲಾಗುತ್ತದೆ. ಕಣ್ಣಿನ ಕೆಳವಲಯದಲ್ಲಿ ಮುಖದ ಬಣ್ಣಕ್ಕಿಂತ ಸ್ವಲ್ಪ ಹೆಚ್ಚು‌ ಪ್ರಮಾಣದಲ್ಲಿ ಕಪ್ಪಗಾಗುವ ಭಾಗಕ್ಕೆ ಡಾರ್ಕ್‌ ಸರ್ಕಲ್ಸ್‌ ಎನ್ನುತ್ತಾರೆ. ನಿದ್ರಾಹೀನತೆಯೂ ಇದಕ್ಕೆ ಒಂದು ಕಾರಣ ಆಗಿರಬಹುದು. ಅದರೊಂದಿಗೆ ಅತಿಯಾದ ಒತ್ತಡ ಅತಿಯಾಗಿ ಡಿಜಿಟಲ್‌ ಸಾಧನಗಳನ್ನು ಬಳಸುವುದು, ವಿಟಮಿನ್‌ ಕೊರತೆ, ಅನುವಂಶೀಯತೆ ಈ ಎಲ್ಲಾ ಕಾರಣಗಳಿಂದ ಕಣ್ಣಿನ ಕೆಳಗೆ ಕಪ್ಪಾಗಬಹುದು. ಚರ್ಮದಲ್ಲಿ ಮೆಲನಿನ್‌ ಅಂಶ ಕಡಿಮೆ ಇರುವವರು ಬೇರೆಯವರಿಗಿಂತ ಹೆಚ್ಚು ಈ ಸಮಸ್ಯೆ ಎದುರಿಸುತ್ತಾರೆ.

ಸೌತೆಕಾಯಿ:

ಸೌತೆಕಾಯಿಯಲ್ಲಿ ಚರ್ಮದ ಹೊಳಪು ಹೆಚ್ಚಿಸುವ ಗುಣ ಇರುವ ಕಾರಣ ಇದು ನೈಸರ್ಗಿಕವಾಗಿ ಕಣ್ಣಿನ ಸುತ್ತಲಿನ ಕಪ್ಪನ್ನು ತಿಳಿಗೊಳಿಸುತ್ತದೆ. ದಣಿದ ಕಣ್ಣುಗಳ ಒತ್ತಡ ಮತ್ತು ಆಯಾಸವನ್ನು ನಿವಾರಿಸುತ್ತದೆ. ತಂಪಾದ ಸೌತೆಕಾಯಿಯ ದಪ್ಪ ಹೋಳುಗಳನ್ನು ಕತ್ತರಿಸಿ ಕನಿಷ್ಠ ಅರ್ಧ ಗಂಟೆ ಕಣ್ಣುಗಳ ಮೇಲೆ ಇಡಿ. ನಂತರ ಉಗುರು ಬೆಚ್ಚಗಿನ ನೀರಿನಿಂದ ಕಣ್ಣುಗಳನ್ನು ತೊಳೆಯಿರಿ.

ಹಾಲು:

ಹತ್ತಿ ಉಂಡೆಯನ್ನು ಸಾಮಾನ್ಯ ಹಾಲಿನಲ್ಲಿ ಸ್ವಲ್ಪ ಸಮಯ ನೆನೆಸಿಟ್ಟು ಹತ್ತಿಯನ್ನು ಡಾರ್ಕ್ ಸರ್ಕಲ್‌ಗಳ ಮೇಲೆ ಇಟ್ಟುಕೊಳ್ಳಿ. ಕನಿಷ್ಠ 10 ನಿಮಿಷಗಳ ಕಾಲ ಅವುಗಳನ್ನು ಹಾಗೆಯೇ ಬಿಡಿ. ನಂತರ ಬೆಚ್ಚಗಿನ ನೀರಿನಿಂದ ತೊಳೆಯಿರಿ.

ರೋಸ್ ವಾಟರ್:

ರೋಸ್‌ ವಾಟರ್‌ನಲ್ಲಿ ಚರ್ಮವನ್ನು ಪುರ್ನಚೈತನ್ಯಗೊಳಿಸುವ ಗುಣವಿದೆ. ಹತ್ತಿ ಉಂಡೆಯನ್ನು ರೋಸ್ ವಾಟರ್‌ನಲ್ಲಿ ನೆನೆಸಿ. ಇದನ್ನು ಕಣ್ಣಿನ ಸುತ್ತ ಹಚ್ಚಿ ಮತ್ತು ಕನಿಷ್ಠ 20 ನಿಮಿಷಗಳ ಕಾಲ ಹಾಗೆಯೇ ಬಿಡಿ. ರೋಸ್ ವಾಟರ್ ಕಣ್ಣಿಗೆ ಮುದ ನೀಡುತ್ತದೆ.

ಗ್ರೀನ್ ಟೀ ಬ್ಯಾಗ್‌ಗಳು:

ಗ್ರೀನ್ ಟೀ ಬ್ಯಾಗ್‌ಗಳನ್ನು ನೀರಿನಲ್ಲಿ ಅದ್ದಿ 30 ನಿಮಿಷಗಳ ಕಾಲ ಫ್ರಿಜ್‌ನಲ್ಲಿಡಿ. ನಿಮ್ಮ ಕಣ್ಣುಗಳ ಮೇಲೆ ಟೀ ಬ್ಯಾಗ್‌ಗಳನ್ನು ಇರಿಸಿ ಮತ್ತು ಅವುಗಳನ್ನು 10 ರಿಂದ 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ಉಗುರು ಬೆಚ್ಚಗಿನ ನೀರಿನಿಂದ ನಿಮ್ಮ ಕಣ್ಣುಗಳನ್ನು ತೊಳೆಯಿರಿ.

ಬಾದಾಮಿ ಎಣ್ಣೆ:

ಒಂದು ಚಮಚ ಬಾದಾಮಿ ಎಣ್ಣೆಯನ್ನು ರಾತ್ರಿ ಮಲಗುವ ಮೊದಲು  ಕಣ್ಣುಗಳ ಸುತ್ತಲೂ ಹಚ್ಚಿ. ರಾತ್ರಿಯಿಡೀ ಹಾಗೆಯೇ ಬಿಡಿ. ಮರುದಿನ ಬೆಳಿಗ್ಗೆ ಮುಖ ತೊಳೆಯಿರಿ.

ಜೇನುತುಪ್ಪ:

ಜೇನುತುಪ್ಪವನ್ನು ಹತ್ತಿ ಉಣ್ಣೆಯಲ್ಲಿ ನೆನೆಸಿ. ಬಳಿಕ ಅದನ್ನು ಡಾರ್ಕ್ ಸರ್ಕಲ್ ಇರುವ ಜಾಗದಲ್ಲಿ ಹಚ್ಚಿ. ನಂತರ ಕೈಗಳಿಂದ ಮಸಾಜ್ ಮಾಡಿರಿ. 20 ನಿಮಿಷಗಳ ನಂತರ ಮುಖವನ್ನು ನೀರಿನಿಂದ ತೊಳೆಯಿರಿ.

ಉತ್ತಮ ನಿದ್ದೆ:

ಕನಿಷ್ಠ 8 ಗಂಟೆ ನಿದ್ದೆ ಅಗತ್ಯ. ಸಾಕಷ್ಟು ನಿದ್ದೆಯಿಂದ ಕಣ್ಣುಗಳ ಮೇಲೆ ಒತ್ತಡ ಕಡಿಮೆಯಾಗುತ್ತದೆ ಮತ್ತು ಡಾರ್ಕ್ ಸರ್ಕಲ್ ಗಳು ಕೂಡ ಕಡಿಮೆಯಾಗಿ ಕಾಣುವಂತೆ ಮಾಡುತ್ತದೆ.

ಆಹಾರ:

ವಿಟಮಿನ್ ಸಿ ಸಮೃದ್ಧ ಆಹಾರವನ್ನು ಹೆಚ್ಚಾಗಿ ಬಳಸಿ. ತರಕಾರಿಗಳಾದ ಪಪ್ಪಾಯಿ, ಕ್ಯಾರೆಟ್, ದಾಳಿಂಬೆ, ಕಿತ್ತಳೆ ಮುಂತಾದ ಹಣ್ಣುಗಳಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ಆಂತಿಗಳಿದ್ಟಿದು, ಇದು ಆರೋಗ್ಯಕರ ಮತ್ತು ಕಾಂತಿಯುತ ಚರ್ಮಕ್ಕೆ ಅಗತ್ಯ.

ರಾತ್ರಿ ಮಲಗುವ ಮುನ್ನ ಮುಖ ತೊಳೆದು ಮೇಕಪ್ ಸ್ವಚ್ಛಗೊಳಿಸಬೇಕು. ಮೇಕಪ್ ಉತ್ಪನ್ನಗಳಿಂದ ಅಲರ್ಜಿ ಮತ್ತು ಕಣ್ಣಿನ ಕೆಳಭಾಗದ ಕಪ್ಪಗಾಗುವ ಸಾಧ್ಯತೆಗಳಿಗೆ.  ವಾರಕ್ಕೆರಡು ಬಾರಿ ಇವುಗಳನ್ನು ಬಳಸಿ ಉತ್ತಮ ಫಲಿತಾಂಶ ಪಡೆಯಿರಿ.

*ಕಾವ್ಯಶ್ರೀ

ಟಾಪ್ ನ್ಯೂಸ್

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

web-lips

Beauty Tips: ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು….

Non-vegetarian Recipes; ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌…

Non-vegetarian Recipes; ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌…

sun-screen-lotion

Health Tips: ಬೇಸಿಗೆಯಲ್ಲಿ ತ್ವಚೆಯನ್ನು ರಕ್ಷಿಸಿಕೊಳ್ಳಲು ಈ ಲೋಷನ್ ಬಳಸಿ..

ಯಾವ ರಾಜನಿಂದಲೂ ವಶಪಡಿಸಿಕೊಳ್ಳಲು ಸಾಧ್ಯವಾಗದ ಜಂಜೀರಾ ಕೋಟೆ ಬಗ್ಗೆ ಗೊತ್ತಾ?

Fort;ಯಾವ ರಾಜನಿಂದಲೂ ವಶಪಡಿಸಿಕೊಳ್ಳಲು ಸಾಧ್ಯವಾಗದ ಜಂಜೀರಾ ಕೋಟೆ ಬಗ್ಗೆ ಗೊತ್ತಾ?

‘ಮತ್ತದೇ ಬೇಸರ, ಮತ್ತೆ ಸಂಜೆ…’ ಒದ್ದೆ ಮೈದಾನದಲ್ಲಿ ಜಾರಿ ಬಿತ್ತು RCB ಟ್ರೋಫಿ ಕನಸು

‘ಮತ್ತದೇ ಬೇಸರ, ಮತ್ತೆ ಸಂಜೆ…’ ಒದ್ದೆ ಮೈದಾನದಲ್ಲಿ ಜಾರಿ ಬಿತ್ತು RCB ಟ್ರೋಫಿ ಕನಸು

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

tdy-17

ಯಶವಂತಪುರ- ಹಾಸನಕ್ಕೆ ರೈಲು ಸೇವೆ ವಿಸ್ತರಿಸಿ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ